spot_img

ಹಿರಿಯಡ್ಕದಲ್ಲಿ ಅಯೋಧ್ಯೆ ಶ್ರೀ ರಾಮ ದೇವರ ಲೋಕಾರ್ಪಣೆಯ ಪ್ರಯುಕ್ತ ಕುಣಿತ ಭಜನಾ ಸೇವೆ

Date:

ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನ, ಹಿರಿಯಡ್ಕ ಇವರ ಆಶ್ರಯದಲ್ಲಿ ‌‌ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್, ಉಡುಪಿ ತಾಲೂಕು ನೇತೃತ್ವದಲ್ಲಿ ಹಿರಿಯಡ್ಕ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದಲ್ಲಿ ಅಯೋಧ್ಯೆ ಶ್ರೀ ರಾಮ ದೇವರ ಲೋಕಾರ್ಪಣೆಯ ಪ್ರಥಮ ವರ್ಷದ ಪ್ರಯುಕ್ತ ಸುಮಾರು 150ಕ್ಕೂ ಮಿಕ್ಕಿ ಭಜಕರಿಂದ ಏಕಕಾಲದಲ್ಲಿ ಕುಣಿತ ಭಜನಾ ಸೇವೆಗೆ ಕ್ಷೇತ್ರದ ಅರ್ಚಕರಾದ ಶ್ರೀ ಅನಂತ ಅಡಿಗರವರು ಚಾಲನೆ ನೀಡಿದರು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಹಿರಿಯಡ್ಕ ವಲಯದಿಂದ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ ಎಸ್. ವಿ. ಟಿ. ಹಿರಿಯಡ್ಕ, ಶ್ರೀ ರಾಮ ಭಜನಾ ಮಂಡಳಿ ಭಜನೆಕಟ್ಟೆ ಕೊಂಡಾಡಿ, ಶ್ರೀ ಶಿವಲಿಂಗೇಶ್ವರ ಭಜನಾ ಮಂದಿರ(ರಿ) ಬಜೆ ಅಂಜಾರು, ಶ್ರೀ ಬೈಕಾಡ್ತಿ ರಕ್ತೇಶ್ವರಿ ಭಜನಾ ಮಂಡಳಿ ಹಿರಿಯಡ್ಕ, ಶ್ರೀ ಮಹಾಲಿಂಗೇಶ್ವರ ಮಹಿಳಾ ಭಜನಾ ಮಂಡಳಿ ಕೊಂಡಾಡಿ ಕುದಿ, ಶ್ರೀ ಪಾಂಚಜನ್ಯ ಭಜನಾ ತಂಡ ಬ್ರಹ್ಮಾವರ, ಶ್ರೀ ಮುಖ್ಯಪ್ರಾಣ ಭಜನಾ ಮಂಡಳಿ ಮಾಣೈ ಹಿರಿಯಡ್ಕ ಹಾಗೂ ವಿವಿಧ ಭಜನಾ ಮಂಡಳಿಯವರು ಶ್ರೀ ರಾಮ ದೇವರಿಗೆ ಕುಣಿತ ಭಜನಾ ಸೇವೆಯನ್ನು ಭಕ್ತಿಯಿಂದ ಅರ್ಪಿಸಿದರು. 

  ಈ ಸಂದರ್ಭದಲ್ಲಿ ಕಾರ್ಯಕ್ರಮದ ಯಶಸ್ಸಿಗೆ ಅರ್ಚಕರಾದ ಶ್ರೀ ರಂಗನಾಥ ಭಟ್, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಅಧ್ಯಕ್ಷರಾದ ಶ್ರೀ ವಿಜಯ ಶೆಟ್ಟಿ ಕೊಂಡಾಡಿ, ಭಜನಾ ಮಂಡಳಿಗಳ ಪ್ರಮುಖರು,  ದೇವಸ್ಥಾನದ ಸಿಬ್ಬಂದಿಯವರು ಹಾಗೂ ಶ್ರೀ ವೀರಭದ್ರ ದೇವಸ್ಥಾನದ ಕರಸೇವಕರು ಸಹಕರಿಸಿದರು.
share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬೇಸಿಗೆಯಲ್ಲಿ ವಾಲ್ನಟ್ ಸೇವಿಸುವುದರ ಪ್ರಯೋಜನಗಳು!

ಬೇಸಿಗೆಯಲ್ಲಿ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ನೀರಿನಾಂಶದಿಂದ ಕೂಡಿದ ಹಣ್ಣುಗಳು ಮತ್ತು ತರಕಾರಿಗಳಷ್ಟೇ ಪ್ರಾಮುಖ್ಯತೆ ಡ್ರೈ ಫ್ರೂಟ್ಸ್‌ಗೂ ಇದೆ

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ನಿಷೇಧ: ವಿದ್ಯಾರ್ಥಿಗಳಿಗೆ ಅವಮಾನ, ನ್ಯಾಯಾಲಯದ ಮುಂದೆ ಪ್ರಕರಣ

ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ಯಜ್ಞೋಪವೀತ (ಜನಿವಾರ) ಧರಿಸಿದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ ಪ್ರಕರಣಗಳು ರಾಜ್ಯವ್ಯಾಪಿ ವಿವಾದವಾಗಿ ಪರಿಣಮಿಸಿದೆ.

ಸುಪ್ರೀಂಕೋರ್ಟ್ ಕಾನೂನು ರಚಿಸಿದರೆ ಸಂಸತ್ತಿನ ಅಗತ್ಯವೇನು? – ಬಿಜೆಪಿ ಸಂಸದ ನಿಶಿಕಾಂತ್ ದುಬೆಯ ವಿವಾದಾತ್ಮಕ ಹೇಳಿಕೆ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ನಿಶಿಕಾಂತ್ ದುಬೆ ಅವರು ಸುಪ್ರೀಂಕೋರ್ಟ್ ಕಾನೂನು ರಚನೆಯಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಿದರೆ ಸಂಸತ್ತನ್ನು ಮುಚ್ಚಿಬಿಡಬೇಕು ಎಂದು ವಾದಿಸಿದ್ದಾರೆ

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ವಿಚಿತ್ರ ವಿನಂತಿ: “ಪಾಸ್ ಮಾಡಿ ಸರ್, ನನ್ನ LOVE ನಿಮ್ಮ ಕೈಯಲ್ಲಿ!”

ಸ್ಎಸ್ಎಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆ ಮೌಲ್ಯಮಾಪನದ ಸಂದರ್ಭದಲ್ಲಿ ಒಂದು ವಿಚಿತ್ರ ಘಟನೆ ಬೆಳಗಾವಿಯ ಚಿಕ್ಕೋಡಿಯಲ್ಲಿ ನಡೆದಿದೆ.