spot_img

ಶೀಘ್ರದಲ್ಲೇ ಬಿಜೆಪಿಯ ಹೊಸ ಅಧ್ಯಕ್ಷ ಆಯ್ಕೆ ! ಏಪ್ರಿಲ್ 15ರೊಳಗೆ ಪ್ರಕ್ರಿಯೆ ಪೂರ್ಣಗೊಳ್ಳುವ ನಿರೀಕ್ಷೆ

Date:

ನವದೆಹಲಿ: ಬಿಜೆಪಿ(BJP) ತನ್ನ ಹೊಸ ರಾಷ್ಟ್ರೀಯ ಅಧ್ಯಕ್ಷರನ್ನು ಶೀಘ್ರದಲ್ಲೇ ಆಯ್ಕೆ ಮಾಡುವ ಸಾಧ್ಯತೆ ಇದೆ. ಪ್ರಸ್ತುತ ಅಧ್ಯಕ್ಷ ಜೆ.ಪಿ. ನಡ್ಡಾ (J P Nadda) ಅವರನ್ನು ಪ್ರಧಾನಿ ನರೇಂದ್ರ ಮೋದಿ(PM Modi) ಸಂಪುಟಕ್ಕೆ ಸೇರಿಸಿದ ನಂತರ, ಪಕ್ಷವು ಕಳೆದ ವರ್ಷದಿಂದ ಹೊಸ ನಾಯಕನನ್ನು ಹುಡುಕುತ್ತಿದೆ ಎಂದು ವರದಿಯಾಗಿದೆ.

NDTV ವರದಿ ಪ್ರಕಾರ, ಏಪ್ರಿಲ್ 4ರಂದು ಮುಂಗಾರು ಅಧಿವೇಶನ ಮುಗಿದ ಬಳಿಕ ಈ ಪ್ರಕ್ರಿಯೆ ಆರಂಭವಾಗುವ ಸಾಧ್ಯತೆ ಇದೆ. ಪಕ್ಷವು 13 ರಾಜ್ಯಗಳ ಅಧ್ಯಕ್ಷರನ್ನೂ ಆಯ್ಕೆ ಮಾಡಲಿದ್ದು, ಉತ್ತರ ಪ್ರದೇಶ(UP), ಕರ್ನಾಟಕ(Karnataka), ತಮಿಳುನಾಡು(Tamil Nadu), ಪಶ್ಚಿಮ ಬಂಗಾಳ(West Bengal) ಮೊದಲಾದ ರಾಜ್ಯಗಳ ಹೊಸ ರಾಜ್ಯಾಧ್ಯಕ್ಷರ ಘೋಷಣೆಯೂ ಸಾಧ್ಯ ಎಂದು ವರದಿ ತಿಳಿಸಿದೆ.

ಅಧ್ಯಕ್ಷ ಸ್ಥಾನಕ್ಕೆ ಪ್ರಮುಖ ಹೆಸರುಗಳು: ಮನೋಹರ್ ಲಾಲ್ ಖಟ್ಟರ್, ಪ್ರಹ್ಲಾದ್ ಜೋಶಿ , ಧರ್ಮೇಂದ್ರ ಪ್ರಧಾನ್ , ಅರ್ಜುನ್ ರಾಮ್ ಮೇಘವಾಲ್

ಪಕ್ಷವು ಇನ್ನೂ ಅಧಿಕೃತವಾಗಿ ಉಮೇದುವಾರಿಕೆ ದೃಢಪಡಿಸಿಲ್ಲ ಅಥವಾ ಚುನಾವಣೆಯ ವೇಳಾಪಟ್ಟಿಯನ್ನು ಘೋಷಿಸಿಲ್ಲ ಎಂದು ವರದಿ ತಿಳಿಸಿದೆ. ಎಲ್ಲಾ ಪ್ರಕ್ರಿಯೆಗಳು ಏಪ್ರಿಲ್ 15ರೊಳಗೆ ಪೂರ್ಣಗೊಳ್ಳುವ ಸಾಧ್ಯತೆ ಇದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬೇಸಿಗೆಯಲ್ಲಿ ವಾಲ್ನಟ್ ಸೇವಿಸುವುದರ ಪ್ರಯೋಜನಗಳು!

ಬೇಸಿಗೆಯಲ್ಲಿ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ನೀರಿನಾಂಶದಿಂದ ಕೂಡಿದ ಹಣ್ಣುಗಳು ಮತ್ತು ತರಕಾರಿಗಳಷ್ಟೇ ಪ್ರಾಮುಖ್ಯತೆ ಡ್ರೈ ಫ್ರೂಟ್ಸ್‌ಗೂ ಇದೆ

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ನಿಷೇಧ: ವಿದ್ಯಾರ್ಥಿಗಳಿಗೆ ಅವಮಾನ, ನ್ಯಾಯಾಲಯದ ಮುಂದೆ ಪ್ರಕರಣ

ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ಯಜ್ಞೋಪವೀತ (ಜನಿವಾರ) ಧರಿಸಿದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ ಪ್ರಕರಣಗಳು ರಾಜ್ಯವ್ಯಾಪಿ ವಿವಾದವಾಗಿ ಪರಿಣಮಿಸಿದೆ.

ಸುಪ್ರೀಂಕೋರ್ಟ್ ಕಾನೂನು ರಚಿಸಿದರೆ ಸಂಸತ್ತಿನ ಅಗತ್ಯವೇನು? – ಬಿಜೆಪಿ ಸಂಸದ ನಿಶಿಕಾಂತ್ ದುಬೆಯ ವಿವಾದಾತ್ಮಕ ಹೇಳಿಕೆ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ನಿಶಿಕಾಂತ್ ದುಬೆ ಅವರು ಸುಪ್ರೀಂಕೋರ್ಟ್ ಕಾನೂನು ರಚನೆಯಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಿದರೆ ಸಂಸತ್ತನ್ನು ಮುಚ್ಚಿಬಿಡಬೇಕು ಎಂದು ವಾದಿಸಿದ್ದಾರೆ

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ವಿಚಿತ್ರ ವಿನಂತಿ: “ಪಾಸ್ ಮಾಡಿ ಸರ್, ನನ್ನ LOVE ನಿಮ್ಮ ಕೈಯಲ್ಲಿ!”

ಸ್ಎಸ್ಎಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆ ಮೌಲ್ಯಮಾಪನದ ಸಂದರ್ಭದಲ್ಲಿ ಒಂದು ವಿಚಿತ್ರ ಘಟನೆ ಬೆಳಗಾವಿಯ ಚಿಕ್ಕೋಡಿಯಲ್ಲಿ ನಡೆದಿದೆ.