spot_img

ಬ್ರಹ್ಮಾವರದ ಚಿನ್ನದ ಸರ ದರೋಡೆ ಪ್ರಕರಣ : ಒಂದು ದಿನದಲ್ಲೇ ಮೂವರು ಆರೋಪಿಗಳ ಬಂಧನ

Date:

ಯಲ್ಲಾಪುರ/ಬ್ರಹ್ಮಾವರ:ವಾರಂಬಳ್ಳಿ ಗ್ರಾಮದ ಆದರ್ಶನಗರದಲ್ಲಿ 70 ವರ್ಷದ ವೃದ್ಧೆಯೊಬ್ಬಳಿಂದ ಚಿನ್ನದ ಸರ ಎಳೆದೊಯ್ದ ಘಟನೆ ಬೆಳಕಿಗೆ ಬಂದಿದ್ದು, ಪೊಲೀಸರು ಕೇವಲ ಒಂದು ದಿನದಲ್ಲೇ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳು ಗೋವಾದ ಗೌರೀಶ ರೋಹಿದಾಸ್ ಕೆರ್ಕರ್ (37), ಬಿಜಾಪುರದ ಮೈನುದ್ದೀನ್ ಬಾಗಲಕೋಟ್ (31) ಮತ್ತು ಮುಂಬೈನ ಸುರ್ಜಿತ್ ಗೌತಮ್ (27) ಎಂದು ಗುರುತಿಸಲಾಗಿದೆ. ಈ ಮೂವರು ಸಹಾ ಗೋವದಲ್ಲಿ ನೆಲೆಸಿದ್ದುದಾಗಿ ತನಿಖೆಯಿಂದ ತಿಳಿದುಬಂದಿದೆ.

ಘಟನೆ ಹಿನ್ನಲೆ:
ಶನಿವಾರ ಬೆಳಗ್ಗೆ ಆದರ್ಶನನಗರದ ಪದ್ಮಾ (70) ಮನೆಯ ಹೊರಭಾಗದ ರಸ್ತೆ ಪಕ್ಕ ಹೂವು ಕೊಯ್ಯುತ್ತಿದ್ದ ಸಂದರ್ಭ, ಬಿಳಿ ಬಣ್ಣದ ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ ತಲೆ, ಮುಖಕ್ಕೆ ಗುದ್ದಿದ ಬಳಿಕ ಅವರ ಕುತ್ತಿಗೆಯಲ್ಲಿದ್ದ 40 ಗ್ರಾಂ ತೂಕದ ಚಿನ್ನದ ಕರಿಮಣಿ ಸರ ಎಳೆದೊಯ್ದ ನಂತರ ಆರೋಪಿಗಳು ಕಾರಿನಲ್ಲಿ ಪರಾರಿಯಾಗಿದ್ದರು.

ತಕ್ಷಣ ಕಾರ್ಯಾಚರಣೆಗೆ ಇಳಿದ ಪೊಲೀಸರು:
ಘಟನೆ ನಡೆದ ಬೆನ್ನಲ್ಲೇ ಪೊಲೀಸರು ಸ್ಥಳದಲ್ಲಿರುವ ಸಿಸಿಟಿವಿ ಕ್ಯಾಮೆರಾಗಳಿಂದ ಕಾರಿನ ನಂಬರ್ ಗುರುತಿಸಿ, ಉತ್ತರ ಕನ್ನಡದ ಯಲ್ಲಾಪುರದತ್ತ ಆರೋಪಿಗಳು ಓಡುತ್ತಿರುವ ಮಾಹಿತಿ ಪಡೆದರು. ಯಲ್ಲಾಪುರ ಪೊಲೀಸರು ಕೂಡಲೇ ಬ್ಲಾಕ್ ಹಾಕಿ ತಡೆಯಲು ಯತ್ನಿಸಿದರು. ಆರೋಪಿಗಳು ಕಾರನ್ನು ಕಾಡಿನ ದಿಕ್ಕಿಗೆ ಓಡಿಸಿ, ಕಾರನ್ನು ಬಿಟ್ಟು ಅಲ್ಲಿಂದ ಪರಾರಿಯಾದರು.
ಆದರೆ, ಮೊಬೈಲ್ ಲೊಕೇಶನ್ ಆಧರಿಸಿ ನಡೆಸಿದ ಶೋಧದಿಂದ ಮೂವರನ್ನೂ ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾದರು.

