spot_img

ಟ್ರಂಪ್ ಸುಂಕದ ಬೆನ್ನಲ್ಲೇ ಭಾರತಕ್ಕೆ ಚೀನಾದ ಒಲವು – ಉಭಯ ರಾಷ್ಟ್ರಗಳ ಬಾಂಧವ್ಯ ಗಟ್ಟಿಯಾಗುವ ಲಕ್ಷಣ

Date:

spot_img

ಬೀಜಿಂಗ್: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚೀನಾದಿಂದ ರಫ್ತು ಆಗುವ ಸರಕುಗಳ ಮೇಲೆ ಶೇ.104ರಷ್ಟು ಸುಂಕ ವಿಧಿಸಿರುವುದಕ್ಕೆ ಪ್ರತಿಯಾಗಿ ಚೀನಾ ಇದೀಗ ಭಾರತದತ್ತ ಸ್ನೇಹ ಹಸ್ತ ಚಾಚಿದೆ. ಚೀನಾದ ವಿದೇಶಾಂಗ ಸಚಿವೆ ವಾಂಗ್ ಇ ಅವರು ಭಾರತ ಹಾಗೂ ಚೀನಾದ ನಡುವಿನ ವ್ಯಾಪಾರ ಸಂಬಂಧಗಳು ಉತ್ತಮವಾಗಿವೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಟ್ರಂಪ್ ಘೋಷಣೆಯ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್, “ಚೀನಾ ತನ್ನ ನೆರೆಯ ರಾಷ್ಟ್ರಗಳೊಂದಿಗೆ ಬಾಂಧವ್ಯವನ್ನು ಗಟ್ಟಿ ಮಾಡುವುದು ಅವಶ್ಯಕ” ಎಂದು ಹೇಳಿದ್ದಾರೆ. ಬುಧವಾರ ಚೀನಾದ ವಿವಿಧ ದೇಶಗಳ ರಾಯಭಾರಿಗಳೊಂದಿಗೆ ಸಭೆ ನಡೆಸಿದ ಅವರು, ಆಧುನಿಕ ಯುಗದಲ್ಲಿ ಚೀನಾ ಮತ್ತು ನೆರೆಯ ರಾಷ್ಟ್ರಗಳು ಹೇಗೆ ನಡೆದುಕೊಳ್ಳಬೇಕು ಎಂಬ ಕುರಿತು ಮಾರ್ಗದರ್ಶನ ನೀಡಿದ್ದಾರೆ. ಚೀನಾದ ವ್ಯಾಪಾರ ಸಂಬಂಧಿತ ಸಲಹೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದೇ ಸಂದರ್ಭ ಭಾರತದಲ್ಲಿರುವ ಚೀನಾದ ರಾಯಭಾರಿ ಯೂ ಜಿಂಗ್ ಮಾತನಾಡಿ, “ಇತ್ತೀಚಿನ ದಿನಗಳಲ್ಲಿ ಭಾರತ–ಚೀನಾದ ನಡುವಿನ ವ್ಯಾಪಾರ ಸಂಬಂಧ ಗಟ್ಟಿಯಾಗುತ್ತಿದೆ. ಜಾಗತಿಕ ಆರ್ಥಿಕತೆಯಲ್ಲಿ ಚೀನಾ ಶೇ.30ರಷ್ಟು ಕೊಡುಗೆ ನೀಡುತ್ತಿದೆ. ಜಾಗತಿಕ ವ್ಯಾಪಾರದಲ್ಲಿ ಏಕಸ್ವಾಮ್ಯತೆಯ ವಿರುದ್ಧ ಎಲ್ಲಾ ರಾಷ್ಟ್ರಗಳು ಒಟ್ಟಾಗಿ ನಿಲ್ಲಬೇಕು” ಎಂದು ಹೇಳಿದ್ದಾರೆ.

