spot_img

ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ ಪುಣ್ಯಸ್ಮರಣೆ ಆಚರಣೆ

Date:

spot_img

ರಕ್ತದಾನ ಶಿಬಿರ, ಸಸಿ ವಿತರಣೆ ಹಾಗೂ ಸಹಾಯ ಧನ ವಿತರಣೆ

ಕಾರ್ಕಳ : ಸ್ವರ್ಗೀಯ ಗೋಪಾಲ ಭಂಡಾರಿಯವರು ಕಾರ್ಕಳ ವಿಧಾನ ಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಸಾಧಕರು . ಒಬ್ಬ ಶಾಸಕರಾಗಿ ಸಾಂವಿಧಾನಿಕ ಮೌಲ್ಯದಡಿಯಲ್ಲಿ ಕಾರ್ಯ ನಿರ್ವಹಿಸಿ ಸರಕಾರದ ಸೌಲಭ್ಯಗಳನ್ನು ಜನರಿಗೆ ತಲಪಿಸುವಲ್ಲಿ ಯಶಸ್ವಿಯಾದವರು. ಭೂ ಸುಧಾರಣಾ ಮಸೂದೆಯನ್ನು ಯಶಸ್ವಿಯಾಗಿ ಜಾರಿ ಮಾಡುವಲ್ಲಿ ಗೇಣಿದಾರರ ಪರವಾಗಿ ಅಹರ್ನಿಷಿ ದುಡಿದವರು. ಅವರ ರಾಜಕೀಯ ಮತ್ತು ಸಾಮಾಜಿಕ ಬದುಕು ನಮಗೆಲ್ಲರಿಗೂ ಆದರ್ಶವಾಗಿದೆ ಎಂದು ಕಾಂಗ್ರೆಸ್ ನಾಯಕ ಉದಯ ಕುಮಾರ್ ಶೆಟ್ಟಿ ಮುನಿಯಾಲು ಹೇಳಿದರು.

ಅವರು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಆಯೋಜಿಸಿದ್ದ ದಿ. ಗೋಪಾಲ ಭಂಡಾರಿಯವರ 6ನೇ ಪುಣ್ಯಸ್ಮರಣೆ ಕಾರ್ಯಕ್ರಮದ ನಿಮಿತ್ತ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಕಾರ್ಕಳ ದೇವಾಡಿಗ ಸುಧಾರಕ ಸಂಘದ ಸಭಾಂಗಣದಲ್ಲಿ ನಡೆದ ನುಡಿ ನಮನ ಹಾಗೂ ರಕ್ತದಾನ ಶಿಬಿರದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತಾಡಿದರು.

ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರ ಪಾಲ್ ನಕ್ರೆ ಮಾತನಾಡಿ ದಿವಂಗತ ಗೋಪಾಲ ಭಂಡಾರಿಯವರು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿಯವರ ಜನಪರ ಕಾರ್ಯಸಾಧನೆಗಳನ್ನು ಜನ ಮಾನಸಕ್ಕೆ ತಲಪಿಸಿದವರು. ಎರಡು ಅವಧಿಗೆ ಕ್ಷೇತ್ರದ ಶಾಸಕರಾಗಿ ವಿಧಾನ ಸಭೆಯಲ್ಲಿ ಹೆಬ್ರಿ ತಾಲೂಕು ಘೋಷಣೆಯ ಬಗ್ಗೆ ಧ್ವನಿ ಎತ್ತಿ ಅದನ್ನು ಸಾಧಿಸಿ ತೋರಿಸಿದವರು. ಕ್ಷೇತ್ರದ ಯುವ ರಾಜಕಾರಿಣಿಗಳು ಅವರ ಆದರ್ಶವನ್ನು ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಹಿರಿಯ ನ್ಯಾಯವಾದಿ ಶೇಖರ ಮಡಿವಾಳ ಮಾತನಾಡಿ ಕಾರ್ಕಳದ ವಿಧಾನ ಸಭಾ ಕ್ಷೇತ್ರಕ್ಕೆ ಭಂಡಾರಿಯವರ ಋಣವಿದೆ. ಆಶ್ರಯ ಯೋಜನೆ, ಅಕ್ರಮ ಸಕ್ರಮ, 94ಸಿ ಮತ್ತು ಸಿಸಿ ಯಶಸ್ವೀ ಅನುಷ್ಠಾನ , ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಅವರ ಸಾಧನೆ ಅಪಾರ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿ ದಿ. ಗೋಪಾಲ ಭಂಡಾರಿಯವರು ಯುವ ಜನಾಂಗದ ಪ್ರಾತಃ ಸ್ಮರಣೀಯ ರಾಜಕಾರಣಿ. ಅವರ ಬದುಕು ಮತ್ತು ರಾಜಧರ್ಮದ ನಡೆ ನಮಗೆಲ್ಲ ಆದರ್ಶ, ನನ್ನ ರಾಜಕೀಯ ಬದುಕಿಗೆ ಅವರ ಆದರ್ಶವೇ ಪ್ರೇರಣೆಯಾಗಿದೆ ಎಂದರು.

