spot_img

ಸೆಲೆಬ್ರಿಟಿ ದಾಂಪತ್ಯದಲ್ಲಿ ಬಿರುಕು: ಅದಿತಿ ಶರ್ಮಾ – ಅಭಿನೀತ್ ಕೌಶಿಕ್ ವಿಚ್ಛೇದನದ ಹಂತಕ್ಕೆ

Date:

spot_img

ಮುಂಬಯಿ: ಇತ್ತೀಚಿನ ದಿನಗಳಲ್ಲಿ ಸೆಲೆಬ್ರಿಟಿ ಲೋಕದಲ್ಲಿ ವಿಚ್ಛೇದನದ ಸುದ್ದಿಗಳು ಹೆಚ್ಚಾಗುತ್ತಿವೆ. ಈಗ ಕಿರುತೆರೆ ನಟಿ ಅದಿತಿ ಶರ್ಮಾ ಮತ್ತು ಅಭಿನೀತ್ ಕೌಶಿಕ್ ದಾಂಪತ್ಯ ಜೀವನ ವಿಚ್ಛೇದನ ಹಂತಕ್ಕೆ ಬಂದಿದೆ.

2024ರ ನವೆಂಬರ್ 12ರಂದು ಅದಿತಿ ಮತ್ತು ಅಭಿನೀತ್ ವಿವಾಹವಾಗಿದ್ದು, ಮುಂಬೈನ ಗೋರೆಗಾಂವ್‌ನಲ್ಲಿ ಕೆಲ ಆಪ್ತರ ಸಮ್ಮುಖದಲ್ಲಿ ಸರಳವಾಗಿ ಮದುವೆ ನೆರವೇರಿತ್ತು. ಅದಿತಿ ತಮ್ಮ ವೃತ್ತಿ ಜೀವನದ ಮೇಲೆ ಪರಿಣಾಮ ಬೀರುವ ಆತಂಕದಿಂದ ಗುಟ್ಟಾಗಿ ಮದುವೆಯಾಗಲು ನಿರ್ಧರಿಸಿದ್ದರು.

“ಅದಿತಿ ಕಳೆದ ಒಂದೂವರೆ ವರ್ಷಗಳಿಂದ ನನ್ನನ್ನು ಮದುವೆಯಾಗಲು ಒತ್ತಾಯಿಸುತ್ತಿದ್ದರು. ನಾನು ಆ ಸಮಯದಲ್ಲಿ ಸಿದ್ಧನಾಗಿರಲಿಲ್ಲ. ಒಪ್ಪಿಕೊಂಡ ನಂತರ, ಮದುವೆ ಗುಟ್ಟಾಗಿ ಮಾಡುವಂತೆ ಕೇಳಿದಾಗ ನಾನು ಒಪ್ಪಿಕೊಂಡೆ,” ಎಂದು ಅಭಿನೀತ್ ತಿಳಿಸಿದ್ದಾರೆ.

ಮದುವೆಯ ಬಳಿಕ ಇಬ್ಬರು ಒಟ್ಟಾಗಿ ವಾಸಿಸುತ್ತಿದ್ದು, ಅಪಾರ್ಟ್‌ಮೆಂಟ್ ಖರೀದಿ ಮಾಡಿದ್ದರು. ಇದಾದ ಬಳಿಕ ಅದಿತಿ ‘ಅಪೊಲ್ಲೆನಾ’ ಧಾರಾವಾಹಿಯಲ್ಲಿ ನಟಿಸುತ್ತಿದ್ದು, ಸಹ ನಟ ಸಮರ್ಥ್ಯ ಅವರೊಂದಿಗೆ ಆಪ್ತ ಸಂಬಂಧ ಹೊಂದಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಅಭಿನೀತ್ ಮತ್ತು ಅದಿತಿಯ ನಡುವೆ ಮನಸ್ತಾಪ ಉಂಟಾಗಿದೆ.

ಇದರಿಂದ ಇಬ್ಬರ ನಡುವೆ ವಾಗ್ವಾದ ನಡೆದು, ಅದಿತಿ “ನಮ್ಮ ಮದುವೆಗೆ ಮಾನ್ಯತೆ ಇಲ್ಲ” ಎಂದು ಹೇಳಿದ್ದಾಳೆ ಎಂದು ಅಭಿನೀತ್ ಅವರ ವಕೀಲ ರಾಕೇಶ್ ಶೆಟ್ಟಿ ತಿಳಿಸಿದ್ದಾರೆ.