ಭಾರತದ ಪ್ರತಿಕ್ರಿಯೆ: ಖಾಸಗಿ ಸುದ್ದಿಸಂಸ್ಥೆ ಆಯೋಜಿಸಿದ ಸಂವಾದದಲ್ಲಿ ಮಾತನಾಡಿದ ವಿದೇಶಾಂಗ ಸಚಿವ ಎಸ್. ಜೈಶಂಕರ್, “ಭಾರತ–ಚೀನಾ ಸಂಬಂಧ ಈಗ ಸಕಾರಾತ್ಮಕವಾಗಿದೆ. ಗಡಿವಿವಾದಗಳು ನಿವಾರಣೆಯ ಹಂತದಲ್ಲಿವೆ. ಉಭಯ ದೇಶಗಳ ನಡುವೆ ವಿಮಾನ ಸಂಚಾರ ಪುನರಾರಂಭವಾಗಿದೆ. ಮಾನಸ ಸರೋವರ ಯಾತ್ರೆಗೆ ಚೀನಾ ಅನುಮತಿ ನೀಡಿದೆ” ಎಂದು ಸ್ಪಷ್ಟಪಡಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಹಿರ್ಗಾನ ಸಂತ ಮರಿಯ ಗೊರೆಟ್ಟಿ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ: ಸದೃಢ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳಿಗೆ ಕರೆ

ಬೈಲೂರು ವಲಯದ ಹಿರ್ಗಾನ ಕಾರ್ಯಕ್ಷೇತ್ರದ ಸಂತ ಮರಿಯ ಗೊರೆಟ್ಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಗಳ ಜಂಟಿ ಆಶ್ರಯದಲ್ಲಿ "ಸ್ವಾಸ್ಥ್ಯ ಸಂಕಲ್ಪ" ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು

ಧಾರ್ಮಿಕ ಸೌಹಾರ್ದಕ್ಕೆ ಬೈಲೂರು ಮಾದರಿ: ಭಜನಾ ಪರಿಕರ ವಿತರಣಾ ಸಮಾರಂಭಕ್ಕೆ ಸಿದ್ಧತೆ

ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಗಳಲ್ಲಿ ಸಕ್ರಿಯವಾಗಿರುವ ಭಜನಾ ಮಂಡಳಿಗಳಿಗೆ ಉತ್ತೇಜನ ನೀಡುವ ದೃಷ್ಟಿಯಿಂದ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್, ಭಜನಾ ಮಂಡಳಿಗಳ ಒಕ್ಕೂಟ ಹಾಗೂ ಕರಾವಳಿ ಭಜನಾ ಸಂಸ್ಕಾರ ವೇದಿಕೆ

ಮೈಕ್ರೋಸಾಫ್ಟ್ ಶೇರ್‌ಪಾಯಿಂಟ್‌ಗೆ ಸೈಬರ್ ದಾಳಿ: ರಾಷ್ಟ್ರ-ಪ್ರಾಯೋಜಿತ ಹ್ಯಾಕರ್‌ಗಳಿಂದ ಸೂಕ್ಷ್ಮ ಡೇಟಾ ಸೋರಿಕೆ!

ಮೈಕ್ರೋಸಾಫ್ಟ್‌ನ ಶೇರ್‌ಪಾಯಿಂಟ್ ಪ್ಲಾಟ್‌ಫಾರ್ಮ್ ಮೇಲೆ ಇತ್ತೀಚೆಗೆ ಪ್ರಮುಖ ಭದ್ರತಾ ಘಟನೆಯೊಂದು ಪರಿಣಾಮ ಬೀರಿದೆ.

ಜು.28ರ ‘ಏಕ ವಿನ್ಯಾಸ’ ಸಮಸ್ಯೆ ವಿರುದ್ಧ ಬಿಜೆಪಿ ಪ್ರತಿಭಟನೆ ಯಶಸ್ವಿಗೊಳಿಸಲು ಕುತ್ಯಾರು ಕರೆ

ಜಿಲ್ಲೆಯ ಸಂಸದರು, ಶಾಸಕರು, ಪಕ್ಷದ ಪ್ರಮುಖರು ಪಾಲ್ಗೊಳ್ಳುವ ಈ ಪ್ರತಿಭಟನೆಯನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಹಾಗೂ ಸದ್ರಿ ಸಮಸ್ಯೆಯನ್ನು ಎದುರಿಸುತ್ತಿರುವ ಸಾರ್ವಜನಿಕರು ಸೇರಿ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.