spot_img

ಬ್ರಹ್ಮಾವರ: ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಸಾವು ನೋವು – ಸಮರ್ಪಕ ಸರ್ವೀಸ್ ರಸ್ತೆ, ಫ್ಲೈ ಓವರ್ ಆಗ್ರಹಿಸಿ ಪ್ರತಿಭಟನೆ!

Date:

ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರ ಮಹೇಶ್ ಆಸ್ಪತ್ರೆ ಸಮೀಪ ಅವೈಜ್ಞಾನಿಕ ರಸ್ತೆ ನಿರ್ಮಾಣದಿಂದ ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದು, ಇತ್ತೀಚೆಗೆ ನಡೆದ ಭೀಕರ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದಾನೆ. ಈ ಘಟನೆಗೆ ಜನರ ಆಕ್ರೋಶ ಹೆಚ್ಚಿದ್ದು, ಬುಧವಾರ ಬೃಹತ್ ಪ್ರತಿಭಟನೆ ನಡೆಯಿತು.

ಮಂಗಳವಾರ ನಡೆದ ಅಪಘಾತಕ್ಕೆ ಪ್ರತಿಯಾಗಿ, ಬ್ರಹ್ಮಾವರ ಎಸ್.ಎಮ್.ಎಸ್ ಕಾಲೇಜಿನಿಂದ ತಾಲೂಕು ಕಛೇರಿ ತನಕ ಶಾಂತಿಯುತ ಜಾಥಾ ನಡೆಸಿ, ಬಳಿಕ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಸ್ಥಳೀಯರು, ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳು ಭಾಗವಹಿಸಿ, ಸಮರ್ಪಕ ಸರ್ವಿಸ್ ರಸ್ತೆ ಮತ್ತು ಫ್ಲೈ ಓವರ್ ನಿರ್ಮಾಣಕ್ಕೆ ಆಗ್ರಹಿಸಿದರು.

“ಇದು ಕೇವಲ ಆರಂಭ, ಜಿಲ್ಲಾಡಳಿತ ಎಚ್ಚರಿಸಿಕೊಳ್ಳದೇ ಇದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಅನಿವಾರ್ಯ!” ಎಂದು ಪ್ರತಿಭಟನಾಕಾರರು ಎಚ್ಚರಿಸಿದರು. ವಸಂತ ಗಿಳಿಯಾರ್ ಅವರು, “ನ್ಯಾಯಕ್ಕಾಗಿ ಕೇವಲ ಘೋಷಣೆಗಳು ಸಾಕಾಗುವುದಿಲ್ಲ, ಏಪ್ರಿಲ್ 12ರೊಳಗೆ ತೀರ್ಮಾನ ಕೈಗೊಳ್ಳದಿದ್ದರೆ ಬ್ರಹ್ಮಾವರ ಬಂದ್ ಅನಿವಾರ್ಯ!” ಎಂದು ಘೋಷಿಸಿದರು.

ತಹಶೀಲ್ದಾರ್ ಸ್ಪಂದನೆ:
ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ್ ಹೆಗ್ಡೆ ಮನವಿ ಸ್ವೀಕರಿಸಿ, “ಈ ವಿಷಯವನ್ನು ಜಿಲ್ಲಾಧಿಕಾರಿಯ ಗಮನಕ್ಕೆ ತಂದಿದ್ದು, ತಕ್ಷಣವೇ ಸರ್ವೀಸ್ ರಸ್ತೆ ನಿರ್ಮಾಣದ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಭರವಸೆ ನೀಡಿದರು.

