ಕಾಡಿನಲ್ಲಿ ಕಳೆದುಹೋದ 10 ಮೆಡಿಕಲ್ ವಿದ್ಯಾರ್ಥಿಗಳ ರಕ್ಷಣೆ

Date:

spot_img

ಚಿಕ್ಕಮಗಳೂರು: ಟ್ರಕ್ಕಿಂಗ್ ಮಾಡಲು ಬಂದ 10 ಮೆಡಿಕಲ್ ವಿದ್ಯಾರ್ಥಿಗಳು ದಟ್ಟ ಕಾಡಿನಲ್ಲಿ ದಾರಿ ತಪ್ಪಿ ನಿತ್ರಾಣಗೊಂಡು, ಪೊಲೀಸರು ಮತ್ತು ಸ್ಥಳೀಯರ ಸಹಯೋಗದಿಂದ 2ಗಂಟೆ ರಾತ್ರಿಗೆ ಅವರನ್ನು ರಕ್ಷಿಸಿದ ಘಟನೆ ನಡೆದಿದೆ.

ಮೂಡಿಗೆರೆ ತಾಲೂಕಿನ ಬಲ್ಲಾಳರಾಯನದುರ್ಗ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಚಿತ್ರದುರ್ಗದ ಬಸವೇಶ್ವರ ಮೆಡಿಕಲ್ ಕಾಲೇಜಿನ 5 ಹುಡುಗರು ಮತ್ತು 5 ಹುಡುಗಿಯರು ಬಲ್ಲಾಳರಾಯನದುರ್ಗದಿಂದ ಟ್ರಕ್ಕಿಂಗ್ ಪ್ರಾರಂಭಿಸಿದ್ದರು. ಆದರೆ, ದಾರಿ ತಪ್ಪಿ ಅವರು ದಟ್ಟ ಕಾಡಿನಲ್ಲಿ ಸಿಕ್ಕಿಹಾಕಿಕೊಂಡರು. ದೀರ್ಘ ಸಮಯ ಅಲೆದಾಟದ ನಂತರ ಅವರು ದಣಿದು ನಿತ್ರಾಣಗೊಂಡಿದ್ದರು.

ವಿದ್ಯಾರ್ಥಿಗಳು ಕಾಡಿನಲ್ಲಿ ಕಳೆದುಹೋಗಿದ್ದಾರೆಂದು ತಿಳಿದು ಪೊಲೀಸರು , ಸ್ಥಳೀಯರು ಮತ್ತು ಅರಣ್ಯ ಇಲಾಖೆಯವರು ಸಂಜೆ 6 ಗಂಟೆಯಿಂದ ಹುಡುಕಾಟ ಆರಂಭಿಸಿದರು. ಬಾಳೂರು ಠಾಣಾಧಿಕಾರಿ ದಿಲೀಪ್ ಕುಮಾರ್ ಮತ್ತು ಸ್ನೇಕ್ ರೆಸ್ಕ್ಯೂ ತಂಡದ ಆರಿಫ್ ಅವರ ನೇತೃತ್ವದಲ್ಲಿ ರಾತ್ರಿ 2ಗಂಟೆಗೆ ವಿದ್ಯಾರ್ಥಿಗಳನ್ನು ಕಾಡಿನಿಂದ ಸುರಕ್ಷಿತವಾಗಿ ಕರೆ ತರಲಾಯಿತು.

ರಕ್ಷಣೆ ನೀಡಿದ ಪೊಲೀಸರು ಮತ್ತು ಸ್ಥಳೀಯರಿಗೆ ವಿದ್ಯಾರ್ಥಿಗಳು ಕೃತಜ್ಞತೆ ಸೂಚಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