spot_img

ಶೀಘ್ರದಲ್ಲೇ ಬಿಜೆಪಿಯ ಹೊಸ ಅಧ್ಯಕ್ಷ ಆಯ್ಕೆ ! ಏಪ್ರಿಲ್ 15ರೊಳಗೆ ಪ್ರಕ್ರಿಯೆ ಪೂರ್ಣಗೊಳ್ಳುವ ನಿರೀಕ್ಷೆ

Date:

spot_img

ನವದೆಹಲಿ: ಬಿಜೆಪಿ(BJP) ತನ್ನ ಹೊಸ ರಾಷ್ಟ್ರೀಯ ಅಧ್ಯಕ್ಷರನ್ನು ಶೀಘ್ರದಲ್ಲೇ ಆಯ್ಕೆ ಮಾಡುವ ಸಾಧ್ಯತೆ ಇದೆ. ಪ್ರಸ್ತುತ ಅಧ್ಯಕ್ಷ ಜೆ.ಪಿ. ನಡ್ಡಾ (J P Nadda) ಅವರನ್ನು ಪ್ರಧಾನಿ ನರೇಂದ್ರ ಮೋದಿ(PM Modi) ಸಂಪುಟಕ್ಕೆ ಸೇರಿಸಿದ ನಂತರ, ಪಕ್ಷವು ಕಳೆದ ವರ್ಷದಿಂದ ಹೊಸ ನಾಯಕನನ್ನು ಹುಡುಕುತ್ತಿದೆ ಎಂದು ವರದಿಯಾಗಿದೆ.

NDTV ವರದಿ ಪ್ರಕಾರ, ಏಪ್ರಿಲ್ 4ರಂದು ಮುಂಗಾರು ಅಧಿವೇಶನ ಮುಗಿದ ಬಳಿಕ ಈ ಪ್ರಕ್ರಿಯೆ ಆರಂಭವಾಗುವ ಸಾಧ್ಯತೆ ಇದೆ. ಪಕ್ಷವು 13 ರಾಜ್ಯಗಳ ಅಧ್ಯಕ್ಷರನ್ನೂ ಆಯ್ಕೆ ಮಾಡಲಿದ್ದು, ಉತ್ತರ ಪ್ರದೇಶ(UP), ಕರ್ನಾಟಕ(Karnataka), ತಮಿಳುನಾಡು(Tamil Nadu), ಪಶ್ಚಿಮ ಬಂಗಾಳ(West Bengal) ಮೊದಲಾದ ರಾಜ್ಯಗಳ ಹೊಸ ರಾಜ್ಯಾಧ್ಯಕ್ಷರ ಘೋಷಣೆಯೂ ಸಾಧ್ಯ ಎಂದು ವರದಿ ತಿಳಿಸಿದೆ.

ಅಧ್ಯಕ್ಷ ಸ್ಥಾನಕ್ಕೆ ಪ್ರಮುಖ ಹೆಸರುಗಳು: ಮನೋಹರ್ ಲಾಲ್ ಖಟ್ಟರ್, ಪ್ರಹ್ಲಾದ್ ಜೋಶಿ , ಧರ್ಮೇಂದ್ರ ಪ್ರಧಾನ್ , ಅರ್ಜುನ್ ರಾಮ್ ಮೇಘವಾಲ್

ಪಕ್ಷವು ಇನ್ನೂ ಅಧಿಕೃತವಾಗಿ ಉಮೇದುವಾರಿಕೆ ದೃಢಪಡಿಸಿಲ್ಲ ಅಥವಾ ಚುನಾವಣೆಯ ವೇಳಾಪಟ್ಟಿಯನ್ನು ಘೋಷಿಸಿಲ್ಲ ಎಂದು ವರದಿ ತಿಳಿಸಿದೆ. ಎಲ್ಲಾ ಪ್ರಕ್ರಿಯೆಗಳು ಏಪ್ರಿಲ್ 15ರೊಳಗೆ ಪೂರ್ಣಗೊಳ್ಳುವ ಸಾಧ್ಯತೆ ಇದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಉಡುಪಿ ಜಿಲ್ಲೆಗೆ ವರುಣನ ಆರ್ಭಟ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಮತ್ತು ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ, ಉಡುಪಿ ಜಿಲ್ಲಾಡಳಿತವು ಮಹತ್ವದ ನಿರ್ಧಾರ ಕೈಗೊಂಡಿದೆ.

ಸಿಂಗಾಪುರಕ್ಕೆ ಚೀನಾ ಮೂಲದ ಸೈಬರ್ ಭೀತಿ: ರಾಷ್ಟ್ರೀಯ ಮಹತ್ವದ ಮೂಲಸೌಕರ್ಯಗಳ ಮೇಲೆ ಗುರಿ

ಸಿಂಗಾಪುರ ಪ್ರಸ್ತುತ ಅತಿ ಸಂಕೀರ್ಣವಾದ ಸೈಬರ್ ಆಕ್ರಮಣವನ್ನು ಎದುರಿಸುತ್ತಿದೆ, ಇದು ದೇಶದ ಭದ್ರತೆ ಮತ್ತು ಪ್ರಮುಖ ಸೇವೆಗಳ ವ್ಯವಸ್ಥೆಗಳಿಗೆ ತೀವ್ರ ಅಪಾಯವನ್ನುಂಟುಮಾಡಿದೆ

ಕಾರ್ಕಳ ಕಾಂಗ್ರೆಸ್ ನಿಂದ ಕೀಳು ಮಟ್ಟದ ರಾಜಕೀಯ – ದಿನೇಶ್ ಪೂಜಾರಿ ಬೋಳ ಗ್ರಾಮ ಪಂಚಾಯತ್ ಅಧ್ಯಕ್ಷರು

ಗ್ರಾಮ ಪಂಚಾಯತ್ ಸದಸ್ಯರ ವಿರುದ್ಧ ಕಾರ್ಕಳ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಬೋಳ ಗ್ರಾಮ ಪಂಚಾಯತ್ ಮುಂಬಾಗ ಮಾಡಿರುವ ಪ್ರತಿಭಟನೆಯು ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಸರಣಿ ವೈಫಲ್ಯವನ್ನು ಮರೆಮಾಚಲು ಮಾಡಿರುವ ನಾಟಕವಾಗಿದೆ.

“ನೀವೇ ದುಡಿಯಬಹುದಲ್ಲ?”: ₹12 ಕೋಟಿ ಜೀವನಾಂಶ ಕೋರಿದ್ದ ಮಹಿಳೆಗೆ ಸುಪ್ರೀಂ ತರಾಟೆ!

ವೈವಾಹಿಕ ವಿವಾದ ಪ್ರಕರಣವೊಂದರಲ್ಲಿ ₹12 ಕೋಟಿ ಜೀವನಾಂಶ, ಬಿಎಂಡಬ್ಲ್ಯೂ ಕಾರು ಮತ್ತು ಮುಂಬೈನಲ್ಲಿ ಮನೆಯನ್ನು ಪರಿಹಾರವಾಗಿ ನೀಡಬೇಕೆಂದು ಕೋರಿದ್ದ ಮಹಿಳೆಯೊಬ್ಬರಿಗೆ, "ತಾವೇ ದುಡಿಯಬಹುದಲ್ಲವೇ?" ಎಂದು ಸುಪ್ರೀಂ ಕೋರ್ಟ್ ತೀವ್ರವಾಗಿ ಪ್ರಶ್ನಿಸಿದೆ.