ಕೊಚ್ಚಿ ಹತ್ಯೆಯಾದ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ

Date:

spot_img

ವಿಜಯಪುರ: ಭೀಮಾ ತೀರದ ಹೆಸರಾಂತ ರೌಡಿಶೀಟರ್ ಬಾಗಪ್ಪ ಹರಿಜನ ಮಂಗಳವಾರ ರಾತ್ರಿ ಭೀಕರವಾಗಿ ಹತ್ಯೆಯಾಗಿದ್ದಾರೆ. ವಿಜಯಪುರದ ರೇಡಿಯೋ ಕೇಂದ್ರದ ಬಳಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಈತನ ಮುಖ ಹಾಗೂ ದೇಹದ ವಿವಿಧ ಭಾಗಗಳಿಗೆ ಕೊಚ್ಚಿ, ಕೈ ಕತ್ತರಿಸಿ ಹತ್ಯೆ ಮಾಡಿದ್ದಾರೆ.

ಸಿಂದಗಿ ಬ್ಯಾಡಗಿಹಾಳ ಗ್ರಾಮದ ಬಾಗಪ್ಪ, ಭೀಮಾ ತೀರದ ಅಪರಾಧ ಚರಿತ್ರೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ. ಮಂಗಳವಾರ ರಾತ್ರಿ ಯಾರೋ ಕರೆ ಮಾಡಿದ ಹಿನ್ನೆಲೆಯಲ್ಲಿ ಮನೆಯಿಂದ ಹೊರಬಂದಾಗ, 7-8 ಮಂದಿಯ ತಂಡ ಈತನ ಮೇಲೆ ಪ್ರಾಣಘಾತಕ ದಾಳಿ ನಡೆಸಿ ಹತ್ಯೆ ಮಾಡಿದೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಈ ಹತ್ಯೆಯ ಸುದ್ದಿ ಭೀಮಾ ತೀರದಲ್ಲಿ ಭಯದ ವಾತಾವರಣ ಸೃಷ್ಟಿಸಿದೆ.

ಹಲವಾರು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಬಾಗಪ್ಪ ಹರಿಜನ ಮೇಲೆ 2017ರಲ್ಲಿ ವಿಜಯಪುರ ಜಿಲ್ಲಾ ಕೋರ್ಟ್ ಆವರಣದಲ್ಲಿ ಫೈರಿಂಗ್ ನಡೆದಿತ್ತು. ಆದರೆ ಅದರಿಂದ ಪಾರಾಗಿದ್ದ ಈತ, ಮಾವ ಚಂದಪ್ಪ ಹರಿಜನನ ಮಾರ್ಗದರ್ಶನದಲ್ಲಿ ಅಪರಾಧ ಲೋಕಕ್ಕೆ ಕಾಲಿಟ್ಟಿದ್ದನು ಹಾಗೂ ಶಾರ್ಪ್ ಶೂಟರ್ ಎಂದೇ ಹೆಸರುವಾಸಿಯಾಗಿದ್ದ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.