spot_img

ಪದ್ಮಶ್ರಿ ಪುರಸ್ಕೃತ ಶತಾಯುಷಿ ಯೋಗ ಗುರು ಬಾಬಾ ಶಿವಾನಂದ್ ವಿಧಿವಶ

Date:

ಯು.ಬಿ.ಎನ್.ಡಿ : ಖ್ಯಾತ ಯೋಗ ಗುರು, ಪದ್ಮಶ್ರೀ ಪುರಸ್ಕೃತ ಬಾಬಾ ಶಿವಾನಂದ್ ಭಾನುವಾರ 128ನೇ ವಯಸ್ಸಿನಲ್ಲಿ ನಿಧನರಾದರು. ಇಂದಿನ ಬಾಂಗ್ಲಾದೇಶದ ಸಿಟ್ ಜಿಲ್ಲೆಯಲ್ಲಿ 1896ರ ಆಗಸ್ಟ್ 8ರಂದು ಜನಿಸಿದ್ದ ಅವರು ಆರು ವರ್ಷದೊಳಗೇ ತಮ್ಮ ಪೋಷಕರನ್ನು ಕಳೆದುಕೊಂಡು ತಪಸ್ಸು ಮತ್ತು ಶಿಸ್ತಿನ ಜೀವನವನ್ನು ಅಳವಡಿಸಿಕೊಂಡಿದ್ದರು.

ಅರ್ಧ ಹೊಟ್ಟೆಯ ಆಹಾರ, ನಿಯಮಿತ ಯೋಗಾಭ್ಯಾಸ ಮತ್ತು ಆತ್ಮಶುದ್ಧಿಯಿಂದ ಬದುಕಿದ ಅವರು ಪ್ರತಿದಿನ ಮುಂಜಾನೆ 3 ಗಂಟೆಗೆ ಎದ್ದು ಎಲ್ಲ ಕಾರ್ಯಗಳನ್ನು ಸ್ವತಃ ಮಾಡುತ್ತಿದ್ದರು. ತಾನು ಬೇಯಿಸಿದ ಆಹಾರವನ್ನೇ ಸೇವಿಸುವ ಅವರು ಚಾಪೆಯ ಮೇಲೆ ಮಲಗುತ್ತಿದ್ದರು.

ಯೋಗ ಮತ್ತು ಆಧ್ಯಾತ್ಮಿಕ ಕ್ಷೇತ್ರದ ಮಹತ್ತರ ಕೊಡುಗೆಗಾಗಿ ಅವರಿಗೆ 2022ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಲಾಗಿತ್ತು. ಬಾಬಾ ಶಿವಾನಂದ್ ಅವರ ನಿಧನದ ಸುದ್ದಿ ಕೇಳಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ವ್ಯಕ್ತಪಡಿಸಿದ್ದಾರೆ. “ಅವರ ಜೀವನದ ಶಿಸ್ತಿನಿಂದ ಪ್ರತಿಯೊಬ್ಬರೂ ಪ್ರೇರಣೆ ಪಡೆಯಬೇಕು” ಎಂದು ಪ್ರಧಾನಿ ಹೇಳಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತದ ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಆಯ್ಕೆ

ಭಾರತದ 17ನೇ ಉಪರಾಷ್ಟ್ರಪತಿಯಾಗಿ ಮಹಾರಾಷ್ಟ್ರದ ಹಾಲಿ ರಾಜ್ಯಪಾಲ ಮತ್ತು ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು ಆಯ್ಕೆಯಾಗಿದ್ದಾರೆ.

ಸಾಂಬಾರಿಗೆ ರುಚಿ ಮಾತ್ರವಲ್ಲ, ಆರೋಗ್ಯಕ್ಕೂ ಒಳ್ಳೆಯದು: ಕೆಂಪು ಮೆಣಸಿನಕಾಯಿಯ ಪ್ರಯೋಜನಗಳು

ಅಡುಗೆಮನೆಯಲ್ಲಿ ಸಾಮಾನ್ಯವಾಗಿ ಬಳಸುವ ಕೆಂಪು ಮೆಣಸಿನಕಾಯಿ ಕೇವಲ ಆಹಾರಕ್ಕೆ ಖಾರ ಮತ್ತು ರುಚಿ ನೀಡುವುದಷ್ಟೇ ಅಲ್ಲ, ಇದು ಅನೇಕ ಆರೋಗ್ಯಕಾರಿ ಗುಣಗಳನ್ನು ಸಹ ಹೊಂದಿದೆ.

ರಾಣಿಯರಾದ ಅಬ್ಬಕ್ಕ, ಕಿತ್ತೂರು ಚೆನ್ನಮ್ಮ, ಅಹಲ್ಯೆ ಬಾಯಿಯರ ಸಾಹಸ ಮಹಿಳೆಯರಿಗೆ ಸ್ಪೂರ್ತಿ : ಡಾ ಮೇಘಾ ಖಂಡೇಲವಾಲ

ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ ಎಸ್ ಇರಾಣಿ ಪದವಿ ಮಹಾವಿದ್ಯಾಲಯದಲ್ಲಿ ನಡೆದ ಮಹಾವಿದ್ಯಾಲಯದ ಮಹಿಳಾ ಕೋಶ, ಕೇಂದ್ರೀಯ ವಿಶ್ವವಿದ್ಯಾಲಯ ಕರ್ನಾಟಕ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ್ ಮಹಾ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿತು.

ದಾವಣಗೆರೆಯಲ್ಲಿ ರಾಜ್ಯಮಟ್ಟದ “ಕುಪ್ಮಾ” ಸಮಾವೇಶ

ಕುಪ್ಮಾದ ರಾಜ್ಯಮಟ್ಟದ ದ್ವಿತೀಯ ಸಮಾವೇಶವು 2025ರ ಸೆಪ್ಟೆಂಬರ್ ತಿಂಗಳಲ್ಲಿ ದಿನಾಂಕ 12 ಮತ್ತು 13ರಂದು 'ಎಸ್. ಎಸ್. ಮಲ್ಲಿಕಾರ್ಜುನ ಕಲ್ಚರಲ್ ಸೆಂಟರ್, ಬಿಐಇಟಿ, ದಾವಣಗೆರೆ, ಇಲ್ಲಿ ನಡೆಯಲಿದೆ.