spot_img

ಉಗ್ರರ ಹೇಯ ಕೃತ್ಯ ಬ್ಲಾಕ್‌ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ – ಶುಭದರಾವ್

Date:

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿ ದುರಾದೃಷ್ಟಕರ, ಈ ದಾಳಿಯನ್ನು ಬ್ಲಾಕ್ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತಾ ದಾಳಿಯಲ್ಲಿ ಮಡಿದ ಕರ್ನಾಟಕದ ಇಬ್ಬರು ಸೇರಿ ಇತರ ಸಹೋದರರಿಗೆ ಶೃದ್ದಾಂಜಲಿಯನ್ನು ಸಲ್ಲಿಸುತ್ತದೆ ಎಂದು ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಶುಭದರಾವ್ ತಿಳಿಸಿದ್ದಾರೆ.

ಉಗ್ರರ ದಮನಕ್ಕೆ ಕೇಂದ್ರ ಸರಕಾರ ತಕ್ಷಣ‌ ಕಾರ್ಯ ಪ್ರವ್ರತವಾಗಬೇಕು ಸರಕಾರ ತೆಗೆದುಕೊಳ್ಳುವ ಯಾವುದೇ ಕಾನೂನಾತ್ಮಕ ನಿರ್ಧಾರಕ್ಕೆ ನಮ್ಮ ಬೆಂಬಲವಿದೆ ಎಂದು ತಿಳಿಸಿದ್ದಾರೆ.

ಆದರೆ ಸರಕಾರದ ವೈಫಲ್ಯವನ್ನು ಮೆರೆ ಮಾಚಲು ಸಾದ್ಯವಿಲ್ಲ ಗಡಿಯಲ್ಲಿ ಉಗ್ರರ ದಾಳಿಯನ್ನು ತಡೆಯಲು ಕೇಂದ್ರ ಸರಕಾರ ಸಂಪೂರ್ಣ ವಿಫಲವಾಗಿದೆ, ಇದು ಗೃಹ ಇಲಾಖೆಯ ಗಂಭೀರ ವೈಫಲ್ಯವನ್ನು ತೋರಿಸುತ್ತದೆ.‌ 2000 ಸಾವಿರಕ್ಕೂ ಹೆಚ್ಚು ಪ್ರವಾಸಿಗರು ಒಂದೇ ಕಡೆ ಸೇರಿದ್ದರೂ ಒಬ್ಬನೇ ಒಬ್ಬ ಭದ್ರತಾ ಸಿಬಂದಿ ಇಲ್ಲದಿರುವುದು ಭದ್ರತಾ ಲೋಪವಲ್ಲದೆ ಬೇರೇನೂ ಅಲ್ಲ, ಇವರ ಆರ್ಭಟ ಆಕ್ರೋಶಗಳು ಕೇವಲ ಭಾಷಣಕ್ಕೆ ಮಾತ್ರ ಸೀಮಿತವಾಯಿತು ಎಂದೆನಿಸುತ್ತದೆ ಬೇರೆ ಸರಕಾರಗಳು ಆಡಳಿತ ನಡೆಸುವಾಗ ಉಗ್ರರ ದಾಳಿಗಳಾದಾಗ ರಾಜೀನಾಮೆ ಕೇಳುತ್ತಿದ್ದವರು ಮೌನವಾಗಿದ್ದಾರೆ ಎಂದರು.

ಸುರಕ್ಷತಾ ಲೋಪಗಳಿಗೆ ಕೇಂದ್ರ ಸರ್ಕಾರವು ಸಾರ್ವಜನಿಕರಿಗೆ ಉತ್ತರಿಸಬೇಕು ಪ್ರಧಾನಿಯವರ 56 ಇಂಚಿನ ಎದೆಯ ಶಕ್ತಿ ಏನೆಂಬುದು ದೇಶಕ್ಕೆ ತೋರಿಸುವ ಕಾಲ ಬಂದಿದೆ ಎಂದು ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಶುಭದರಾವ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬೇಸಿಗೆಗೆ ಪುನರ್ಪುಳಿಯ ಪವರ್! ಹಿತಕರ ಪಾನೀಯದಿಂದ ಆರೋಗ್ಯವೂ ಲಾಭ

ಬೇಸಿಗೆ ಬಿಸಿ ದಹನ ಶಮನಕ್ಕೆ ಕೋಕಂ ಅಥವಾ ಪುನರ್ಪುಳಿ ಶರಬತ್ತು ಅಪಾರ ಜನಪ್ರಿಯತೆ ಪಡೆಯುತ್ತಿದೆ.

ಪಹಲ್ಗಾಮ್ ಉಗ್ರ ದಾಳಿ: ಪತ್ನಿ ಮತ್ತು ಮಗುವಿನ ಎದುರೇ ಭರತ್ ಭೂಷಣ್ ಹತ್ಯೆ, ಶಿವಮೊಗ್ಗದ ಮಂಜುನಾಥ್ ಸಹಿತ ಇಬ್ಬರು ಬಲಿ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಭೀಕರ ಉಗ್ರದಾಳಿಯಲ್ಲಿ ಬೆಂಗಳೂರಿನ ಜೆ.ಪಿ. ಪಾರ್ಕ್ ನಿವಾಸಿ ಹಾಗೂ ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಮೂಲದ ಭರತ್ ಭೂಷಣ್ (41) ಮತ್ತು ಶಿವಮೊಗ್ಗದ ಮಂಜುನಾಥ್ ದುರ್ಮರಣಕ್ಕೀಡಾಗಿದ್ದಾರೆ.

ಪಹಲ್ಗಾಮ್ ಉಗ್ರ ದಾಳಿಯ ಕುರಿತು ರಾಹುಲ್ ಗಾಂಧಿ ಆಕ್ರೋಶ: “ಪೊಳ್ಳು ಹೇಳಿಕೆ ಬಿಟ್ಟು ಸರಕಾರ ಹೊಣೆಗಾರಿಕೆ ವಹಿಸಲಿ”

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಪ್ರದೇಶದ ಬೈಸರನ್ ಕಣಿವೆಯಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿ ದೇಶದಾದ್ಯಂತ ಆಕ್ರೋಶವನ್ನು ಉಂಟುಮಾಡಿದ್ದು, ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಈ ಕುರಿತು ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಮೋದಿಯಿಂದ ಪಹಲ್ಗಾಮ್ ದಾಳಿಯನ್ನು ಖಂಡಿಸಿ, ದುಷ್ಕರ್ಮಿಗಳನ್ನು ಕಠಿಣ ಶಿಕ್ಷೆಗೆ ಒಳಪಡಿಸುವ ಪ್ರತಿಜ್ಞೆ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಪ್ರವಾಸಿಗರ ಮೇಲೆ ನಡೆಸಿದ ಉಗ್ರ ದಾಳಿಯನ್ನು ಪ್ರಧಾನಿಯವರು ತೀವ್ರವಾಗಿ ಖಂಡಿಸಿದ್ದಾರೆ.