spot_img

ಪಿಲಿಕುಳ ಉದ್ಯಾನ ತಾತ್ಕಾಲಿಕವಾಗಿ ಮುಚ್ಚುವಂತೆ BNHSನ ಪಿಐಎಲ್!

Date:

ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನದಲ್ಲಿ ನಿರ್ವಹಣಾ ಅವ್ಯವಸ್ಥೆ ಮತ್ತು ನಿಯಮ ಉಲ್ಲಂಘನೆಯ ಬಗ್ಗೆ ಗಂಭೀರ ಆರೋಪ ಕೇಳಿಬಂದಿದ್ದು, ಅಲ್ಲಿರುವ ಪ್ರಾಣಿಗಳಿಗೆ ಅಪಾಯ ಉಂಟಾಗುವ ಸಾಧ್ಯತೆ ಇರುವುದರಿಂದ ಮೃಗಾಲಯವನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ಬಾಂಬೆ ನ್ಯಾಚುರಲ್ ಹಿಸ್ಟರಿ ಸೊಸೈಟಿ (BNHS) ಹೈಕೋರ್ಟ್ ಮೊರೆ ಹೋಗಿದೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವ ಸಂಸ್ಥೆ, ನ್ಯಾಯಾಲಯದ ತೀರ್ಪು ಹೊರಬರುವವರೆಗೆ ಪಿಲಿಕುಳ ಉದ್ಯಾನವನವನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ಕೋರುತ್ತಿದೆ. ಈ ಕುರಿತಂತೆ, ಮಂಗಳೂರು ಮೂಲದ ವನ್ಯಜೀವಿ ಸಂರಕ್ಷಣಾ ತಜ್ಞ ಭುವನ್ ಮತ್ತು ಹೈಕೋರ್ಟ್ ವಕೀಲ ಅಶ್ವಿನ್ ಜಾಯ್‌ಸ್ಟನ್ ಕುಟಿನ್ಹ ಕಳೆದ ಅಕ್ಟೋಬರ್ 31 ರಂದು ಅಧ್ಯಯನ ನಡೆಸಿದ್ದರು. ಪಿಲಿಕುಳ ಉದ್ಯಾನದಲ್ಲಿನ ಪ್ರಾಣಿಗಳ ಪಂಜರಗಳು ಕೇಂದ್ರ ಮೃಗಾಲಯ ಪ್ರಾಧಿಕಾರದ ನಿಯಮಾವಳಿಗಳಿಗೆ ಅನುಗುಣವಿದೆಯೇ ಎಂಬುದನ್ನು ಪರಿಶೀಲಿಸಿ, ಮಾಹಿತಿ ಹಕ್ಕು ಕಾಯಿದೆಯಡಿ ಮಾಹಿತಿ ಕೇಳಿದರೂ, ಸರಿಯಾದ ಮಾಹಿತಿ ದೊರಕಿಲ್ಲ.

ಈ ಕುರಿತು ಕೇಂದ್ರ ಮೃಗಾಲಯ ಪ್ರಾಧಿಕಾರ, ಮುಖ್ಯ ವನ್ಯಜೀವಿ ವಾರ್ಡನ್ ಮತ್ತು ಅರಣ್ಯ ಇಲಾಖೆ ಪ್ರಧಾನ ಸಂರಕ್ಷಣಾಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದ್ದರೂ, ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಹೈಕೋರ್ಟ್ ಮೊರೆ ಹೋಗಲಾಗಿದೆ ಎಂದು BNHS ಸಂಸ್ಥೆ ಪ್ರಕಟಣೆ ನೀಡಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರಿಯಲ್‌ಮಿ ನಿಯೋ 7 ಟರ್ಬೋ AI ಬಿಡುಗಡೆ: ಗೇಮರ್‌ಗಳಿಗಾಗಿ ಮೀಡಿಯಾಟೆಕ್ ಡೈಮನ್ಸಿಟಿ 9400e ಪ್ರೊಸೆಸರ್‌ನ ಫೋನ್

ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ತನ್ನ ಗೇಮಿಂಗ್ ಮತ್ತು ಬ್ಯಾಟರಿ-ಕೇಂದ್ರಿತ ಫೋನ್‌ಗಳಿಂದ ಹೆಸರುವಾಸಿಯಾಗಿರುವ ರಿಯಲ್ಮಿ, ಈಗ ತನ್ನ ನಿಯೋ ಸರಣಿಗೆ ಹೊಸ ಸೇರ್ಪಡೆಯನ್ನು ಮಾಡಿದೆ.

ಪೆರ್ಡೂರು: ಶಾಲಾ ಬಸ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ – ಮತ್ತೊಬ್ಬನಿಗೆ ಗಂಭೀರ ಗಾಯ

ಪೆರ್ಡೂರು ಗ್ರಾಮದ ಕೊಳಂಬೆ ಕ್ರಾಸ್ ಬಳಿ ಶಾಲಾ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ.

ಉಡುಪಿ ರಸ್ತೆ ಅಪಘಾತ: ಬೈಕ್ ಸ್ಕಿಡ್ ಆಗಿ ಯುವಕನ ದುರ್ಮರಣ, ಸಹಸವಾರ ಗಂಭೀರ

ಬೈಕ್ ಸ್ಕಿಡ್ ಆಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸಹಸವಾರ ಸಾವನ್ನಪ್ಪಿದ್ದು, ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.

ಮಧುಮೇಹ ಮತ್ತು ಬೊಜ್ಜು ನಿಯಂತ್ರಣಕ್ಕೆ ದಾಸವಾಳ: ಪ್ರಕೃತಿಯ ವರದಾನ

ದಾಸವಾಳದ ಎಲೆಗಳು, ಹೂವುಗಳು ಮತ್ತು ಬೇರುಗಳು ವೈವಿಧ್ಯಮಯ ಪೋಷಕಾಂಶಗಳು ಮತ್ತು ಜೈವಿಕ ಸಕ್ರಿಯ ಸಂಯುಕ್ತಗಳಿಂದ ಸಮೃದ್ಧವಾಗಿವೆ.