ಚಿನ್ನದ ಆಸೆಗೆ ಅಜ್ಜಿ ಕೊಲೆ: “ಕಜ್ಜಾಯ ಕೊಡುವ” ನೆಪದಲ್ಲಿ ಕರೆಸಿ ಅಟ್ಟಹಾಸ, ಕಿಲ್ಲರ್ ಲೇಡಿ ಅರೆಸ್ಟ್

Date:

spot_img

ಬೆಂಗಳೂರು: ದೀಪಾವಳಿ ಹಬ್ಬದ ಸೋಗಿನಲ್ಲಿ ವೃದ್ಧೆಯೊಬ್ಬರನ್ನು ಮನೆಗೆ ಕರೆಸಿ, ಅವರಲ್ಲಿದ್ದ ಚಿನ್ನಾಭರಣಗಳಿಗಾಗಿ ಬರ್ಬರವಾಗಿ ಕೊಲೆ ಮಾಡಿ, ಮೃತದೇಹವನ್ನು ಕೆರೆಗೆ ಎಸೆದಿದ್ದ ಆಘಾತಕಾರಿ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಕೂಗೂರು ಬಳಿ ನಡೆದಿದೆ. ಈ ಸಂಬಂಧ ಸರ್ಜಾಪುರ ಪೊಲೀಸರು ಚಾಲಾಕಿ ಮಹಿಳೆಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಘಟನೆ ವಿವರ

ಮೃತರನ್ನು 68 ವರ್ಷದ ಭದ್ರಮ್ಮ ಎಂದು ಗುರುತಿಸಲಾಗಿದೆ. ಹತ್ಯೆ ಮಾಡಿದ ಆರೋಪಿಯನ್ನು ಅದೇ ಊರಿನ ದೀಪಾ ಎಂಬ ಮಹಿಳೆ ಎಂದು ತಿಳಿದುಬಂದಿದೆ.

ಅಕ್ಟೋಬರ್ 30 ರಂದು ಭದ್ರಮ್ಮ ಅವರು ನಾಪತ್ತೆಯಾಗಿದ್ದ ಬಗ್ಗೆ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಆರಂಭಿಸಿದ ಪೊಲೀಸರಿಗೆ, ದೀಪಾ ಅವರ ವರ್ತನೆಯಲ್ಲಿ ಅನುಮಾನಗಳು ಕಂಡುಬಂದವು. ಪೊಲೀಸರ ಶೈಲಿಯಲ್ಲಿ ವಿಚಾರಣೆ ನಡೆಸಿದಾಗ, ಭದ್ರಮ್ಮ ಅವರ ಕಣ್ಮರೆಯ ಹಿಂದಿನ ಸತ್ಯ ಬಯಲಾಗಿದೆ.

“ಕಜ್ಜಾಯ”ದ ನೆಪ, ಕೊಲೆಗೆ ಸಂಚು

ಆರೋಪಿ ದೀಪಾ ಅವರು, ದೀಪಾವಳಿ ಹಬ್ಬಕ್ಕೆ ಮಾಡಿದ ಕಜ್ಜಾಯವನ್ನು ನೀಡುತ್ತೇನೆ ಎಂದು ಹೇಳಿ, ಭದ್ರಮ್ಮ ಅವರನ್ನು ತನ್ನ ಮನೆಗೆ ಕರೆಸಿಕೊಂಡಿದ್ದಳು. ಭದ್ರಮ್ಮ ಅವರು ತಮ್ಮ ಬಳಿ ಇದ್ದ ಚಿನ್ನಾಭರಣಗಳನ್ನು ಧರಿಸಿ ಬಂದಿದ್ದನ್ನು ಗಮನಿಸಿದ ದೀಪಾ, ಆ ಚಿನ್ನಗಳನ್ನು ದೋಚುವ ಉದ್ದೇಶದಿಂದ ಭದ್ರಮ್ಮ ಅವರನ್ನು ಕೊಲೆ ಮಾಡಿದ್ದಾಳೆ.

ಅಟ್ಟಹಾಸ ಮೆರೆದ ದೀಪಾ, ಕೊಲೆಯಾದ ನಂತರ ಎರಡು ದಿನಗಳ ಕಾಲ ವೃದ್ಧೆಯ ಶವವನ್ನು ತನ್ನ ಮನೆಯೊಳಗೆಯೇ ಬಚ್ಚಿಟ್ಟಿದ್ದಳು. ಆದರೆ, ಶವದಿಂದ ದುರ್ವಾಸನೆ ಬರಲಾರಂಭಿಸಿದಾಗ, ದೊಡ್ಡದೊಂದು ಸಂಚು ರೂಪಿಸಿದ್ದಾಳೆ.

ಶವವನ್ನು ಕೆರೆಗೆ ಎಸೆದ ಕಿಲ್ಲರ್

ದುರ್ವಾಸನೆ ತಡೆಯಲಾಗದೆ, ದೀಪಾ ಕಾರಿನಲ್ಲಿ ಮೃತದೇಹವನ್ನು ಸಾಗಿಸಿ, ಆನೇಕಲ್‌ನ ದೊಡ್ಡತಿಮ್ಮಸಂದ್ರ ಕೆರೆಗೆ ಎಸೆದು ಪರಾರಿಯಾಗಿದ್ದಳು. ವಿಚಾರಣೆ ವೇಳೆ ಆಕೆ ಈ ಕೃತ್ಯವನ್ನು ಒಪ್ಪಿಕೊಂಡಿದ್ದಾಳೆ.

ಸದ್ಯ, ಪೊಲೀಸರು ಕೆರೆಯಿಂದ ಮೃತದೇಹವನ್ನು ಹೊರತೆಗೆದಿದ್ದು, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಘಟನೆಯ ಕುರಿತು ಗ್ರಾಮಾಂತರ ವಿಭಾಗದ ಹೆಚ್ಚುವರಿ ಎಸ್‌ಪಿ ಅವರು ಮಾಹಿತಿ ನೀಡಿದ್ದಾರೆ. ದೀಪಾ ಅವರ ವಿರುದ್ಧ ಚಿನ್ನಾಭರಣಕ್ಕಾಗಿ ಕೊಲೆ ಮಾಡಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