ಆರೋಪಿಗಳ ಹಿಂದಿನ ಚರಿತ್ರೆ:
ಬಂಧಿತ ಗೌರೀಶ್ ವಿರುದ್ಧ ಈಗಾಗಲೇ ವಿವಿಧ ರಾಜ್ಯಗಳಲ್ಲಿ 16 ಕಳವು ಪ್ರಕರಣಗಳು ದಾಖಲಾಗಿವೆ. ಉಳಿದ ಇಬ್ಬರ ಹಿನ್ನೆಲೆಯೂ ತನಿಖೆಯಲ್ಲಿದೆ.
ಮೈನುದ್ದೀನ್ ಬಾಗಲಕೋಟ್ ತನ್ನ ಪತ್ನಿಯನ್ನು ಉಡುಪಿಯಲ್ಲಿ ಭೇಟಿಯಾಗಲು ಆಗಮಿಸಿದ್ದ ಸಂದರ್ಭದಲ್ಲಿ ಈ ದರೋಡೆ ನಡೆಸಿದ ಬಗ್ಗೆ ಮಾಹಿತಿ ಲಭಿಸಿದೆ. ಈ ದರೋಡೆ ಅವರು ಕರಾವಳಿಯಲ್ಲಿ ಮಾಡಿದ ಮೊದಲ ಅಪರಾಧವಾಗಿದೆ.

ಕಟ್ಟುನಿಟ್ಟಿನ ಪೊಲೀಸ್ ಕಾರ್ಯಾಚರಣೆ:
ಆರೋಪಿಗಳನ್ನು ಪತ್ತೆಹಚ್ಚಲು ಬ್ರಹ್ಮಾವರ ವೃತ್ತ ನಿರೀಕ್ಷಕ ಗೋಪಿಕೃಷ್ಣ ಕೆ.ಆರ್., ಉಪನಿರೀಕ್ಷಕರಾದ ಸುದರ್ಶನ್ ದೊಡ್ಡಮನಿ, ಮಹಾಂತೇಶ ಜಾಬಗೌಡ, ಹಿರಿಯಡ್ಕ ಪಿಎಸ್‌ಐ ಪುನೀತ್ ಬಿ.ಇ. ಹಾಗೂ ಅಪರಾಧ ಪತ್ತೆ ತಂಡದ ಸದಸ್ಯರು ಸಂಯುಕ್ತ ಕಾರ್ಯಾಚರಣೆ ನಡೆಸಿದರು.
ಯಲ್ಲಾಪುರದಿಂದ ಸಿಪಿಐ ರಮೇಶ್ ಹಾನಾಪುರ ಹಾಗೂ ಪಿಎಸ್‌ಐ ಯಲ್ಲಾಲಿಂಗ ಕುನ್ನೂರ ಅವರ ಸಹಕಾರವೂ ಮಹತ್ವಪೂರ್ಣವಾಯಿತು.

ಪೊಲೀಸರು ಆರೋಪಿಗಳಿಂದ 10 ಲಕ್ಷ ರೂ. ಮೌಲ್ಯದ ಕಾರು, ಮೊಬೈಲ್ ಫೋನ್‌ಗಳು ಮತ್ತು ದರೋಡೆಗೆ ಬಳಸಿದ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

‘ಸೇವಾ ಪಾಕ್ಷಿಕ ಅಭಿಯಾನ’ ಯಶಸ್ವಿಗೊಳಿಸಲು ಕುತ್ಯಾರು ನವೀನ್ ಶೆಟ್ಟಿ ಕರೆ

ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.

ಕ್ರಿಯೇಟಿವ್ ಕಾಲೇಜಿನಲ್ಲಿ ಗುರುದೇವೋಭವ ಕಾರ್ಯಕ್ರಮ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ, 'ಕ್ರಿಯೇಟಿವ್ ಗುರುದೇವೋಭವ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು.

ಕಾರ್ಕಳ ಜ್ಞಾನಸುಧಾ – ಶಿಕ್ಷಕರ ದಿನಾಚರಣೆಸಾವಧಾನದ ಮನಸ್ಥಿತಿ ಗೌರವದ ಉಪಸ್ಥಿತಿ : ವಸಂತ್ ಆಚಾರ್

ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಂದರ್ಭ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದರು.

ಉಡುಪಿ ಜಿಲ್ಲಾ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್ ರಿ. ಇದರ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮ

ಉಡುಪಿ ಜಿಲ್ಲಾ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್ ರಿ. ಇದರ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮವು ಅಧ್ಯಕ್ಷರಾದ ಶ್ರೀಯುತ ಎಮ್ ಕೆ ದಿನೇಶ್ ಮೂಡಬಿದ್ರಿಯವರ ಅಧ್ಯಕ್ಷತೆಯಲ್ಲಿ ದೀಪ ಬೆಳಗಿಸುದರ ಮುಖೇನ ಉದ್ಯಾವರ ನಿತ್ಯಾನಂದ ಸಭಾಂಗಣದಲ್ಲಿ ನಡೆಯಿತು.