spot_img

ಮಂಗಳೂರಿನಲ್ಲಿ ಬೆಂಕಿ ಹಚ್ಚಲು ಬಿಜೆಪಿ ಮಾಡಿದ ಪ್ರಯತ್ನ ವಿಫಲ : ಸಚಿವ ಗುಂಡೂರಾವ್ ಆಕ್ರೋಶ

Date:

spot_img

ದಕ್ಷಿಣ ಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ಸುಹಾಸ್ ಶೆಟ್ಟಿ ಪ್ರಕರಣದ ಹಿನ್ನಲೆಯಲ್ಲಿ ಬಿಜೆಪಿ ಮಂಗಳೂರಿನಲ್ಲಿ ಕೋಮು ಅಶಾಂತಿ ಉಂಟುಮಾಡುವ ಯತ್ನಕ್ಕೆ ಮುಂದಾಗಿತ್ತು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಹಿನ್ನೆಲೆಯಲ್ಲಿ ದಿನೇಶ್ ಗುಂಡೂರಾವ್ ಹಾಗೂ ಸ್ಪೀಕರ್ ಖಾದರ್ ಭಾಗವಹಿಸಿದ್ದರು.

ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸುಧಾರಿತ ಸ್ಥಿತಿಯಲ್ಲಿದ್ದು, ಪೊಲೀಸರು ಅಲರ್ಟ್‌ ಆಗಿದ್ದಾರೆ ಎಂದರು. ಯಾವುದೇ ಪ್ರಚೋದನಕಾರಿ ಭಾಷಣಗಳು ಅಥವಾ ಸಾಮಾಜಿಕ ಜಾಲತಾಣಗಳಲ್ಲಿ ಹಂಚಲ್ಪಡುವ ಸೂಕ್ಷ್ಮ ವಿಷಯಗಳ ಮೇಲೆ ಪೊಲೀಸರು ನಿಗಾ ಇಟ್ಟಿದ್ದಾರೆ ಎಂದು ತಿಳಿಸಿದರು.

ಸುಹಾಸ್ ಶೆಟ್ಟಿ ಪ್ರಕರಣದ ಪ್ಲಾನ್ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲಾಯಿತು ಎಂದು ಗುಂಡೂರಾವ್ ಆರೋಪಿಸಿದರು. “ಮಂಗಳೂರಿನಲ್ಲಿ ಧರ್ಮ ಆಧಾರಿತ ಸಂಘಟನೆಗಳು ಸಮಾಜದಲ್ಲಿ ಭಿನ್ನತೆ ಉಂಟುಮಾಡಲು ಪ್ರಯತ್ನಿಸುತ್ತಿವೆ. ಬಿಜೆಪಿಯ ಬೆಂಕಿ ಹಚ್ಚುವ ಪ್ರಯೋಗವನ್ನು ನಮ್ಮ ಸರ್ಕಾರ ವಿಫಲಗೊಳಿಸಿದೆ,” ಎಂದರು.

ಅಂತೆಯೇ ಬಿಜೆಪಿ ನಾಯಕರಿಗೆ ಸಂದೇಶ ನೀಡಿದ ಅವರು, “ಸೌಹಾರ್ದತೆ ಮತ್ತು ಶಾಂತಿಗೆ ಎಲ್ಲರೂ ಬದ್ಧರಾಗಬೇಕು. ರಾಜಕೀಯ ಬೇರೆ, ಆದರೆ ಕೋಮು ಶಾಂತಿ ಉಳಿಸಲು ನಾವು ಕೈಜೋಡಿಸಬೇಕು,” ಎಂದಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಉಪರಾಷ್ಟ್ರಪತಿ ಸ್ಥಾನಕ್ಕೆ ಕರ್ನಾಟಕ ಮೂಲದ ನ್ಯಾಯಮೂರ್ತಿ ಅಬ್ದುಲ್ ನಝೀರ್ ಹೆಸರು ಮುಂಚೂಣಿಯಲ್ಲಿ

ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ತಮ್ಮ ಸ್ಥಾನಕ್ಕೆ ಅನಿರೀಕ್ಷಿತವಾಗಿ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ, ಈ ಮಹೋನ್ನತ ಹುದ್ದೆಗೆ ಕರ್ನಾಟಕದ ಹೆಮ್ಮೆಯ ಪುತ್ರ, ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಸ್. ಅಬ್ದುಲ್ ನಝೀರ್ ಅವರ ಹೆಸರು ಪ್ರಬಲವಾಗಿ ಕೇಳಿಬರುತ್ತಿದೆ.

ಧರ್ಮಸ್ಥಳ ದುರಂತಗಳ ಆಳಕ್ಕೆ ಇಳಿಯಲು ಸಹಾಯವಾಣಿ ಸ್ಥಾಪನೆಗೆ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಶವ ವಿಲೇವಾರಿ ಪ್ರಕರಣವು ಇದೀಗ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಬೋಳದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಅಡ್ಡಿಪಡಿಸಿದ ಬಿಜೆಪಿ ಗ್ರಾ. ಪಂ ಸದಸ್ಯರ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

ಬಿಜೆಪಿ ಪಂಚಾಯತ್ ಸದಸ್ಯರ ದುರ್ನಡತೆಯ ವಿರುದ್ದ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಹಾಗೂ ಬೋಳ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಜಂಟಿ ಆಶ್ರಯದಲ್ಲಿ ಬೋಳ ಗ್ರಾಮ ಪಂಚಾಯತ್ ಕಚೇರಿ ಮುಂಬಾಗದಲ್ಲಿ ಪ್ರತಿಭಟನಾ ಸಭೆ ನಡೆಯಿತು.

ಎಂ.ಆರ್.ಐ. ಯಂತ್ರದಿಂದ ಲೋಹದ ಆಭರಣ ಧರಿಸಿದ ವ್ಯಕ್ತಿಯ ಸಾವು!

ವೈದ್ಯಕೀಯ ಜಗತ್ತಿನಲ್ಲಿ ಅಪರೂಪದ ಆದರೆ ಅತ್ಯಂತ ಗಂಭೀರವಾದ ದುರಂತವೊಂದು ಅಮೆರಿಕದ ನ್ಯೂಯಾರ್ಕ್‌ನಲ್ಲಿ ಸಂಭವಿಸಿದ್ದು, ಮ್ಯಾಗ್ನೆಟಿಕ್ ರೆಸೋನೆನ್ಸ್ ಇಮೇಜಿಂಗ್ (ಎಂ.ಆರ್.ಐ.) ಸ್ಕ್ಯಾನ್ ಯಂತ್ರದ ಪ್ರಬಲ ಕಾಂತೀಯ ಕ್ಷೇತ್ರಕ್ಕೆ ಸೆಳೆದುಕೊಂಡು ವ್ಯಕ್ತಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