spot_img

18 ಬಿಜೆಪಿ ಶಾಸಕರ ಅಮಾನತು ರದ್ದುಗೊಳಿಸಬೇಕು: ರಾಜ್ಯಪಾಲರಿಗೆ ಬಿಜೆಪಿ ಮನವಿ

Date:

ಬೆಂಗಳೂರು: ವಿಧಾನಸಭೆಯಲ್ಲಿ ಅಮಾನತುಗೊಂಡಿರುವ 18 ಶಾಸಕರ ಅಮಾನತು ಆದೇಶವನ್ನು ರದ್ದುಗೊಳಿಸಲು ಆಗ್ರಹಿಸಿ, ಬಿಜೆಪಿ ನಿಯೋಗ ಇಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.

ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದ ನಿಯೋಗವು ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿ ಶಾಸಕರ ಅಮಾನತು ಮರುಪರಿಶೀಲಿಸಲು ಸ್ಪೀಕರ್ ಯು ಟಿ ಖಾದರ್ ಅವರಿಗೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದೆ.

“ರಾಜ್ಯದ ಪ್ರಮುಖ ವಿರೋಧ ಪಕ್ಷದಂತೆ, ನಾವು ಶಾಸಕರ ಅಮಾನತು ರದ್ದುಗೊಳಿಸುವಂತೆ ಗೌರವಪೂರ್ವಕವಾಗಿ ಕೋರುತ್ತೇವೆ. ಜನಪ್ರತಿನಿಧಿಗಳಾಗಿ ಅವರು ತಮ್ಮ ಜವಾಬ್ದಾರಿಗಳನ್ನು ಪೂರೈಸಲು ಅವಕಾಶ ನೀಡಬೇಕು” ಎಂದು ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಬಿಜೆಪಿ ಶಾಸಕರು ಈ ಮೊದಲು ಸ್ಪೀಕರ್‌ ಯು ಟಿ ಖಾದರ್ ಅವರಿಗೆ ನೇರವಾಗಿ ಭೇಟಿ ನೀಡಿ ಮತ್ತು ಪತ್ರದ ಮೂಲಕ ಮನವಿ ಸಲ್ಲಿಸಿದ್ದರೂ ಯಾವುದೇ ಸ್ಪಂದನೆ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರು ಇದೀಗ ರಾಜ್ಯಪಾಲರ ಮೆಟ್ಟಿಲು ಏರಿದ್ದಾರೆ.

ಘಟನೆ ಹಿನ್ನೆಲೆ: ಮಾರ್ಚ್ 21ರಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ ವಿರುದ್ಧದ ಹನಿಟ್ರ್ಯಾಪ್ ಆರೋಪದ ವಿಚಾರಣೆಗೆ ನ್ಯಾಯಾಂಗ ಅಥವಾ ಸಿಬಿಐ ತನಿಖೆಗೆ ಬೇಡಿಕೆ ಸಲ್ಲಿಸಿತ್ತು. ಆದರೆ ಈ ಬಗ್ಗೆ ಸ್ಪೀಕರ್‌ ಸ್ಪಷ್ಟ ಉತ್ತರ ನೀಡದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರು ಸದನದ ಬಾವಿಯಲ್ಲಿ ಪ್ರತಿಭಟನೆ ನಡೆಸಿ, ಮಸೂದೆಯ ಪ್ರತಿಗಳನ್ನು ಹರಿದು ಸ್ಪೀಕರ್ ಕುರ್ಚಿಗೆ ಎಸೆದಿದ್ದರು. ಈ ಕ್ರಮವನ್ನು ತೀವ್ರವಾಗಿ ಖಂಡಿಸಿ 18 ಶಾಸಕರನ್ನು ಆರು ತಿಂಗಳುಗಳ ಕಾಲ ಅಮಾನತುಗೊಳಿಸಲಾಗಿತ್ತು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಶಿರ್ವದ ಪಾಪನಾಶಿನಿ ನದಿಯಲ್ಲಿ ಅಕ್ರಮ ಮರಳು ದಂಧೆಗೆ ಬ್ರೇಕ್: ಹಿಟಾಚಿ, ಟಿಪ್ಪರ್ ವಶಕ್ಕೆ

ಪಾಪನಾಶಿನಿ ನದಿ ತೀರದಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಮೇಲೆ ಶಿರ್ವ ಪೊಲೀಸರು ದಾಳಿ ನಡೆಸಿ, ಹಿಟಾಚಿ ಯಂತ್ರ ಮತ್ತು ಎರಡು ಟಿಪ್ಪರ್ ಮರಳನ್ನು ವಶಪಡಿಸಿಕೊಂಡಿದ್ದಾರೆ.

ತೇಜಸ್ವಿ ಯಾದವ್ ಪತ್ನಿಯನ್ನು ‘ಜೆರ್ಸಿ ಹಸು’ ಎಂದ ಮಾಜಿ ಶಾಸಕ: ಬಿಹಾರದಲ್ಲಿ ರಾಜಕೀಯ ವಿವಾದ

ಬಿಹಾರದಲ್ಲಿ ರಾಜಕೀಯ ವಾಕ್ಸಮರ ತಾರಕಕ್ಕೇರಿದ್ದು, ಮಾಜಿ ಶಾಸಕ ರಾಜ್ ಬಲ್ಲಭ್ ಯಾದವ್ ಅವರು ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಅವರ ಪತ್ನಿ ರಾಜಶ್ರೀ ಯಾದವ್ ಅವರ ವಿರುದ್ಧ ವೈಯಕ್ತಿಕ ಟೀಕೆ ಮಾಡಿದ್ದಾರೆ.

ಯುವಕರಲ್ಲಿ ಅಧಿಕ ಕೊಲೆಸ್ಟ್ರಾಲ್ ಸಮಸ್ಯೆ

ಅಧಿಕ ಕೊಲೆಸ್ಟ್ರಾಲ್ ಸಾಮಾನ್ಯವಾಗಿ ಯಾವುದೇ ಸ್ಪಷ್ಟ ಲಕ್ಷಣಗಳನ್ನು ತೋರಿಸುವುದಿಲ್ಲ, ಆದರೆ ಅದು ದೇಹದಲ್ಲಿ ಅಪಾಯಕಾರಿ ಮಟ್ಟವನ್ನು ತಲುಪಿದಾಗ ಕೆಲವು ಚಿಹ್ನೆಗಳು ಕಾಣಿಸಿಕೊಳ್ಳಬಹುದು.

ದಿನ ವಿಶೇಷ – ರಾಷ್ಟ್ರೀಯ ವನ್ಯಜೀವಿ ಶಹೀದ್ ದಿನ

ಭಾರತದ ಅರಣ್ಯ ಸಂಪತ್ತು ಮತ್ತು ವನ್ಯಜೀವಿಗಳ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ವನರಕ್ಷಕ ಶಹೀದರ ಸ್ಮೃತಿಗೆ ಅರ್ಪಿತವಾದ ದಿನವೇ ರಾಷ್ಟ್ರೀಯ ವನ್ಯಜೀವಿ ಶಹೀದ್ ದಿನ (National Forest Martyrs Day).