spot_img

“ರಕ್ತದಾನವು ಅತ್ಯಂತ ಪುಣ್ಯದ ಕಾರ್ಯ”: ಕ್ಯಾಪ್ಟನ್ ಗಣೇಶ್ ಕಾರ್ಣಿಕ್

Date:

ಕಾರ್ಕಳ : ರಕ್ತದಾನವು ನಾವು ಮಾಡುವಂತಹ ಅತ್ಯಂತ ಪುಣ್ಯದ ಕಾರ್ಯ. ನಾವು ನಿಯಮಿತವಾಗಿ ರಕ್ತದಾನ ಮಾಡುವ ಮೂಲಕ ಆರೋಗ್ಯವಂತರಾಗಿರಬಹುದು ಎಂದು ವಿಧಾನಪರಿಷತ್ ನ ಮಾಜಿ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು. ಅವರು ಎಳ್ಳಾರೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಡೆದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಐಎಎಸ್ ಅಧಿಕಾರಿ ಸದಾಶಿವ ಪ್ರಭು ಎಳ್ಳಾರೆ, ಮಂಗಳೂರು ವಿಭಾಗ ಗ್ರಾಮ ವಿಕಾಸ ಟೋಳಿ ಸದಸ್ಯೆ ರಮಿತಾ ಶೈಲೇಂದ್ರ, ಕಡ್ತಲ ಗ್ರಾ.ಪಂ ಅಧ್ಯಕ್ಷರಾದ ಸುಕೇಶ್ ಹೆಗ್ಡೆ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸತೀಶ್ ಸಾಲ್ಯಾನ್, ವೈದ್ಯ ಡಾ|ಪ್ರಮೋದ್ ಕುಮಾರ್ ಹೆಗ್ಡೆ, ಮುನಿಯಾಲಿನ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಸಂದೇಶ್ ಶೆಟ್ಟಿ, ಶ್ರೀ ಜನಾರ್ದನ ಟ್ರಸ್ಟ್ ಅಧ್ಯಕ್ಷರಾದ ಪ್ರಸನ್ನ ಶೆಟ್ಟಿ ಮುಂಡಾರು, ಉದ್ಯಮಿ ದಿನೇಶ್ ಕಿಣಿ, ಶ್ರೀ ಲಕ್ಷ್ಮೀ ಜನಾರ್ದನ ಭಜನಾ ಮಂಡಳಿ ಎಳ್ಳಾರೆಯ ಸಂಸ್ಥಾಪಕರಾದ ದೇವೇಂದ್ರ ಕಾಮತ್, ಅಧ್ಯಕ್ಷೆ ಶಾಂತಿ ಪ್ರಭು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಾಂತಿ ಪ್ರಭುರವರು ಸ್ವಾಗತಿಸಿ , ಹರೀಶ್ ಶೆಟ್ಟಿಯವರು ಧನ್ಯವಾದವಿತ್ತರು. ದೀಪಕ್ ಕಾಮತ್ ಎಳ್ಳಾರೆ ಕಾರ್ಯಕ್ರಮ ನಿರೂಪಿಸಿದರು. ಈ ರಕ್ತದಾನ ಶಿಬಿರದಲ್ಲಿ 104 ಜನರು ರಕ್ತದಾನವನ್ನು ಮಾಡಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪಂದ್ಯಾಟ ದೈಹಿಕ ಮತ್ತು ಮಾನಸಿಕ ಶಕ್ತಿಯನ್ನು ಒಗ್ಗೂಡಿಸುವ ಕ್ರೀಡೆ : ಪ್ರಭಾಕರ ಜೈನ್.

ಕೆ.ಎಮ್.ಇ.ಎಸ್ ವಿದ್ಯಾಸಂಸ್ಥೆ ರಾಷ್ಟ್ರಮಟ್ಟದ ಕ್ರೀಡಾಳುಗಳನ್ನು ಕೊಟ್ಟ ಸಂಸ್ಥೆ. ಇಂಥಹ ಸಂಸ್ಥೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟವನ್ನು ಉದ್ಘಾಟನೆಗೊಳಿಸಲು ಹೆಮ್ಮೆಯಾಗುತ್ತದೆ.

ಅಮೆರಿಕದಲ್ಲಿ ಭಾರತೀಯ ಮೂಲದ ವ್ಯಕ್ತಿಯ ಭೀಕರ ಹತ್ಯೆ; ಪತ್ನಿ, ಮಗನ ಎದುರೇ ತಲೆ ಕಡಿದ ದುಷ್ಕರ್ಮಿ

ಅಮೆರಿಕದ ಡಲ್ಲಾಸ್‌ನಲ್ಲಿ ಪತ್ನಿ ಮತ್ತು ಮಗನ ಮುಂದೆ ಭಾರತೀಯ ಮೂಲದ ಚಂದ್ರಮೌಳಿ ನಾಗಮಲ್ಲಯ್ಯ (50) ಎಂಬುವವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಪೊಲೀಸರ ಮಿಂಚಿನ ಕಾರ್ಯಾಚರಣೆ: ಉಡುಪಿಯಲ್ಲಿ 65 ಕೆ.ಜಿ ಗಾಂಜಾ ಜಪ್ತಿ, ಇಬ್ಬರು ಅಂತರರಾಜ್ಯ ಮಾಫಿಯಾ ಸದಸ್ಯರ ಬಂಧನ

ಖಚಿತ ಮಾಹಿತಿ ಆಧರಿಸಿ ಉಡುಪಿ ಸೆನ್ ಅಪರಾಧ ಪೊಲೀಸರು ನಡೆಸಿದ ದಿಢೀರ್ ಕಾರ್ಯಾಚರಣೆಯಲ್ಲಿ, ಲಾರಿಯಲ್ಲಿ ಸಾಗಿಸುತ್ತಿದ್ದ ಬೃಹತ್ ಪ್ರಮಾಣದ ಗಾಂಜಾವನ್ನು ಜಪ್ತಿ ಮಾಡಲಾಗಿದೆ.

ಧರ್ಮಸ್ಥಳದಲ್ಲಿ ನಡೆದ ಅನುಮಾನಾಸ್ಪದ ಸಾವುಗಳ ಕುರಿತು SIT ತನಿಖೆಗೆ ಮಹೇಶ್ ಶೆಟ್ಟಿ ತಿಮರೋಡಿ ಒತ್ತಾಯ: 2006ರಿಂದ 2010ರ ಅವಧಿಯಲ್ಲಿ ಕೊಲೆಯಾಗಿರುವ ಶಂಕೆ

ಮಹೇಶ್ ಶೆಟ್ಟಿ ತಿಮರೋಡಿ ಅವರು, ಧರ್ಮಸ್ಥಳದಲ್ಲಿ 2006 ರಿಂದ 2010ರ ಅವಧಿಯಲ್ಲಿ ನಡೆದ ನಾಲ್ಕು ಅಪರಿಚಿತ ಸಾವುಗಳ ಬಗ್ಗೆ ತನಿಖೆ ನಡೆಸುವಂತೆ ಕೋರಿ ವಿಶೇಷ ತನಿಖಾ ದಳದ (SIT) ಕಚೇರಿಗೆ ದೂರು ನೀಡಿದ್ದಾರೆ