spot_img

ಬ್ರಹ್ಮಾವರದ ಚಿನ್ನದ ಸರ ದರೋಡೆ ಪ್ರಕರಣ : ಒಂದು ದಿನದಲ್ಲೇ ಮೂವರು ಆರೋಪಿಗಳ ಬಂಧನ

Date:

spot_img

ಯಲ್ಲಾಪುರ/ಬ್ರಹ್ಮಾವರ:ವಾರಂಬಳ್ಳಿ ಗ್ರಾಮದ ಆದರ್ಶನಗರದಲ್ಲಿ 70 ವರ್ಷದ ವೃದ್ಧೆಯೊಬ್ಬಳಿಂದ ಚಿನ್ನದ ಸರ ಎಳೆದೊಯ್ದ ಘಟನೆ ಬೆಳಕಿಗೆ ಬಂದಿದ್ದು, ಪೊಲೀಸರು ಕೇವಲ ಒಂದು ದಿನದಲ್ಲೇ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳು ಗೋವಾದ ಗೌರೀಶ ರೋಹಿದಾಸ್ ಕೆರ್ಕರ್ (37), ಬಿಜಾಪುರದ ಮೈನುದ್ದೀನ್ ಬಾಗಲಕೋಟ್ (31) ಮತ್ತು ಮುಂಬೈನ ಸುರ್ಜಿತ್ ಗೌತಮ್ (27) ಎಂದು ಗುರುತಿಸಲಾಗಿದೆ. ಈ ಮೂವರು ಸಹಾ ಗೋವದಲ್ಲಿ ನೆಲೆಸಿದ್ದುದಾಗಿ ತನಿಖೆಯಿಂದ ತಿಳಿದುಬಂದಿದೆ.

ಘಟನೆ ಹಿನ್ನಲೆ:
ಶನಿವಾರ ಬೆಳಗ್ಗೆ ಆದರ್ಶನನಗರದ ಪದ್ಮಾ (70) ಮನೆಯ ಹೊರಭಾಗದ ರಸ್ತೆ ಪಕ್ಕ ಹೂವು ಕೊಯ್ಯುತ್ತಿದ್ದ ಸಂದರ್ಭ, ಬಿಳಿ ಬಣ್ಣದ ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ ತಲೆ, ಮುಖಕ್ಕೆ ಗುದ್ದಿದ ಬಳಿಕ ಅವರ ಕುತ್ತಿಗೆಯಲ್ಲಿದ್ದ 40 ಗ್ರಾಂ ತೂಕದ ಚಿನ್ನದ ಕರಿಮಣಿ ಸರ ಎಳೆದೊಯ್ದ ನಂತರ ಆರೋಪಿಗಳು ಕಾರಿನಲ್ಲಿ ಪರಾರಿಯಾಗಿದ್ದರು.

ತಕ್ಷಣ ಕಾರ್ಯಾಚರಣೆಗೆ ಇಳಿದ ಪೊಲೀಸರು:
ಘಟನೆ ನಡೆದ ಬೆನ್ನಲ್ಲೇ ಪೊಲೀಸರು ಸ್ಥಳದಲ್ಲಿರುವ ಸಿಸಿಟಿವಿ ಕ್ಯಾಮೆರಾಗಳಿಂದ ಕಾರಿನ ನಂಬರ್ ಗುರುತಿಸಿ, ಉತ್ತರ ಕನ್ನಡದ ಯಲ್ಲಾಪುರದತ್ತ ಆರೋಪಿಗಳು ಓಡುತ್ತಿರುವ ಮಾಹಿತಿ ಪಡೆದರು. ಯಲ್ಲಾಪುರ ಪೊಲೀಸರು ಕೂಡಲೇ ಬ್ಲಾಕ್ ಹಾಕಿ ತಡೆಯಲು ಯತ್ನಿಸಿದರು. ಆರೋಪಿಗಳು ಕಾರನ್ನು ಕಾಡಿನ ದಿಕ್ಕಿಗೆ ಓಡಿಸಿ, ಕಾರನ್ನು ಬಿಟ್ಟು ಅಲ್ಲಿಂದ ಪರಾರಿಯಾದರು.
ಆದರೆ, ಮೊಬೈಲ್ ಲೊಕೇಶನ್ ಆಧರಿಸಿ ನಡೆಸಿದ ಶೋಧದಿಂದ ಮೂವರನ್ನೂ ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾದರು.

ಆರೋಪಿಗಳ ಹಿಂದಿನ ಚರಿತ್ರೆ:
ಬಂಧಿತ ಗೌರೀಶ್ ವಿರುದ್ಧ ಈಗಾಗಲೇ ವಿವಿಧ ರಾಜ್ಯಗಳಲ್ಲಿ 16 ಕಳವು ಪ್ರಕರಣಗಳು ದಾಖಲಾಗಿವೆ. ಉಳಿದ ಇಬ್ಬರ ಹಿನ್ನೆಲೆಯೂ ತನಿಖೆಯಲ್ಲಿದೆ.
ಮೈನುದ್ದೀನ್ ಬಾಗಲಕೋಟ್ ತನ್ನ ಪತ್ನಿಯನ್ನು ಉಡುಪಿಯಲ್ಲಿ ಭೇಟಿಯಾಗಲು ಆಗಮಿಸಿದ್ದ ಸಂದರ್ಭದಲ್ಲಿ ಈ ದರೋಡೆ ನಡೆಸಿದ ಬಗ್ಗೆ ಮಾಹಿತಿ ಲಭಿಸಿದೆ. ಈ ದರೋಡೆ ಅವರು ಕರಾವಳಿಯಲ್ಲಿ ಮಾಡಿದ ಮೊದಲ ಅಪರಾಧವಾಗಿದೆ.