ಈ ಪ್ರತಿಭಟನೆಯಲ್ಲಿ ಬ್ರಹ್ಮಾವರ ವೃತ್ತ ನಿರೀಕ್ಷಕ ದಿವಾಕರ್, ಎಸ್ಎಂಎಸ್ ಕಾಲೇಜು ಪ್ರಿನ್ಸಿಪಾಲ್ ರಾಬರ್ಟ್, ಫಾದರ್ ಮಥಾಯ್, ಫಾದರ್ ಡೇವಿಡ್ ಕ್ರಾಸ್ತಾ, ವಿದ್ಯಾರ್ಥಿಗಳು, ಹಿರಿಯ ನಾಗರಿಕ ವೇದಿಕೆ, ರೋಟರಿ, ಲಯನ್ಸ್ ಸೇರಿದಂತೆ 25ಕ್ಕೂ ಹೆಚ್ಚು ಸಂಘಟನೆಗಳು ಭಾಗವಹಿಸಿದ್ದವು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಮುಖೇಶ್ ಅಂಬಾನಿ

1957 ಏಪ್ರಿಲ್ 19 ರಂದು ಮುಕೇಶ್ ಅಂಬಾನಿಯವರು ಗುಜರಾತಿ ಇಂದು ಕುಟುಂಬದಲ್ಲಿ ಇರುವ ಅಂಬಾನಿ ಹಾಗೂ ಕೋಕಿಲಾ ಬೆನ್ ದಂಪತಿಗಳಿಗೆ ಜನಿಸಿದರು

ಕಲರ್ಸ್ ಕನ್ನಡದಲ್ಲಿ ಹೊಸ ಕೌಟುಂಬಿಕ ಧಾರಾವಾಹಿ ‘ಮುದ್ದು ಸೊಸೆ’

'ಮುದ್ದು ಸೊಸೆ' ಕಲರ್ಸ್ ಕನ್ನಡದಲ್ಲಿ ವಿದ್ಯಾಗೆ ವಿದ್ಯೆ ಬೇಕು, ಮನೆಯವರಿಗೆ ಮದುವೆ ಸ್ಕೂಲ್ ಬೆಂಚಿಂದ ಹಸೆಮಣೆ ಏರುವ ವಿದ್ಯಾಳ ಬದುಕಿನ ಕತೆ ಕಲರ್ಸ್ ಕನ್ನಡ ವಾಹಿನಿ ಸದಾ ಪ್ರೇಕ್ಷಕರ ಹೃದಯವನ್ನು ಮುಟ್ಟುವ, ಮನಮಿಡಿಯುವ ಧಾರಾವಾಹಿಗಳನ್ನು ನೀಡುವ ಮೂಲಕ ಜನಪ್ರಿಯವಾಗಿದೆ.

ಅಪರೂಪದ ನಾಯಿ ಖರೀದಿಗೆ 50 ಕೋಟಿ? ಬೆಂಗಳೂರು ಶ್ವಾನ ಪ್ರೇಮಿಯ ಮನೆಗೆ ಇಡಿ ದಾಳಿ!

ಬೆಂಗಳೂರು ಶ್ವಾನ ಪ್ರೇಮಿ ಎಸ್. ಸತೀಶ್ ತನ್ನಿಂದ 50 ಕೋಟಿ ರೂ. ಮೊತ್ತದಲ್ಲಿ ನಾಯಿ ಖರೀದನೆಯಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಮಾಡಿದ ಹೇಳಿಕೆ ಇದೀಗ ಇಡಿ (ಅನ್ವೇಷಣಾ ನಿರ್ದೇಶನಾಲಯ) ತನಿಖೆಗೆ ಕಾರಣವಾಗಿದೆ.

ಪ್ರೊಸೆಸ್ಡ್ ಆಹಾರದ ನಿಗೂಢ ನಂಟು: ಆರೋಗ್ಯಕ್ಕೆ ರುಚಿಯೇ ವಿಷವಾಗುತ್ತಿದೆ !

ಇತ್ತೀಚಿನ ದಿನಗಳಲ್ಲಿ ಪ್ಯಾಕ್ಟ್ ಫುಡ್ಸ್, ಇನ್‌ಸ್ಟಂಟ್ ಆಹಾರಗಳು, ಬೀದಿ ಬದಿಯ ಜಂಕ್‌ಫುಡ್ಸ್ ಮತ್ತು ಇತರ ಸಂಸ್ಕರಿಸಿದ ಆಹಾರಗಳ ಬಳಕೆಯು ಗಣನೀಯವಾಗಿ ಹೆಚ್ಚಾಗಿದೆ.