ಕೆಪಿಸಿಸಿ ಸದಸ್ಯರಾದ ನೀರೆ ಕೃಷ್ಣ ಶೆಟ್ಟಿ, ಸುರೇಂದ್ರ ಶೆಟ್ಟಿ ಸಂದರ್ಭೋಚಿತವಾಗಿ ಮಾತುಗಳನ್ನಾಡಿ ನುಡಿನಮನ ಸಲ್ಲಿಸಿದರು.

82 ಯುನಿಟ್ ರಕ್ತದಾನಗೈದ ದಾನಿಗಳಿಗೆ ಸಸಿ ಮತ್ತು ಸರ್ಟಿಫಿಕೇಟ್ ನೀಡಿ ಗೌರವಿಸಲಾಯಿತು ಹಾಗೂ ಜರಿಗುಡ್ಡೆ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಗೆ ಆರ್ಥಿಕ ಸಹಾಯವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಹಿರಿಯ ಕಾಂಗ್ರೆಸ್ ನಾಯಕರಾದ ಮಂಜುನಾಥ ಪೂಜಾರಿ ಮುದ್ರಾಡಿ, ಜಿಲ್ಲಾ ಉಪಾದ್ಯಕ್ಷರಾದ ಸುಧಾಕರ ಕೋಟ್ಯಾನ್, ಜಾರ್ಜ್ ಕ್ಯಾಸ್ಟಲಿನೋ, ಹೆಬ್ರಿ ಬ್ಲಾಕ್ ಅಧ್ಯಕ್ಷರಾದ ಗೋಪಿನಾಥ ಭಟ್, ನವೀನ್ ಅಡ್ಯಂತಾಯ, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಭಾನು ಭಾಸ್ಕರ ಪೂಜಾರಿ, ವಿವೇಕಾನಂದ ಶೆಣೈ, ಕಿರಣ್ ಹೆಗ್ಡೆ, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷರುಗಳಾದ ರೀನಾ ಡಿಸೋಜ, ಮಾಜಿ ಪುರಸಭಾ ಅಧ್ಯಕ್ಷ ಸುಭಿತ್ ಎನ್.ಆರ್, ಕೆ.ಎಮ್.ಎಪ್ ನಿರ್ದೇಶಕರಾದ ಸುಧಾಕರ ಶೆಟ್ಟಿ ಮುಡಾರು, ಉಮೇಶ್ ರಾವ್ ಬಜಗೋಳಿ, ಸಿರಿಯಣ್ಣ ಶೆಟ್ಟಿ ಹಿರ್ಗಾನ, ಉದಯ ಶೆಟ್ಟಿ ಕುಕ್ಕುಂದೂರು, ಅನಿಲ್ ಪೂಜಾರಿ ಕುಕ್ಕುಂದೂರು, ಚೇತನ್ ಶೆಟ್ಟಿ ಕೊರಳ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ, ಸೂರಜ್ ಶೆಟ್ಟಿ ನಕ್ರೆ, ಮಲಿಕ್ ಅತ್ತೂರು, ಮಂಜುನಾಥ ಜೋಗಿ , ಅನಿತಾ ಡಿ’ಸೋಜಾ ಬೆಳ್ಮಣ್ ಮತ್ತು ವಿವಿಧ ಘಟಕಗಳ ಅಧ್ಯಕ್ಷರುಗಳು, ನಾಮ ನಿರ್ದೇಶಿತ ಸದಸ್ಯರುಗಳು, ಪುರಸಭಾ ಸದಸ್ಯರು, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರುಗಳು, ಪಂಚಾಯತ್ ಸದಸ್ಯರುಗಳು ಹಾಗೂ ಚುನಾಯಿತ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಗ್ಯಾರಂಟಿ ಸಮಿತಿಯ ತಾಲೂಕು ಅಧ್ಯಕ್ಷರಾದ ಅಜಿತ್ ಹೆಗ್ಡೆ ಸ್ವಾಗತಿಸಿ ನಗರ ಅಧ್ಯಕ್ಷರಾದ ರಾಜೇಂದ್ರ ದೇವಾಡಿಗ ಧನ್ಯವಾದವಿತ್ತು ಬ್ಲಾಕ್ ವಕ್ತಾರರಾದ ಪ್ರದೀಪ್ ಬೇಲಾಡಿ ನಿರೂಪಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಜಾಗತಿಕ AI ರೇಸ್‌ನಲ್ಲಿ ಸ್ವಿಟ್ಜರ್ಲೆಂಡ್: ಸಂಪೂರ್ಣ ಮುಕ್ತ-ಮೂಲ, ಬಹುಭಾಷಾ LLM ಬಿಡುಗಡೆಗೆ ಸಜ್ಜು

