spot_img

ವೈದ್ಯರಿಗೂ ಸಿಗದ ಕಾಯಿಲೆಗೆ ಚಾಟ್‌ಜಿಪಿಟಿ ಪರಿಹಾರ: AI ಶಕ್ತಿಯಿಂದ ಮಹಿಳೆಗೆ ಹೊಸ ಜೀವ!

Date:

spot_img

ಹೊಸದಿಲ್ಲಿ: ವೈದ್ಯರಿಂದಲೂ ಪತ್ತೆ ಹಚ್ಚಲಾಗದ ವಿಚಿತ್ರ ಕಾಯಿಲೆಯೊಂದಕ್ಕೆ ಕೃತಕ ಬುದ್ಧಿಮತ್ತೆಯ ಚಾಟ್‌ಬಾಟ್ ‘ಚಾಟ್‌ಜಿಪಿಟಿ’ ಕಾರಣವನ್ನು ಕಂಡುಹಿಡಿದು, ಮಹಿಳೆಯೊಬ್ಬರ ಜೀವವನ್ನು ಉಳಿಸಿದೆ ಎಂದು ಶ್ರೇಯಾ ಎಂಬವರು ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಪಾದಿಸಿದ್ದಾರೆ.

ಶ್ರೇಯಾ ಅವರ ತಾಯಿ ಒಂದೂವರೆ ವರ್ಷದಿಂದ ನಿರಂತರ ಕೆಮ್ಮಿನಿಂದ ಬಳಲುತ್ತಿದ್ದರು. ಇದರಿಂದ ಅವರ ಜೀವಕ್ಕೆ ಅಪಾಯವೂ ಇತ್ತು. ಹಲವು ವೈದ್ಯರನ್ನು ಸಂಪರ್ಕಿಸಿದರೂ, ರೋಗದ ಮೂಲ ಕಾರಣ ಏನೆಂದು ಕಂಡುಹಿಡಿಯಲು ಸಾಧ್ಯವಾಗಿರಲಿಲ್ಲ. ನಿರಾಸೆಗೊಂಡ ಶ್ರೇಯಾ, ತಮ್ಮ ತಾಯಿಯ ರೋಗಲಕ್ಷಣಗಳ ವಿವರಗಳನ್ನು ಚಾಟ್‌ಜಿಪಿಟಿಗೆ ನೀಡಿದಾಗ, ಆ ಚಾಟ್‌ಬಾಟ್ ಅಚ್ಚರಿಯ ಮಾಹಿತಿಯನ್ನು ನೀಡಿದೆ. ಶ್ರೇಯಾ ಅವರ ತಾಯಿಯ ರಕ್ತದೊತ್ತಡದ ನಿರ್ದಿಷ್ಟ ಔಷಧಿಯಿಂದಲೇ ಈ ಸಮಸ್ಯೆ ಸೃಷ್ಟಿಯಾಗಿದೆ ಎಂದು ಚಾಟ್‌ಜಿಪಿಟಿ ತಿಳಿಸಿದೆ.

ಚಾಟ್‌ಜಿಪಿಟಿ ನೀಡಿದ ಮಾಹಿತಿ ಆಧಾರದ ಮೇಲೆ, ವೈದ್ಯರ ಸಲಹೆ ಪಡೆದು ಔಷಧವನ್ನು ಬದಲಾಯಿಸಿದಾಗ, ಶ್ರೇಯಾ ಅವರ ತಾಯಿಯ ಆರೋಗ್ಯ ಸುಧಾರಿಸಿದೆ ಎಂದು ಅವರು ಹಂಚಿಕೊಂಡಿದ್ದಾರೆ. ಈ ಘಟನೆಯು ವೈದ್ಯಕೀಯ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆಯ ಸಾಮರ್ಥ್ಯ ಮತ್ತು ಭವಿಷ್ಯದ ಬಗ್ಗೆ ಚರ್ಚೆಗೆ ಗ್ರಾಸ ಒದಗಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಅತ್ಯಾಚಾರ ಆರೋಪ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ!

ಅತ್ಯಾಚಾರ ಆರೋಪ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಕಾರವಾರದಲ್ಲಿ ಎನ್‌ಐಟಿಕೆಯ ಬಿ.ಟೆಕ್ ವಿದ್ಯಾರ್ಥಿನಿ ಆತ್ಮಹತ್ಯೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನಲ್ಲಿ ತಾಲೂಕು ವೈದ್ಯಾಧಿಕಾರಿಯ ಪುತ್ರಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರದೃಷ್ಟಕರ ಘಟನೆ ನಡೆದಿದೆ.

ಮೋದಿ ಆಳ್ವಿಕೆಯಲ್ಲಿ ಹೊಸ ಇತಿಹಾಸ: ಇಂದಿರಾ ಗಾಂಧಿಯವರ ದಾಖಲೆ ಮುರಿದು ದೇಶದ 2ನೇ ದೀರ್ಘಾವಧಿ ಪ್ರಧಾನಿ!

ಪ್ರಧಾನಮಂತ್ರಿ ನರೇಂದ್ರ ಮೋದಿ ಭಾರತದ ಇತಿಹಾಸದಲ್ಲಿ ಎರಡನೇ ಅತಿ ದೀರ್ಘಾವಧಿ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಮಹತ್ವದ ದಾಖಲೆಯನ್ನು ಮಾಡಿದ್ದಾರೆ.

ದಿನ ವಿಶೇಷ – ಡಾ. ಎಪಿಜೆ ಅಬ್ದುಲ್ ಕಲಾಂ ಸ್ಮರಣಾರ್ಥ ದಿನ

ಜುಲೈ 27 ರಂದು ಆಚರಿಸಲಾಗುವ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಸ್ಮರಣಾರ್ಥ ದಿನವು ಭಾರತದ ಮಾಜಿ ರಾಷ್ಟ್ರಪತಿ ಮತ್ತು ಮಹಾನ್ ವಿಜ್ಞಾನಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಪುಣ್ಯತಿಥಿಯಾಗಿದೆ