spot_img

ದಲಿತ ಯುವಕನ ಮೇಲೆ ಬಿಜೆಪಿ ಬೆಂಬಲಿತರಿಂದ ಹಲ್ಲೆ: ಅಣ್ಣಪ್ಪ ನಕ್ರೆ ಆಕ್ರೋಶ

Date:

spot_img

ಕಾರ್ಕಳ : ಬೈಲೂರು ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಅಧ್ಯಕ್ಷರ ಸಂಬಂಧಿಯಾಗಿರುವಾತನಿಂದ ಅಮಾಯಕ ದಲಿತ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆಗೆ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಎಸ್.ಸಿ ಘಟಕದ ಅಧ್ಯಕ್ಷ ಅಣ್ಣಪ್ಪ ನಕ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾರ್ಕಳ ತಾಲೂಕಿನ ಬೈಲೂರು ಕೌಡೂರು ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಅಧ್ಯಕ್ಷರ ಸಂಬಂಧಿಯಾಗಿರುವಾತ ಗುಂಪು ಕಟ್ಟಿಕೊಂಡು ಅಮಾಯಕ ದಲಿತ ಯುವಕನ ಮೇಲೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿರುವುದು ಅತ್ಯಂತ ಖಂಡನೀಯ, ಈ ಘಟನೆಯಿಂದ ದಲಿತರು ಆತಂಕಗೊಂಡಿದ್ದಾರೆ.

ದಲಿತರನ್ನು ಜೀತದಾಳುಗಳಂತೆ ಕಾಣುವ ಮನುವಾದಿ ಬಿಜೆಪಿಯು ಅಧಿಕಾರದ ಬಲದಿಂದ ಇಂದು ಅಮಾಯಕ ದಲಿತರ ಮೇಲೆ ಹಲ್ಲೆ, ದೌರ್ಜನ್ಯವನ್ನು ನಡೆಸುತ್ತಿದೆ, ದಲಿತರನ್ನು ದ್ವೇಷಿಸುವ ಮನುವಾದಿಗಳ ಕೈಗೆ ಅಧಿಕಾರ ದೊರಕಿದ ಕಾರಣ ಇಂದು ದಲಿತರು ಭಯದ ವಾತಾವರಧಲ್ಲಿ ಬದುಕುವಂತಾಗಿದೆ. ಸಂವಿಧಾನವು ಜಾತಿ ಭೇದವಿಲ್ಲದೆ ಸರ್ವರಿಗೂ ಸಮಾನತೆಯನ್ನು ನೀಡಿದ್ದರೂ ದಲಿತರು ಇನ್ನೂ ಆತಂಕದಲ್ಲಿ ಬದುಕುವಂತಾಗಿರುವುದು ಖಂಡನೀಯ, ಪೋಲಿಸ್ ಇಲಾಖೆ ಕೂಡಲೇ ತಪ್ಪಿತಸ್ಥರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅಣ್ಣಪ್ಪ ನಕ್ರೆ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

AI ಕ್ರಾಂತಿ: ಆಗಸ್ಟ್‌ನಲ್ಲಿ ಓಪನ್‌ಎಐನ ಬಹುನಿರೀಕ್ಷಿತ GPT-5 ಬಿಡುಗಡೆಗೆ ಸಿದ್ಧತೆ

ಓಪನ್‌ಎಐ ತನ್ನ ನೂತನ ಮತ್ತು ಹೆಚ್ಚು ಶಕ್ತಿಶಾಲಿ GPT-5 ಮಾದರಿಯನ್ನು ಆಗಸ್ಟ್‌ನ ಆರಂಭದಲ್ಲಿ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ

ದಿನ ವಿಶೇಷ – ನಿಸರ್ಗ ಸಂರಕ್ಷಣಾ ದಿನ

ಈ ದಿನವು ನಮ್ಮ ಭೂಮಿಯ ನೈಸರ್ಗಿಕ ಸಂಪನ್ಮೂಲಗಳನ್ನು ಸಂರಕ್ಷಿಸುವ ಮತ್ತು ಸುಸ್ಥಿರವಾಗಿ ಬಳಸುವ ಮಹತ್ವವನ್ನು ನೆನಪಿಸುತ್ತದೆ.

ಆರೋಗ್ಯಕ್ಕೆ ಮಾರಕವಾಗಬಲ್ಲ ದಿನನಿತ್ಯದ ಸೊಪ್ಪು: ಕಿಡ್ನಿ ಕಲ್ಲುಗಳ ಸೃಷ್ಟಿಗೆ ಪ್ರಮುಖ ಕಾರಣ!

ನಮ್ಮ ದೇಹದ ಅತ್ಯಂತ ಪ್ರಮುಖ ಅಂಗಗಳಲ್ಲಿ ಒಂದಾದ ಮೂತ್ರಪಿಂಡಗಳು, ರಕ್ತವನ್ನು ಶುದ್ಧೀಕರಿಸಿ ವಿಷಕಾರಿ ಅಂಶಗಳನ್ನು ಹೊರಹಾಕುವ ಕಾರ್ಯವನ್ನು ನಿರಂತರವಾಗಿ ಮಾಡುತ್ತವೆ.

“ಸು ಫ್ರಮ್‌ ಸೋ” ಅಬ್ಬರ: ಸಣ್ಣ ಬಜೆಟ್, ದೊಡ್ಡ ಕಲೆಕ್ಷನ್ – ಇದು ಕಂಟೆಂಟ್ ತಾಕತ್ತು!

ಇತ್ತೀಚೆಗೆ ತೆರೆ ಬಿದ್ದಿದ್ದು, ಜೆ.ಪಿ. ತುಮಿನಾಡ್ ನಿರ್ದೇಶನದ "ಸು ಫ್ರಮ್‌ ಸೋ" ಚಿತ್ರವು ಅದ್ಭುತ ಗೆಲುವು ಸಾಧಿಸಿದೆ. ರಾಜ್ ಬಿ ಶೆಟ್ಟಿ ಅವರ ಲೈಟರ್ ಬುದ್ಧ ಫಿಲಂಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿರುವ ಈ ಚಲನಚಿತ್ರವು, ಕಥಾವಸ್ತು ಮತ್ತು ನಿರೂಪಣೆಯ ಶಕ್ತಿಗೆ ಪ್ರೇಕ್ಷಕರು ಹೇಗೆ ಸ್ಪಂದಿಸುತ್ತಾರೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.