spot_img

ಶೃಂಗೇರಿಗೆ ಬರುತ್ತಿದ್ದ ಬಸ್ ಪಲ್ಟಿ: ಮನೆಯ ಮೇಲೆಯೇ ಬಿದ್ದ ಬಸ್ಸು!

Date:

ಚಿಕ್ಕಮಗಳೂರು, ಏಪ್ರಿಲ್ 9 : ಚಿಕ್ಕಮಗಳೂರಿನ ಕೊಪ್ಪ ತಾಲೂಕು ಜಲದುರ್ಗದ ಬಳಿ ಶೃಂಗೇರಿಗೆ ಬರುತ್ತಿದ್ದ KSRTC ಬಸ್ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಮನೆಯ ಮೇಲೆಯೇ ಪಲ್ಟಿಯಾಗಿ ಭಯಾನಕ ದುರಂತ ಸಂಭವಿಸಿದೆ.

ಘಟನೆ ಬುಧವಾರ ಬೆಳಿಗ್ಗೆ ಸಂಭವಿಸಿದ್ದು, ಸುಮಾರು 50 ಮಂದಿ ಪ್ರಯಾಣಿಕರಿದ್ದ ಬಸ್ಸಿನಲ್ಲಿ 20 ಜನರಿಗೆ ಗಂಭೀರ ಹಾಗೂ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡವರನ್ನು ತಕ್ಷಣವೇ ಜಯಪುರ ಹಾಗೂ ಕೊಪ್ಪದ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಬಸ್ ಬೆಂಗಳೂರಿನಿಂದ ಶೃಂಗೇರಿಗೆ ಹೊರಟಿದ್ದು, ಜಲದುರ್ಗಕ್ಕೆ ಸಮೀಪ ಬಂದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರಣ ಪಕ್ಕದ ಮನೆಯ ಮೇಲೆ ಬಸ್ ಏರಿ ಪಲ್ಟಿಯಾಗಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.

ಪ್ರವಾಸಾ ಪ್ರದೇಶವಾದ ಶೃಂಗೇರಿಗೆ ಬಸ್ ಹೊರಟಿದ್ದು, ಹೆಚ್ಚಿನ ಪ್ರಯಾಣಿಕರು ತೀರ್ಥಯಾತ್ರಿಕರು ಎನ್ನಲಾಗಿದೆ. ಬಸ್ಸು ಪಲ್ಟಿಯಾದ ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದು, ಸ್ಥಳೀಯರು ತಕ್ಷಣವೇ ರಕ್ಷಣಾ ಕಾರ್ಯದಲ್ಲಿ ಭಾಗಿಯಾಗಿ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರಿಯಲ್‌ಮಿ ನಿಯೋ 7 ಟರ್ಬೋ AI ಬಿಡುಗಡೆ: ಗೇಮರ್‌ಗಳಿಗಾಗಿ ಮೀಡಿಯಾಟೆಕ್ ಡೈಮನ್ಸಿಟಿ 9400e ಪ್ರೊಸೆಸರ್‌ನ ಫೋನ್

ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ತನ್ನ ಗೇಮಿಂಗ್ ಮತ್ತು ಬ್ಯಾಟರಿ-ಕೇಂದ್ರಿತ ಫೋನ್‌ಗಳಿಂದ ಹೆಸರುವಾಸಿಯಾಗಿರುವ ರಿಯಲ್ಮಿ, ಈಗ ತನ್ನ ನಿಯೋ ಸರಣಿಗೆ ಹೊಸ ಸೇರ್ಪಡೆಯನ್ನು ಮಾಡಿದೆ.

ಪೆರ್ಡೂರು: ಶಾಲಾ ಬಸ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ – ಮತ್ತೊಬ್ಬನಿಗೆ ಗಂಭೀರ ಗಾಯ

ಪೆರ್ಡೂರು ಗ್ರಾಮದ ಕೊಳಂಬೆ ಕ್ರಾಸ್ ಬಳಿ ಶಾಲಾ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ.

ಉಡುಪಿ ರಸ್ತೆ ಅಪಘಾತ: ಬೈಕ್ ಸ್ಕಿಡ್ ಆಗಿ ಯುವಕನ ದುರ್ಮರಣ, ಸಹಸವಾರ ಗಂಭೀರ

ಬೈಕ್ ಸ್ಕಿಡ್ ಆಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸಹಸವಾರ ಸಾವನ್ನಪ್ಪಿದ್ದು, ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.

ಮಧುಮೇಹ ಮತ್ತು ಬೊಜ್ಜು ನಿಯಂತ್ರಣಕ್ಕೆ ದಾಸವಾಳ: ಪ್ರಕೃತಿಯ ವರದಾನ

ದಾಸವಾಳದ ಎಲೆಗಳು, ಹೂವುಗಳು ಮತ್ತು ಬೇರುಗಳು ವೈವಿಧ್ಯಮಯ ಪೋಷಕಾಂಶಗಳು ಮತ್ತು ಜೈವಿಕ ಸಕ್ರಿಯ ಸಂಯುಕ್ತಗಳಿಂದ ಸಮೃದ್ಧವಾಗಿವೆ.