ವಿಷಯ ಇನ್ನಷ್ಟು ಬಿಗಡಾಯಿಸಿಕೊಂಡು, ಅದಿತಿಯ ಕುಟುಂಬ ಅಭಿನೀತ್ ಬಳಿ 25 ಲಕ್ಷ ರೂ. ಸೆಟಲ್‌ಮೆಂಟ್ ಗೆ ಬೇಡಿಕೆ ಇಟ್ಟಿದೆ ಎಂದು ಹೇಳಲಾಗುತ್ತಿದೆ. ವಕೀಲರ ಭೇಟಿಯ ಸಂದರ್ಭದಲ್ಲಿ ಅದಿತಿಯ ತಂದೆ ಅಭಿನೀತ್‌ಗೆ ಕಪಾಳಮೋಕ್ಷ ಮಾಡಿದ್ದರಿಂದ ಎರಡೂ ಕುಟುಂಬಗಳ ನಡುವೆ ಸಂಘರ್ಷ ಸೃಷ್ಟಿಯಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಉಡುಪಿಯಲ್ಲಿ ವರುಣನ ಆರ್ಭಟ: ಆಸ್ತಿಪಾಸ್ತಿಗೆ ಹಾನಿ

ಕರಾವಳಿ ಜಿಲ್ಲೆ ಉಡುಪಿಯಲ್ಲಿ ಕಳೆದ 24 ಗಂಟೆಗಳಿಂದ ಬಿಡದೇ ಸುರಿಯುತ್ತಿರುವ ಭಾರೀ ಗಾಳಿ ಮತ್ತು ಮಳೆಯು ವ್ಯಾಪಕ ಅವಾಂತರಗಳನ್ನು ಸೃಷ್ಟಿಸಿದ್ದು, ಜಿಲ್ಲೆಯ ಬಹುತೇಕ ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ

ಹರಿದ್ವಾರದಲ್ಲಿ ದುರಂತ: ಮಾನಸಾ ದೇವಿ ದೇವಾಲಯದಲ್ಲಿ ಕಾಲ್ತುಳಿತ, 7 ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಪುಣ್ಯಕ್ಷೇತ್ರ ಹರಿದ್ವಾರದಲ್ಲಿರುವ ಪ್ರಸಿದ್ಧ ಮಾನಸಾ ದೇವಿ ದೇವಾಲಯದಲ್ಲಿ ಭಾನುವಾರ (ಜುಲೈ 27) ಸಂಭವಿಸಿದ ದುರದೃಷ್ಟಕರ ಕಾಲ್ತುಳಿತದಲ್ಲಿ ಏಳು ಭಕ್ತರು ಪ್ರಾಣ ಕಳೆದುಕೊಂಡಿದ್ದು, 28ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ

ರಾಜ್ಯದ 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್: ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತ, ಸಂಚಾರ ಸ್ಥಗಿತ

ರಾಜ್ಯದಾದ್ಯಂತ ಮುಂಗಾರು ಮಳೆಯ ಅಬ್ಬರ ತೀವ್ರಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ

ಅಮೆರಿಕನ್ ಏರ್‌ಲೈನ್ಸ್ ವಿಮಾನದಲ್ಲಿ ಟೇಕ್‌ಆಫ್ ವೇಳೆ ಅಗ್ನಿ ಅವಘಡ: 179 ಮಂದಿ ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷಿತ ಸ್ಥಳಾಂತರ

ಡೆನ್ವರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕನ್ ಏರ್‌ಲೈನ್ಸ್‌ನ ವಿಮಾನವೊಂದರ ಟೇಕ್‌ಆಫ್ ಪ್ರಯತ್ನದ ಸಂದರ್ಭದಲ್ಲಿ ಪ್ರಮುಖ ಚಕ್ರಗಳ ಬಳಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಭಾರಿ ಆತಂಕಕ್ಕೆ ಕಾರಣವಾಗಿದೆ