spot_img

ವೈದ್ಯರಿಗೂ ಸಿಗದ ಕಾಯಿಲೆಗೆ ಚಾಟ್‌ಜಿಪಿಟಿ ಪರಿಹಾರ: AI ಶಕ್ತಿಯಿಂದ ಮಹಿಳೆಗೆ ಹೊಸ ಜೀವ!

Date:

spot_img
spot_img

ಹೊಸದಿಲ್ಲಿ: ವೈದ್ಯರಿಂದಲೂ ಪತ್ತೆ ಹಚ್ಚಲಾಗದ ವಿಚಿತ್ರ ಕಾಯಿಲೆಯೊಂದಕ್ಕೆ ಕೃತಕ ಬುದ್ಧಿಮತ್ತೆಯ ಚಾಟ್‌ಬಾಟ್ ‘ಚಾಟ್‌ಜಿಪಿಟಿ’ ಕಾರಣವನ್ನು ಕಂಡುಹಿಡಿದು, ಮಹಿಳೆಯೊಬ್ಬರ ಜೀವವನ್ನು ಉಳಿಸಿದೆ ಎಂದು ಶ್ರೇಯಾ ಎಂಬವರು ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಪಾದಿಸಿದ್ದಾರೆ.

ಶ್ರೇಯಾ ಅವರ ತಾಯಿ ಒಂದೂವರೆ ವರ್ಷದಿಂದ ನಿರಂತರ ಕೆಮ್ಮಿನಿಂದ ಬಳಲುತ್ತಿದ್ದರು. ಇದರಿಂದ ಅವರ ಜೀವಕ್ಕೆ ಅಪಾಯವೂ ಇತ್ತು. ಹಲವು ವೈದ್ಯರನ್ನು ಸಂಪರ್ಕಿಸಿದರೂ, ರೋಗದ ಮೂಲ ಕಾರಣ ಏನೆಂದು ಕಂಡುಹಿಡಿಯಲು ಸಾಧ್ಯವಾಗಿರಲಿಲ್ಲ. ನಿರಾಸೆಗೊಂಡ ಶ್ರೇಯಾ, ತಮ್ಮ ತಾಯಿಯ ರೋಗಲಕ್ಷಣಗಳ ವಿವರಗಳನ್ನು ಚಾಟ್‌ಜಿಪಿಟಿಗೆ ನೀಡಿದಾಗ, ಆ ಚಾಟ್‌ಬಾಟ್ ಅಚ್ಚರಿಯ ಮಾಹಿತಿಯನ್ನು ನೀಡಿದೆ. ಶ್ರೇಯಾ ಅವರ ತಾಯಿಯ ರಕ್ತದೊತ್ತಡದ ನಿರ್ದಿಷ್ಟ ಔಷಧಿಯಿಂದಲೇ ಈ ಸಮಸ್ಯೆ ಸೃಷ್ಟಿಯಾಗಿದೆ ಎಂದು ಚಾಟ್‌ಜಿಪಿಟಿ ತಿಳಿಸಿದೆ.

ಚಾಟ್‌ಜಿಪಿಟಿ ನೀಡಿದ ಮಾಹಿತಿ ಆಧಾರದ ಮೇಲೆ, ವೈದ್ಯರ ಸಲಹೆ ಪಡೆದು ಔಷಧವನ್ನು ಬದಲಾಯಿಸಿದಾಗ, ಶ್ರೇಯಾ ಅವರ ತಾಯಿಯ ಆರೋಗ್ಯ ಸುಧಾರಿಸಿದೆ ಎಂದು ಅವರು ಹಂಚಿಕೊಂಡಿದ್ದಾರೆ. ಈ ಘಟನೆಯು ವೈದ್ಯಕೀಯ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆಯ ಸಾಮರ್ಥ್ಯ ಮತ್ತು ಭವಿಷ್ಯದ ಬಗ್ಗೆ ಚರ್ಚೆಗೆ ಗ್ರಾಸ ಒದಗಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ನಿಧನಕ್ಕೆ ದಿನಕರ ಶೆಟ್ಟಿ ಪಳ್ಳಿ ಸಂತಾಪ

ಕಾರ್ಕಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ (48) ಅವರ ಆತ್ಮಹತ್ಯೆಯ ದುರಂತ ಸಾವಿನ ವಿಷಯ ತಿಳಿದು ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಉಪಾಧ್ಯಕ್ಷರಾದ ದಿನಕರ ಶೆಟ್ಟಿ, ಪಳ್ಳಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಪಾಸ್‌ಪೋರ್ಟ್‌ ವಿಷಯಕ್ಕೆ ಜಗಳ: ಮಗಳ ಎದುರೇ ಹೆಂಡತಿಯನ್ನು ಗುಂಡಿಟ್ಟು ಕೊಂದ ಪತಿ

ಪಾಸ್‌ಪೋರ್ಟ್ ವಿಚಾರವಾಗಿ ನಡೆದ ಜಗಳದಲ್ಲಿ ಪತಿಯೋರ್ವ ತನ್ನ ಮಗಳ ಎದುರೇ ಪತ್ನಿಯನ್ನು ಗುಂಡಿಕ್ಕಿ ಕೊಂದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಮಂಗಳವಾರ (ಅ. 14) ಬೆಳಗ್ಗೆ ನಡೆದಿದೆ.

ಜಿಟೆಕ್ಸ್ ಗ್ಲೋಬಲ್ 2025: ವೀಸಾ ಉಲ್ಲಂಘನೆ ಪತ್ತೆಗೆ ಎ.ಐ. ಶಸ್ತ್ರ ಸಜ್ಜಿತ ಸ್ಮಾರ್ಟ್ ಕಾರುಗಳು – ದುಬೈಯಿಂದ ತಂತ್ರಜ್ಞಾನದ ಹೊಸ ದಾಪುಗಾಲು

ದುಬೈನಲ್ಲಿ ನಡೆಯುತ್ತಿರುವ ಜಗತ್ತಿನ ಅತಿದೊಡ್ಡ ತಂತ್ರಜ್ಞಾನ ಪ್ರದರ್ಶನವಾದ ಜಿಟೆಕ್ಸ್ ಗ್ಲೋಬಲ್ 2025 ಮತ್ತೊಮ್ಮೆ ವಿಶ್ವದ ಗಮನವನ್ನು ಸೆಳೆದಿದೆ

ಭಾರತದಲ್ಲಿ AI ಹಬ್‌: $15 ಬಿಲಿಯನ್ ಹೂಡಿಕೆಗೆ ಮುಂದಾದ ಗೂಗಲ್; ಪ್ರಧಾನಿ ಮೋದಿಗೆ ಮಾಹಿತಿ ನೀಡಿದ ಸುಂದರ್ ಪಿಚೈ

ಟೆಕ್ ದೈತ್ಯ ಗೂಗಲ್‌ ಸಂಸ್ಥೆಯ ಮುಖ್ಯಸ್ಥ ಸುಂದರ್ ಪಿಚೈ ಅವರು ಮಂಗಳವಾರ (ಅ. 14) ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಕೃತಕ ಬುದ್ಧಿಮತ್ತೆ (AI) ಕುರಿತು ಮಹತ್ವದ ಮಾತುಕತೆ ನಡೆಸಿದರು.