spot_img

ಚಿಕ್ಕಮಗಳೂರು: ಆನೆ ದಾಳಿಗೆ ಬಲಿಯಾದ 58 ವರ್ಷದ ರೈತ

Date:

ಚಿಕ್ಕಮಗಳೂರು: ತರೀಕೆರೆ ತಾಲೂಕಿನ ಗುರುಪುರ ಗ್ರಾಮದಲ್ಲಿ ಆನೆ ದಾಳಿಗೆ ರೈತ ಮೃತಪಟ್ಟ ಘಟನೆ ಸೋಮವಾರ (ಮಾರ್ಚ್ 31) ನಡೆದಿದೆ. ವೆಂಕಟೇಶ್ (58) ಮೃತ ರೈತ.

ಏಕಾಂಗಿ ಸಲಗದ ಅಟ್ಟಹಾಸ :
ಬೆಳಗಿನ ಜಾವ ತನ್ನ ತೋಟದಲ್ಲಿ ಹಸುಗಳನ್ನು ಕಟ್ಟುತ್ತಿದ್ದ ವೇಳೆ ಒಂಟಿ ಸಲಗವು ದಾಳಿ ಮಾಡಿದೆ. ಆನೆ ಉಸಿರಾಟದ ಶಬ್ದ ಕೇಳಿ ಗಮನಿಸಿದ ವೆಂಕಟೇಶ್ ಟಾರ್ಚ್ ಬೆಳಗಿಸಿದ್ದಾನೆ. ಆದರೆ, ಬೆಳಕು ನೋಡುತ್ತಿದ್ದಂತೆಯೇ ಆನೆ ಆಕ್ರೋಶಗೊಂಡು ರೈತನನ್ನು ಸೊಂಡಿಲಿನಿಂದ ಹಿಡಿದು ತೆಂಗಿನ ಮರಕ್ಕೆ ಹೊಡೆದು ಬಿಸಾಕಿದೆ. ಪರಿಣಾಮ ಸ್ಥಳದಲ್ಲೇ ಅವರು ಪ್ರಾಣ ಕಳೆದುಕೊಂಡಿದ್ದಾರೆ.

ಸಾರ್ವಜನಿಕರಿಂದ ಮನವಿ :
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಕ್ಕವಳ್ಳಿ ಹೋಬಳಿ ನಿವಾಸಿಗಳು ಈ ಒಂಟಿ ಸಲಗದ ಹಾವಳಿಯಿಂದ ತೀವ್ರ ಅಸಮಾಧಾನಗೊಂಡಿದ್ದು, ಕೇವಲ ಪರಿಹಾರ ನೀಡುವುದರಿಂದ ಸಮಸ್ಯೆ ಪರಿಹಾರವಾಗದು ಎಂದು ಅಭಿಪ್ರಾಯಪಟ್ಟಿದ್ದಾರೆ. ಆನೆಯನ್ನು ಬೇಗ ಸ್ಥಳಾಂತರಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಲ್ಲಿ ಸಾರ್ವಜನಿಕರು ಒತ್ತಾಯಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಹಸಿರು ದ್ರಾಕ್ಷಿಯ 6 ಮಹತ್ವದ ಆರೋಗ್ಯ ಲಾಭಗಳು!

ಸಿಹಿ ಮತ್ತು ಸ್ವಲ್ಪ ಹುಳಿ ರುಚಿಯೊಂದಿಗೆ, ದ್ರಾಕ್ಷಿ ಹಣ್ಣು ಆರೋಗ್ಯಕ್ಕೆ ಅತ್ಯಂತ ಲಾಭದಾಯಕವೆಂಬುದು ತಜ್ಞರ ಅಭಿಪ್ರಾಯ. ಪೌಷ್ಟಿಕತೆಯಿಂದ ಸಮೃದ್ಧವಾಗಿರುವ ಈ ಹಣ್ಣು ದೇಹದ ವಿವಿಧ ಅಂಗಾಂಗಗಳಿಗೆ ಬಲ ನೀಡುತ್ತಿದ್ದು, ಹಲವಾರು ಆರೋಗ್ಯ ಸಮಸ್ಯೆಗಳನ್ನು ತಡೆಯುವಲ್ಲಿ ಸಹಕಾರಿ.

ಆರ್‌ಸಿಬಿ ಕಪ್ ಗೆದ್ದ ಖುಷಿಯಲ್ಲಿ ಟ್ವೀಟ್‌ ಮಾಡಿದ ವಿಜಯ್ ಮಲ್ಯಗೆ ಎಸ್‌ಬಿಐ ತಿರುಗುಬಾಣ

ಆರ್‌ಸಿಬಿ ಕಪ್ ಗೆದ್ದ ಖುಷಿಯಲ್ಲಿ ಟ್ವೀಟ್‌ ಮಾಡಿದ ವಿಜಯ್ ಮಲ್ಯಗೆ ಎಸ್‌ಬಿಐ ನಗುಮುಖದ ಇಮೋಜಿಯೊಂದಿಗೆ ಪ್ರತಿಕ್ರಿಯಿಸಿದೆ.

ಬೆವರಿಲ್ಲದೇ ಲಕ್ಷಾಂತರ ರೂಪಾಯಿ ಗಳಿಕೆ: ಮುಂಬೈನ ಆಟೋ ಚಾಲಕನ ಸ್ಮಾರ್ಟ್ ಐಡಿಯಾ

ಹೆಚ್ಚುವರಿ ಶ್ರಮವಿಲ್ಲದೇ ದುಡ್ಡು ಗಳಿಸುವವರ ಕಥೆಗಳು ಅಪರೂಪ, ಆದರೆ ಮುಂಬೈನ ಆಟೋ ಚಾಲಕನೊಬ್ಬ ತನ್ನ ಚತುರತನದಿಂದ ದಿನಕ್ಕೆ ಸಾವಿರಾರು ರೂ. ಗಳಿಸುತ್ತಿರುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಗ್ರಾಮ ಪಂಚಾಯತ್ ವ್ಯಾಪ್ತಿಗೂ ರೆರಾ ಕಡ್ಡಾಯ

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿಯೂ ಬಡಾವಣೆ ಅನುಮೋದನೆಗೆ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ (ರೆರಾ) ನೋಂದಣಿಯನ್ನು ಕಡ್ಡಾಯಗೊಳಿಸಿ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.