spot_img

ಬಟ್ಟೆ ಬಿಚ್ಚಿಸಿ ವಿಡಿಯೋ ಬ್ಲಾಕ್‌ಮೇಲ್: ಮೈಸೂರಿನಲ್ಲಿ ಹನಿಟ್ರ್ಯಾಪ್ ಜಾಲ ಭೇದಿಸಿದ ಖಾಕಿ ಪಡೆ!

Date:

ಮೈಸೂರು: ಸುಂದರ ಯುವತಿಯರನ್ನು ಬಳಸಿಕೊಂಡು ಉದ್ಯಮಿಗಳಿಗೆ ಬಲೆ ಬೀಸುತ್ತಿದ್ದ ‘ಹನಿಟ್ರ್ಯಾಪ್’ ಜಾಲವನ್ನು ಮೈಸೂರು ಪೊಲೀಸರು ಭೇದಿಸಿದ್ದಾರೆ. ತಿಂಗಳುಗಳಿಂದ ಪೊಲೀಸರ ಕಣ್ತಪ್ಪಿಸಿ ಕೇರಳದಲ್ಲಿ ತಲೆಮರೆಸಿಕೊಂಡಿದ್ದ ಮುಖ್ಯ ಆರೋಪಿಗಳಾದ ಸೈಫ್ ಮತ್ತು ಕವನ ಜೋಡಿಯನ್ನು ಬಂಧಿಸಲಾಗಿದೆ.

ಪ್ರಕರಣದ ವಿವರ: ಪಿರಿಯಾಪಟ್ಟಣ ತಾಲೂಕಿನ ಕಂಪಲಾಪುರದ ಬಟ್ಟೆ ವ್ಯಾಪಾರಿ ದಿನೇಶ್ ಕುಮಾರ್ ಅವರು ಈ ಹನಿಟ್ರ್ಯಾಪ್ ಜಾಲದ ಬಲೆಗೆ ಬಿದ್ದಿದ್ದರು. ಕವನಾಳ ಆಕರ್ಷಣೆಗೆ ಮರುಳಾಗಿದ್ದ ದಿನೇಶ್‌ರನ್ನು ಆರೋಪಿಗಳು ಏಕಾಂತದ ಕ್ಷಣದಲ್ಲಿ ಸೆರೆಹಿಡಿದಿದ್ದರು. ನಂತರ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಇಟ್ಟುಕೊಂಡು ಬರೋಬ್ಬರಿ 10 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟು, ಹಣ ನೀಡದಿದ್ದರೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಈ ಸಂಬಂಧ ದಿನೇಶ್ ಕುಮಾರ್ ಬೈಲಕುಪ್ಪೆ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪೊಲೀಸ್ ಪೇದೆಯ ಕೈವಾಡ: ಪ್ರಕರಣದ ತನಿಖೆ ನಡೆಸಿದಾಗ, ಈ ಹನಿಟ್ರ್ಯಾಪ್ ಜಾಲದ ಹಿಂದೆ ಪೊಲೀಸ್ ಇಲಾಖೆಯ ಸಿಬ್ಬಂದಿಯೊಬ್ಬರ ಕೈವಾಡ ಇರುವುದು ಬೆಳಕಿಗೆ ಬಂದಿತ್ತು. ಪ್ರಕರಣದಲ್ಲಿ ಭಾಗಿಯಾಗಿದ್ದ ಪೊಲೀಸ್ ಪೇದೆ ಶಿವಣ್ಣನನ್ನು ಈಗಾಗಲೇ ಬಂಧಿಸಿ ಜೈಲಿಗಟ್ಟಲಾಗಿದೆ. ರಕ್ಷಕರೇ ಭಕ್ಷಕರಾದ ಈ ಘಟನೆ ಇಡೀ ಪೊಲೀಸ್ ಇಲಾಖೆಗೆ ಮುಜುಗರ ತಂದಿಟ್ಟಿತ್ತು.

ಕೇರಳದಲ್ಲಿ ಸೆರೆ: ಪೇದೆ ಶಿವಣ್ಣ ಬಂಧನಕ್ಕೊಳಗಾದ ತಕ್ಷಣ, ಪ್ರಮುಖ ಆರೋಪಿಗಳಾದ ಕವನ ಮತ್ತು ಸೈಫ್ ರಾಜ್ಯ ಬಿಟ್ಟು ಕೇರಳಕ್ಕೆ ಪರಾರಿಯಾಗಿದ್ದರು. ಆದರೆ, ಪಟ್ಟು ಬಿಡದ ಮೈಸೂರು ಪೊಲೀಸರು, ಎಸ್‌ಪಿ ವಿಷ್ಣುವರ್ಧನ್ ಅವರ ಮಾರ್ಗದರ್ಶನದಲ್ಲಿ, ಬೈಲಕುಪ್ಪೆ ಪಿಎಸ್‌ಐ ರವಿಕುಮಾರ್ ನೇತೃತ್ವದ ವಿಶೇಷ ತಂಡ ಕೇರಳಕ್ಕೆ ತೆರಳಿತ್ತು. ಕಣ್ಣೂರಿನ ಲಾಡ್ಜ್‌ವೊಂದರಲ್ಲಿ ಅಡಗಿಕೊಂಡಿದ್ದ ಈ ಜೋಡಿಯನ್ನು ಸಿಬ್ಬಂದಿಗಳಾದ ವಿಜಯ್ ಪವರ್, ಮುದ್ದುರಾಜ್, ಹಾಗೂ ಮಹಿಳಾ ಪೇದೆ ಅಶ್ವಿತಾ ಅವರು ಖಚಿತ ಮಾಹಿತಿ ಆಧರಿಸಿ ಬಲೆ ಬೀಸಿ ಹಿಡಿದಿದ್ದಾರೆ.

