ಬ್ರಹ್ಮಾವರ: ಅಕ್ರಮ ಮರಳು ಸಾಗಾಟ ಪ್ರಕರಣ; ಆರೋಪಿಗೆ ಮಧ್ಯಂತರ ಜಾಮೀನು ಮಂಜೂರು

Date:

spot_img

ಉಡುಪಿ: ಅಂಪಾರಿನ ದಕ್ಕೆಯಿಂದ ಟಿಪ್ಪರ್ ಲಾರಿಯಲ್ಲಿ ಅಕ್ರಮವಾಗಿ ಮರಳು ಕದ್ದು ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಬಂಧಿತರಾಗಿದ್ದ ಚಾಲಕ ವಸಂತ್ ಎಂಬುವವರಿಗೆ ಉಡುಪಿಯ ನ್ಯಾಯಾಲಯವು ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಪ್ರಕರಣದ ಹಿನ್ನೆಲೆ:

ಅಂಪಾರಿನಿಂದ ಬ್ರಹ್ಮಾವರ ಕಡೆಗೆ ಅಕ್ರಮವಾಗಿ ಮರಳನ್ನು ತುಂಬಿಸಿಕೊಂಡು ಸಾಗಾಟ ಮಾಡುವ ಮೂಲಕ ‘ಲಘು ಸಂಘಟಿತ ಅಪರಾಧ’ ಎಸಗಿದ್ದಾರೆ ಎಂಬ ಆರೋಪದಡಿ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಲಾರಿ ಚಾಲಕ ವಸಂತ್ ಅವರನ್ನು ಪೊಲೀಸರು ಬಂಧಿಸಿ, ಉಡುಪಿಯ ಪ್ರಥಮ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಕಾನೂನು ಕ್ರಮ:

ಆರೋಪಿಗಳ ವಿರುದ್ಧ ಹೊಸ ಕಾನೂನು ಸಂಹಿತೆಯಾದ B.N.S.S ಸೆಕ್ಷನ್ 112, 303(2) ಹಾಗೂ MMDR ಕಾಯ್ದೆಯ ಸೆಕ್ಷನ್ 4(1A) 2, (4) ಅಡಿಯಲ್ಲಿ ಜಾಮೀನು ರಹಿತ ಪ್ರಕರಣ ದಾಖಲಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ ಮಧ್ಯಂತರ ಜಾಮೀನು ನೀಡಿ ಆದೇಶಿಸಿದೆ.

ಆರೋಪಿಯ ಪರವಾಗಿ ಉಡುಪಿಯ ಖ್ಯಾತ ನ್ಯಾಯವಾದಿ ಆರೂರು ಸುಕೇಶ್ ಶೆಟ್ಟಿ ಅವರು ವಾದ ಮಂಡಿಸಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಡಿಗೆ ಸಂಗಾತಿ ಉದ್ಯಮ: ಒಂಟಿತನಕ್ಕೆ ತಾತ್ಕಾಲಿಕ ಪರಿಹಾರವೇ?

ಬೆಳೆಯುತ್ತಿರುವ ಬಾಡಿಗೆ ಸಂಗಾತಿ ಸಂಸ್ಕೃತಿಯ ಸಂಪೂರ್ಣ ವಿಶ್ಲೇಷಣೆ ಮತ್ತು ಉದ್ಯಮದ ಪ್ರಮುಖ ವಿವರಗಳು. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.