ಕೃತಕ ಬುದ್ಧಿಮತ್ತೆ (AI) ಪ್ರಾಬಲ್ಯಕ್ಕಾಗಿ ನಡೆಯುತ್ತಿರುವ ಜಾಗತಿಕ ಸ್ಪರ್ಧೆಯಲ್ಲಿ ಅಮೆರಿಕ ಮತ್ತು ಚೀನಾಗಳ ನಡುವಿನ ಪೈಪೋಟಿ ಮುಂಚೂಣಿಯಲ್ಲಿದ್ದರೂ, ಇದೀಗ ಸ್ವಿಟ್ಜರ್ಲೆಂಡ್ ಕೂಡ ಪ್ರಬಲ ಸ್ಪರ್ಧಿಯಾಗಿ ಹೊರಹೊಮ್ಮುತ್ತಿದೆ.

ಚಿಕ್ಕವನಿದ್ದಾಗಿನಿಂದಲೇ ಅಪರಾಧ: ಉದ್ಯಮಿಗಳಿಗೆ ವಂಚಿಸಿದ ರೋಶನ್ ಸಲ್ದಾನ್ಹಾ ಬಗ್ಗೆ ಸ್ಫೋಟಕ ಮಾಹಿತಿ

ಉದ್ಯಮಿಗಳಿಗೆ ಬಹುಕೋಟಿ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ರೋಶನ್ ಸಲ್ದಾನ್ಹಾ ಬಗ್ಗೆ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ.

ಶ್ರೀ ಕೃಷ್ಣ ಜನ್ಮಾಷ್ಟಮಿಯ ಮಂಡಲೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಕೃಷ್ಣ ಜನ್ಮಾಷ್ಟಮಿಯ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಇಂದು ಪೂಜ್ಯ ಪರ್ಯಾಯ ಶ್ರೀಪಾದರು ಗೀತಾಮಂದಿರದಲ್ಲಿ ಬಿಡುಗಡೆಗೊಳಿಸಿದರು.

ಸಹಕಾರ ತತ್ವದಡಿ ಪರಿಸರ ಸಂರಕ್ಷಣೆ: ಮಲ್ಪೆಯಲ್ಲಿ ಯಶ್‌ಪಾಲ್ ಸುವರ್ಣರಿಂದ ಶ್ಲಾಘನೆ

ಸಹಕಾರ ತತ್ವದಡಿ ಸೇವೆ ಸಲ್ಲಿಸುವುದರ ಜೊತೆಗೆ ಪರಿಸರ ಸಂರಕ್ಷಣೆಯಂತಹ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದು ಅತ್ಯಂತ ಶ್ಲಾಘನೀಯ ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್‌ಪಾಲ್ ಸುವರ್ಣ ಹೇಳಿದ್ದಾರೆ.