ಕಟ್ಟುನಿಟ್ಟಿನ ಪೊಲೀಸ್ ಕಾರ್ಯಾಚರಣೆ:
ಆರೋಪಿಗಳನ್ನು ಪತ್ತೆಹಚ್ಚಲು ಬ್ರಹ್ಮಾವರ ವೃತ್ತ ನಿರೀಕ್ಷಕ ಗೋಪಿಕೃಷ್ಣ ಕೆ.ಆರ್., ಉಪನಿರೀಕ್ಷಕರಾದ ಸುದರ್ಶನ್ ದೊಡ್ಡಮನಿ, ಮಹಾಂತೇಶ ಜಾಬಗೌಡ, ಹಿರಿಯಡ್ಕ ಪಿಎಸ್‌ಐ ಪುನೀತ್ ಬಿ.ಇ. ಹಾಗೂ ಅಪರಾಧ ಪತ್ತೆ ತಂಡದ ಸದಸ್ಯರು ಸಂಯುಕ್ತ ಕಾರ್ಯಾಚರಣೆ ನಡೆಸಿದರು.
ಯಲ್ಲಾಪುರದಿಂದ ಸಿಪಿಐ ರಮೇಶ್ ಹಾನಾಪುರ ಹಾಗೂ ಪಿಎಸ್‌ಐ ಯಲ್ಲಾಲಿಂಗ ಕುನ್ನೂರ ಅವರ ಸಹಕಾರವೂ ಮಹತ್ವಪೂರ್ಣವಾಯಿತು.

ಪೊಲೀಸರು ಆರೋಪಿಗಳಿಂದ 10 ಲಕ್ಷ ರೂ. ಮೌಲ್ಯದ ಕಾರು, ಮೊಬೈಲ್ ಫೋನ್‌ಗಳು ಮತ್ತು ದರೋಡೆಗೆ ಬಳಸಿದ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಉಪರಾಷ್ಟ್ರಪತಿ ಸ್ಥಾನಕ್ಕೆ ಕರ್ನಾಟಕ ಮೂಲದ ನ್ಯಾಯಮೂರ್ತಿ ಅಬ್ದುಲ್ ನಝೀರ್ ಹೆಸರು ಮುಂಚೂಣಿಯಲ್ಲಿ

ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ತಮ್ಮ ಸ್ಥಾನಕ್ಕೆ ಅನಿರೀಕ್ಷಿತವಾಗಿ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ, ಈ ಮಹೋನ್ನತ ಹುದ್ದೆಗೆ ಕರ್ನಾಟಕದ ಹೆಮ್ಮೆಯ ಪುತ್ರ, ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಸ್. ಅಬ್ದುಲ್ ನಝೀರ್ ಅವರ ಹೆಸರು ಪ್ರಬಲವಾಗಿ ಕೇಳಿಬರುತ್ತಿದೆ.

ಧರ್ಮಸ್ಥಳ ದುರಂತಗಳ ಆಳಕ್ಕೆ ಇಳಿಯಲು ಸಹಾಯವಾಣಿ ಸ್ಥಾಪನೆಗೆ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಶವ ವಿಲೇವಾರಿ ಪ್ರಕರಣವು ಇದೀಗ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಬೋಳದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಅಡ್ಡಿಪಡಿಸಿದ ಬಿಜೆಪಿ ಗ್ರಾ. ಪಂ ಸದಸ್ಯರ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

ಬಿಜೆಪಿ ಪಂಚಾಯತ್ ಸದಸ್ಯರ ದುರ್ನಡತೆಯ ವಿರುದ್ದ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಹಾಗೂ ಬೋಳ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಜಂಟಿ ಆಶ್ರಯದಲ್ಲಿ ಬೋಳ ಗ್ರಾಮ ಪಂಚಾಯತ್ ಕಚೇರಿ ಮುಂಬಾಗದಲ್ಲಿ ಪ್ರತಿಭಟನಾ ಸಭೆ ನಡೆಯಿತು.

ಎಂ.ಆರ್.ಐ. ಯಂತ್ರದಿಂದ ಲೋಹದ ಆಭರಣ ಧರಿಸಿದ ವ್ಯಕ್ತಿಯ ಸಾವು!

ವೈದ್ಯಕೀಯ ಜಗತ್ತಿನಲ್ಲಿ ಅಪರೂಪದ ಆದರೆ ಅತ್ಯಂತ ಗಂಭೀರವಾದ ದುರಂತವೊಂದು ಅಮೆರಿಕದ ನ್ಯೂಯಾರ್ಕ್‌ನಲ್ಲಿ ಸಂಭವಿಸಿದ್ದು, ಮ್ಯಾಗ್ನೆಟಿಕ್ ರೆಸೋನೆನ್ಸ್ ಇಮೇಜಿಂಗ್ (ಎಂ.ಆರ್.ಐ.) ಸ್ಕ್ಯಾನ್ ಯಂತ್ರದ ಪ್ರಬಲ ಕಾಂತೀಯ ಕ್ಷೇತ್ರಕ್ಕೆ ಸೆಳೆದುಕೊಂಡು ವ್ಯಕ್ತಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