spot_img

ಕೊಚ್ಚಿ ಹತ್ಯೆಯಾದ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ

Date:

ವಿಜಯಪುರ: ಭೀಮಾ ತೀರದ ಹೆಸರಾಂತ ರೌಡಿಶೀಟರ್ ಬಾಗಪ್ಪ ಹರಿಜನ ಮಂಗಳವಾರ ರಾತ್ರಿ ಭೀಕರವಾಗಿ ಹತ್ಯೆಯಾಗಿದ್ದಾರೆ. ವಿಜಯಪುರದ ರೇಡಿಯೋ ಕೇಂದ್ರದ ಬಳಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಈತನ ಮುಖ ಹಾಗೂ ದೇಹದ ವಿವಿಧ ಭಾಗಗಳಿಗೆ ಕೊಚ್ಚಿ, ಕೈ ಕತ್ತರಿಸಿ ಹತ್ಯೆ ಮಾಡಿದ್ದಾರೆ.

ಸಿಂದಗಿ ಬ್ಯಾಡಗಿಹಾಳ ಗ್ರಾಮದ ಬಾಗಪ್ಪ, ಭೀಮಾ ತೀರದ ಅಪರಾಧ ಚರಿತ್ರೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ. ಮಂಗಳವಾರ ರಾತ್ರಿ ಯಾರೋ ಕರೆ ಮಾಡಿದ ಹಿನ್ನೆಲೆಯಲ್ಲಿ ಮನೆಯಿಂದ ಹೊರಬಂದಾಗ, 7-8 ಮಂದಿಯ ತಂಡ ಈತನ ಮೇಲೆ ಪ್ರಾಣಘಾತಕ ದಾಳಿ ನಡೆಸಿ ಹತ್ಯೆ ಮಾಡಿದೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಈ ಹತ್ಯೆಯ ಸುದ್ದಿ ಭೀಮಾ ತೀರದಲ್ಲಿ ಭಯದ ವಾತಾವರಣ ಸೃಷ್ಟಿಸಿದೆ.

ಹಲವಾರು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಬಾಗಪ್ಪ ಹರಿಜನ ಮೇಲೆ 2017ರಲ್ಲಿ ವಿಜಯಪುರ ಜಿಲ್ಲಾ ಕೋರ್ಟ್ ಆವರಣದಲ್ಲಿ ಫೈರಿಂಗ್ ನಡೆದಿತ್ತು. ಆದರೆ ಅದರಿಂದ ಪಾರಾಗಿದ್ದ ಈತ, ಮಾವ ಚಂದಪ್ಪ ಹರಿಜನನ ಮಾರ್ಗದರ್ಶನದಲ್ಲಿ ಅಪರಾಧ ಲೋಕಕ್ಕೆ ಕಾಲಿಟ್ಟಿದ್ದನು ಹಾಗೂ ಶಾರ್ಪ್ ಶೂಟರ್ ಎಂದೇ ಹೆಸರುವಾಸಿಯಾಗಿದ್ದ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಮಹಾರಾಜ ಕರ್ಣಿ ಸಿಂಗ್

ಬಿಕನೆರ್ ನ ರಾಜ ವಂಶಸ್ಥ ಮಹಾರಾಜ ಸಾಧುಲ್ ಸಿಂಗ್ ದಂಪತಿಗಳಿಗೆ 1924 ಎಪ್ರಿಲ್ 21ರಂದು ಕರ್ನಿ ಸಿಂಗ್ ಜನಿಸಿದರು.

ಬೇಸಿಗೆಯಲ್ಲಿ ವಾಲ್ನಟ್ ಸೇವಿಸುವುದರ ಪ್ರಯೋಜನಗಳು!

ಬೇಸಿಗೆಯಲ್ಲಿ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ನೀರಿನಾಂಶದಿಂದ ಕೂಡಿದ ಹಣ್ಣುಗಳು ಮತ್ತು ತರಕಾರಿಗಳಷ್ಟೇ ಪ್ರಾಮುಖ್ಯತೆ ಡ್ರೈ ಫ್ರೂಟ್ಸ್‌ಗೂ ಇದೆ

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ನಿಷೇಧ: ವಿದ್ಯಾರ್ಥಿಗಳಿಗೆ ಅವಮಾನ, ನ್ಯಾಯಾಲಯದ ಮುಂದೆ ಪ್ರಕರಣ

ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ಯಜ್ಞೋಪವೀತ (ಜನಿವಾರ) ಧರಿಸಿದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ ಪ್ರಕರಣಗಳು ರಾಜ್ಯವ್ಯಾಪಿ ವಿವಾದವಾಗಿ ಪರಿಣಮಿಸಿದೆ.

ಸುಪ್ರೀಂಕೋರ್ಟ್ ಕಾನೂನು ರಚಿಸಿದರೆ ಸಂಸತ್ತಿನ ಅಗತ್ಯವೇನು? – ಬಿಜೆಪಿ ಸಂಸದ ನಿಶಿಕಾಂತ್ ದುಬೆಯ ವಿವಾದಾತ್ಮಕ ಹೇಳಿಕೆ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ನಿಶಿಕಾಂತ್ ದುಬೆ ಅವರು ಸುಪ್ರೀಂಕೋರ್ಟ್ ಕಾನೂನು ರಚನೆಯಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಿದರೆ ಸಂಸತ್ತನ್ನು ಮುಚ್ಚಿಬಿಡಬೇಕು ಎಂದು ವಾದಿಸಿದ್ದಾರೆ