ಸದ್ಯ ಆರೋಪಿ ಜೋಡಿಯನ್ನು ಮೈಸೂರಿಗೆ ಕರೆತಂದಿರುವ ಬೈಲಕುಪ್ಪೆ ಪೊಲೀಸರು, ಕೃತ್ಯ ನಡೆದ ಸ್ಥಳಗಳಿಗೆ ಕರೆದೊಯ್ದು ಮಹಜರು ನಡೆಸುತ್ತಿದ್ದಾರೆ. ತನಿಖೆ ವೇಳೆ ಈ ಜೋಡಿ ರಾಜ್ಯದ ಬೇರೆಡೆಗಳಲ್ಲೂ ಇದೇ ರೀತಿಯ ಹನಿಟ್ರ್ಯಾಪ್ ನಡೆಸಿರುವ ಸಾಧ್ಯತೆಗಳಿದ್ದು, ಆ ನಿಟ್ಟಿನಲ್ಲೂ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

“ನನಗೆ ಸ್ವಲ್ಪ ವಿಷ ಕೊಡಿ” ಎಂದು ಕೋರ್ಟ್ ನಲ್ಲಿ ಕಣ್ಣೀರಿಟ್ಟ ದರ್ಶನ್

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್, ಮಂಗಳವಾರ ಬೆಂಗಳೂರಿನ ಕೋರ್ಟ್‌ನಲ್ಲಿ ಮನವಿಯೊಂದನ್ನು ಮಾಡಿದ್ದಾರೆ.

‘ಸು ಫ್ರಮ್‌ ಸೋʼ ಚಿತ್ರ ಒಟಿಟಿಗೆ ಲಗ್ಗೆ: 7 ನಿಮಿಷಗಳ ದೃಶ್ಯಕ್ಕೆ ಕತ್ತರಿ?

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಈ ವರ್ಷ ದೊಡ್ಡ ಹಿಟ್ ಆಗಿ ಹೊರಹೊಮ್ಮಿದ ಹಾರರ್-ಕಾಮಿಡಿ ʼಸು ಫ್ರಮ್ ಸೋʼ ಈಗ ಒಟಿಟಿಗೆ ಬಂದಿದೆ. ಥಿಯೇಟರ್‌ಗಳಲ್ಲಿ 45 ದಿನಗಳ ಯಶಸ್ವಿ ಪ್ರದರ್ಶನದ ಬಳಿಕ, ಈ ಚಿತ್ರ ಇಂದು (ಸೆಪ್ಟೆಂಬರ್ 9) ಜಿಯೋ ಸಿನಿಮಾ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಪ್ರಸಾರ ಆರಂಭಿಸಿದೆ.

ಬಜಗೋಳಿ ವಲಯ ಮಟ್ಟದ ಕ್ರೀಡಾಕೂಟ: ಇರ್ವತ್ತೂರು ಶಾಲೆಗೆ ನಾಲ್ಕು ಪ್ರಥಮ ಪ್ರಶಸ್ತಿಗಳು

ಬಜಗೋಳಿ ವಲಯ ಮಟ್ಟದ 14 ವರ್ಷದೊಳಗಿನ ಬಾಲಕ-ಬಾಲಕಿಯರ ವಾಲಿಬಾಲ್ ಮತ್ತು ತ್ರೋಬಾಲ್ ಪಂದ್ಯಾಟದಲ್ಲಿ ಇರ್ವತ್ತೂರು ಶಾಲೆಯು ಭರ್ಜರಿ ಸಾಧನೆ ಮಾಡಿದೆ. ಸ್ಪರ್ಧಿಸಿದ ನಾಲ್ಕೂ ವಿಭಾಗಗಳಲ್ಲಿ ಪ್ರಥಮ ಪ್ರಶಸ್ತಿಗಳನ್ನು ಗೆಲ್ಲುವ ಮೂಲಕ ಶಾಲೆಯು ಹೊಸ ದಾಖಲೆಯನ್ನು ನಿರ್ಮಿಸಿದೆ.

ದಿನ ವಿಶೇಷ – ಕ್ಯಾಪ್ಟನ್ ವಿಕ್ರಮ್ ಬತ್ರಾ ಜನ್ಮದಿನ

ನಮ್ಮ ದೇಶದ ಇತಿಹಾಸದಲ್ಲಿ ದೇಶಭಕ್ತಿ ಮತ್ತು ಧೈರ್ಯದ ಸಂಕೇತವಾಗಿ ನಿಂತಿರುವ ಹೆಸರುಗಳಲ್ಲಿ ಕ್ಯಾಪ್ಟನ್ ವಿಕ್ರಮ್ ಬತ್ರಾ ಅವರದ್ದು ಅಮರ