spot_img

ಹವಾಮಾನ ವೈಪರೀತ್ಯದಿಂದ ಕರಿಮೆಣಸಿನ ಬೆಲೆ ಗಗನಕ್ಕೆ! ಕೆಜಿಗೆ ₹1100 ತಲುಪುವ ಅಂದಾಜು!

Date:

ಬೆಂಗಳೂರು: ಕರಿಮೆಣಸು (Black Pepper) ದರ ಕಳೆದ ಎರಡು ವರ್ಷಗಳಲ್ಲಿ ಶೇ. 40ರಷ್ಟು ಏರಿಕೆಯಾಗಿದೆ. ಪೂರೈಕೆ ಕೊರತೆ ಹಾಗೂ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂದೆ ಇದರ ದರ ಮತ್ತಷ್ಟು ಏರಬಹುದು ಎಂದು ವರದಿಯಾಗಿದೆ. ಇದೀಗ ಕಾಳು ಮೆಣಸು ಕೆಜಿಗೆ ₹900ರಿಂದ ₹1,100 ರವರೆಗೆ ದರ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಕೃಷಿ ಸಂಘಗಳು ಹೇಳಿವೆ.

ಕರ್ನಾಟಕದಲ್ಲಿ ಹವಾಮಾನ ಬದಲಾವಣೆ, ಅಕಾಲಿಕ ಮಳೆಯಂತಹ ಅನಿಯಂತ್ರಿತ ಪರಿಸ್ಥಿತಿಗಳಿಂದಾಗಿ ಕೊಡಗು, ಚಿಕ್ಕಮಗಳೂರು ಮುಂತಾದ ಪ್ರಮುಖ ಪ್ರದೇಶಗಳಲ್ಲಿ ಮೆಣಸು ಬೆಳೆ ತುಂಬಾ ಕುಸಿತ ಕಂಡಿದೆ. ಬೆಳೆಗಳಿಗೆ ರೋಗಬಾಧೆ ಸಹ ಸಂಭವಿಸಿದ್ದು, ಇದರಿಂದ ಕೃಷಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ.

ವಿಯಟ್ನಾಂ ಮತ್ತು ಬ್ರೆಜಿಲ್‌ನಂತಹ ಕಾಳು ಮೆಣಸು ಉತ್ಪಾದಕ ರಾಷ್ಟ್ರಗಳಲ್ಲಿ ಸಹ ಕೊಯ್ಲು ಕಡಿಮೆಯಾಗಿದೆ. ಇದರಿಂದ ಜಾಗತಿಕ ಪೂರೈಕೆ ಹೊರೆಗೆ ಒತ್ತಡ ಉಂಟಾಗಿ, ಭಾರೀ ಬೆಲೆ ಏರಿಕೆಗೆ ಕಾರಣವಾಗಿದೆ ಎಂದು ಕರ್ನಾಟಕ ಸಾಂಬಾರು ಸಂಘ ಹಾಗೂ ಚಿಕ್ಕಮಗಳೂರು ಪಾಂಟರ್ಸ್ ಅಸೋಸಿಯೇಷನ್ ತಿಳಿಸಿವೆ.

ಕರಿಮೆಣಸು ಬೆಳೆಯಲು ತೇವಾಂಶವುಳ್ಳ ಗಾಳಿ, ನೆರಳು ಪ್ರದೇಶ ಹಾಗೂ ನೀರಿನ ಅಂಶವಿರುವ ಮಣ್ಣು ಬೇಕಾಗುತ್ತದೆ. ಪಶ್ಚಿಮ ಘಟ್ಟ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ಇದಕ್ಕೆ ಪೂರಕ ವಾತಾವರಣ ಇದ್ದರೂ, ಹವಾಮಾನ ವೈಪರೀತತೆ ಈ ಬಾರಿ ಬೆಳೆಯಲ್ಲಿ ಸ್ಥಿರತೆ ಕಾಪಾಡಿಕೊಳ್ಳಲು ದೊಡ್ಡ ಸವಾಲಾಗಿದೆ ಎಂದು ರೈತರು ಹೇಳುತ್ತಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಸುದ್ದಿ ವಾಹಿನಿಯ ಕ್ಯಾಮರಾ ಮ್ಯಾನ್ ಸಂದೀಪ್ ಪೂಜಾರಿ ನಿಧನ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಮತ್ತು ಈಟಿವಿ ಭಾರತ್‌ನ ಜಿಲ್ಲಾ ವರದಿಗಾರರಾದ ಸಂದೀಪ್ ಪೂಜಾರಿ (37) ಅವರು ಏಪ್ರಿಲ್ 20ರಂದು ಬೆಳಗ್ಗೆ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾದರು.

ಹಿಂದೂಗಳೇ “ಒಂದೇ ದೇಗುಲ, ಒಂದೇ ಬಾವಿ, ಒಂದೇ ಸ್ಮಶಾನ” ತತ್ವದೊಂದಿಗೆ ಜಾತಿ ಭೇದಕ್ಕೆ ತೆರೆ ಹಾಕೋಣ: ಭಾಗವತ್ ಕರೆ

ಅಲಿಗಢದಲ್ಲಿ ಮೋಹನ್ ಭಾಗವತ್ ರವರು , “ಒಂದೇ ದೇಗುಲ, ಒಂದೇ ಬಾವಿ, ಒಂದೇ ಸ್ಮಶಾನ” ತತ್ವದಿಂದ ಜಾತಿ ಭೇದ ನಿವಾರಿಸೋಣ” ಎಂದರು.

“ಮುಂದಿನ ಚುನಾವಣೆಯಲ್ಲಿ ತುಳುನಾಡಿನಿಂದ ಕನಿಷ್ಠ ಹತ್ತು ಕಾಂಗ್ರೆಸ್ ಶಾಸಕರು ಆಯ್ಕೆಯಾಗಲಿದ್ದಾರೆ.” : ಡಿಕೆ ಶಿವಕುಮಾರ್

ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ಭಾನುವಾರ ನಡೆದ "ಸರಕಾರದ ನಡೆ, ಕಾರ್ಯಕರ್ತರ ಕಡೆ" ಎಂಬ ಕಾರ್ಯಕರ್ತರ ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿದರು.

ಉಜಿರೆಯಲ್ಲಿ ಅಕ್ರಮ ಕೂಟ, ಶಾಂತಿ ಭಂಗ: ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲು!

ಉಜಿರೆಯಲ್ಲಿ ಶಾಂತಿ ಭಂಗ ಆರೋಪಕ್ಕೆ ಮಹೇಶ್ ತಿಮರೋಡಿ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲು.