ಬೈಂದೂರಿನಲ್ಲಿ ಹಾಡಹಗಲೇ ಭೀಕರ ಕಳ್ಳತನ: 20 ಪವನ್ ಚಿನ್ನ, 2 ಲಕ್ಷ ನಗದು ದೋಚಿದ ಕಿರಾತಕರು

Date:

spot_img

ಉಡುಪಿ: ಜಿಲ್ಲೆಯ ಬೈಂದೂರು ತಾಲೂಕಿನ ಪಡುವರಿಯಲ್ಲಿ ಜನವಸತಿ ಪ್ರದೇಶದ ನಡುವೆಯೇ ಇರುವ ಮನೆಯೊಂದರ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದೋಚಿರುವ ಆಘಾತಕಾರಿ ಘಟನೆ ನಡೆದಿದೆ. ಪಡುವರಿಯ ಪಟವಾಲ್ ಹೌಸ್ ಎನ್ನುವ ನಿವಾಸದಲ್ಲಿ ಈ ಕಳವು ಸಂಭವಿಸಿದ್ದು, ಕಳ್ಳರು ಪಕ್ಕಾ ಸ್ಕೆಚ್ ಹಾಕಿ ಈ ಕೃತ್ಯ ಎಸಗಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ.

ಪರಮೇಶ್ವರ ಪಟವಾಲ್ ಅವರ ಮಗ, ಸೊಸೆ ಹಾಗೂ ಇಬ್ಬರು ಮೊಮ್ಮಕ್ಕಳು ವಾಸವಿದ್ದ ಈ ಹಂಚಿನ ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ಹೊಂಚು ಹಾಕಿದ್ದ ಖದೀಮರು, ಮನೆಯ ಬೀಗ ಮುರಿದು ಒಳನುಗ್ಗಿದ್ದಾರೆ. ಅಂದಾಜು 20 ಪವನ್ ಬಂಗಾರದ ಆಭರಣಗಳು ಮತ್ತು 2 ಲಕ್ಷ ರೂಪಾಯಿ ನಗದನ್ನು ಕಳ್ಳರು ಎಗರಿಸಿದ್ದಾರೆ. ವಿಶೇಷವೆಂದರೆ, ಮನೆಯ ಪಕ್ಕದಲ್ಲೇ ಪಡುವರಿ ಮತ್ತು ಸೋಮೇಶ್ವರ ರಸ್ತೆಗಳು ಹಾದುಹೋಗಿದ್ದು, ಸದಾ ಜನನಿಬಿಡವಾಗಿರುವ ಈ ಪ್ರದೇಶದಲ್ಲಿ ಸದ್ದಿಲ್ಲದೆ ಕಳ್ಳತನ ನಡೆದಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಹಂಚಿನ ಮನೆಯಾದ ಕಾರಣ ಕಳ್ಳರಿಗೆ ಒಳಪ್ರವೇಶಿಸಲು ಸುಲಭವಾಗಿದೆ ಎಂದು ಹೇಳಲಾಗುತ್ತಿದೆ.

ಘಟನಾ ಸ್ಥಳಕ್ಕೆ ಬೈಂದೂರು ಠಾಣೆಯ ಪೊಲೀಸ್ ಅಧಿಕಾರಿಗಳು, ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನವು ಮನೆಯಿಂದ ರಸ್ತೆಯವರೆಗೆ ತೆರಳಿ ಮರಳಿದ್ದು, ಮನೆಯ ಸಂಪೂರ್ಣ ಮಾಹಿತಿ ಇದ್ದವರೇ ಈ ಕೃತ್ಯ ಎಸಗಿದ್ದಾರೆ ಎಂಬ ಶಂಕೆ ಪೊಲೀಸರಿಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ (SP) ಮಾರ್ಗದರ್ಶನದಲ್ಲಿ ಕಳ್ಳರ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಿ ತನಿಖೆ ಚುರುಕುಗೊಳಿಸಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.