spot_img

ಅರ್ಧ ರಾತ್ರಿವರೆಗೂ ಧ್ವನಿವರ್ಧಕ ಗಲಾಟೆ: ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ವಿರುದ್ಧ ಎಫ್‌ಐಆರ್

Date:

spot_img
fir11

ಮಂಗಳೂರು : ನಿಯಮ ಮೀರಿ ಧ್ವನಿವರ್ಧಕ ಬಳಸಿದ ಆರೋಪದ ಮೇಲೆ ಹಾಗೂ ಪೊಲೀಸರೊಂದಿಗೆ ವಾಗ್ವಾದ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಕಾರಣ, ಪುಂಜಾಲಕಟ್ಟೆ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನೆ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದಲ್ಲಿ ನಡೆದಿದೆ.

ನಿಯಮ ಉಲ್ಲಂಘನೆ ಮತ್ತು ವಾಗ್ವಾದ

ಬುಧವಾರ ರಾತ್ರಿ ಪುಂಜಾಲಕಟ್ಟೆ ಗಣೇಶ ಮಂಟಪದಲ್ಲಿ ಧ್ವನಿವರ್ಧಕ ಬಳಸಿ ಕಾರ್ಯಕ್ರಮ ನಡೆಸಲಾಗುತ್ತಿತ್ತು. ರಾತ್ರಿ ಸುಮಾರು 10 ಗಂಟೆ ಸುಮಾರಿಗೆ ಪುಂಜಾಲಕಟ್ಟೆ ಠಾಣೆಯ ಪಿಎಸ್‌ಐ ಸ್ಥಳಕ್ಕೆ ಭೇಟಿ ನೀಡಿ, ಧ್ವನಿವರ್ಧಕ ಬಳಕೆಗೆ ಇರುವ ಕಾನೂನುಗಳನ್ನು ಪಾಲಿಸುವಂತೆ ಸೂಚಿಸಿದ್ದರು. ಆರಂಭದಲ್ಲಿ ಆಯೋಜಕರು ಧ್ವನಿವರ್ಧಕ ಸ್ಥಗಿತಗೊಳಿಸಿದ್ದರು.

ಆದರೆ, ರಾತ್ರಿ 11:50ರ ವೇಳೆಗೆ ಮತ್ತೆ ಧ್ವನಿವರ್ಧಕ ಬಳಸಿ ಕಾರ್ಯಕ್ರಮ ನಡೆಸುತ್ತಿರುವುದು ಕಂಡು ಬಂದಿದೆ. ಈ ಬಗ್ಗೆ ಪೊಲೀಸರು ಮತ್ತೆ ಪ್ರಶ್ನಿಸಿದಾಗ, ಸಮಿತಿ ಅಧ್ಯಕ್ಷ ಕೌಶಿಕ್‌ ಶೆಟ್ಟಿ, ಪುನೀತ್ ಮಡಂತ್ಯಾರು, ತಾರಾನಾಥ ಕಜಕ್ಕಾರು, ಗುರು ಮಡಂತ್ಯಾರು ಹಾಗೂ ಇತರ 10-15 ಜನರು ಪೊಲೀಸರೊಂದಿಗೆ ತೀವ್ರ ವಾಗ್ವಾದ ನಡೆಸಿದ್ದಾರೆ. ಈ ವೇಳೆ ಪೊಲೀಸರಿಗೆ ಧಿಕ್ಕಾರ ಕೂಗಿ, ತಮ್ಮ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಕರಣ ದಾಖಲು ಮತ್ತು ತನಿಖೆ

ಆಯೋಜಕರಿಗೆ ನೀಡಿದ್ದ ಅನುಮತಿ ಪತ್ರದಲ್ಲಿನ ಷರತ್ತುಗಳನ್ನು ಉಲ್ಲಂಘಿಸಿ ಧ್ವನಿವರ್ಧಕ ಬಳಸಿದ ಬಗ್ಗೆ ಹಾಗೂ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಕಾರಣ, ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡಿದ್ದು, ತನಿಖೆ ಮುಂದುವರೆದಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ವರದಕ್ಷಿಣೆ ಕಿರುಕುಳ: ಬೆಂಗಳೂರಿನಲ್ಲಿ ಗೃಹಿಣಿ ಅನುಮಾನಾಸ್ಪದ ಸಾವು, ಪತಿ ಪೋಲೀಸರ ವಶಕ್ಕೆ

ಮದುವೆಯಾಗಿ ಕೇವಲ ಮೂರೇ ವರ್ಷಕ್ಕೆ 26 ವರ್ಷದ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸುದ್ದಗುಂಟೆಪಾಳ್ಯದಲ್ಲಿ ನಡೆದಿದೆ.

ಪ್ರಯಾಣದ ವೇಳೆ ವಾಂತಿ ಸಮಸ್ಯೆಗೆ ಇಲ್ಲಿದೆ ಸರಳ ಮನೆಮದ್ದುಗಳು

ನೀವು ಪ್ರಯಾಣ ಮಾಡುವಾಗ ವಾಂತಿ ಅಥವಾ ವಾಕರಿಕೆ ಸಮಸ್ಯೆ ಎದುರಿಸುವುದು ಸಾಮಾನ್ಯ. ಇದಕ್ಕೆ ಮುಖ್ಯ ಕಾರಣ, ವಾಹನದ ಚಲನೆ ಮತ್ತು ದೇಹದ ಸಮತೋಲನದಲ್ಲಿನ ವ್ಯತ್ಯಾಸ.

ಸಾಲಬಾಧೆಗೆ ಮನನೊಂದು ದಂಪತಿ ಆತ್ಮಹತ್ಯೆ: 4 ವರ್ಷದ ಮಗನಿಗೂ ವಿಷಪ್ರಾಶನ

ತೀವ್ರ ಆರ್ಥಿಕ ಸಾಲದಿಂದ ಮನನೊಂದ ಉದ್ಯಮಿ ದಂಪತಿಗಳು ತಮ್ಮ 4 ವರ್ಷದ ಮಗನಿಗೆ ವಿಷ ನೀಡಿ ನಂತರ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ನಡೆದಿದೆ.

ವೈವಾಹಿಕ ಜೀವನಕ್ಕೆ ಕಾಲಿಟ್ಟ ಆ್ಯಂಕರ್ ಅನುಶ್ರೀ – ರೋಷನ್

ಕಳೆದ ಹಲವು ವರ್ಷಗಳಿಂದ ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿಯಾಗಿ ಕನ್ನಡಿಗರ ಮನೆ ಮಾತಾಗಿದ್ದ ಆ್ಯಂಕರ್ ಅನುಶ್ರೀ ಅವರು ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.