ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ 50ರ ಸಂಭ್ರಮ : ಬೆಂಗಳೂರಿನಲ್ಲಿ ಕ್ರಿಕೆಟ್ ದಿಗ್ಗಜರಿಂದ ಸುವರ್ಣ ಮಹೋತ್ಸವ ಆಚರಣೆ!

Date:

spot_img

ಬೆಂಗಳೂರು : ನಗರದ ಹೆಮ್ಮೆಯ ಗುರುತಾದ ಎಂ. ಚಿನ್ನಸ್ವಾಮಿ ಕ್ರೀಡಾಂಗಣವು ಐತಿಹಾಸಿಕ ಮೈಲಿಗಲ್ಲೊಂದನ್ನು ತಲುಪಿದೆ. ಇಲ್ಲಿ ಮೊದಲ ಅಂತರಾಷ್ಟ್ರೀಯ ಟೆಸ್ಟ್ ಪಂದ್ಯ ನಡೆದು 50 ವರ್ಷಗಳು ಪೂರೈಸಿದ ಸವಿ ನೆನಪಿಗಾಗಿ ಶುಕ್ರವಾರ ಅದ್ಧೂರಿ ‘ಸುವರ್ಣ ಮಹೋತ್ಸವ’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂಭ್ರಮಕ್ಕೆ ಕ್ರಿಕೆಟ್ ಲೋಕದ ದಿಗ್ಗಜರಾದ ಅನಿಲ್ ಕುಂಬ್ಳೆ ಮತ್ತು ರಾಹುಲ್ ದ್ರಾವಿಡ್ ಸಾಕ್ಷಿಯಾದರು.

1974-75 ರ ಅವಧಿಯಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆದ ಟೆಸ್ಟ್ ಪಂದ್ಯದ ಮೂಲಕ ಈ ಮೈದಾನ ಅಂತರಾಷ್ಟ್ರೀಯ ಕ್ರಿಕೆಟ್ ಭೂಪಟದಲ್ಲಿ ಸ್ಥಾನ ಪಡೆದಿತ್ತು. ಅಂದಿನಿಂದ ಇಂದಿನವರೆಗೆ ಈ ಮೈದಾನವು ಅಸಂಖ್ಯಾತ ರೋಚಕ ಪಂದ್ಯಗಳಿಗೆ ಸಾಕ್ಷಿಯಾಗಿದೆ. ಕಾರ್ಯಕ್ರಮದ ವಿಶೇಷತೆಯಾಗಿ, ಕ್ರೀಡಾಂಗಣದ ವಿವಿಧ ಸ್ಟ್ಯಾಂಡ್‌ಗಳು ಮತ್ತು ಎಂಡ್‌ಗಳಿಗೆ ಕರ್ನಾಟಕದ ಕ್ರಿಕೆಟ್ ಸಾಧಕರ ಹೆಸರುಗಳನ್ನು ನಾಮಕರಣ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು.

ಇದೇ ಸಂದರ್ಭದಲ್ಲಿ ಮಾತನಾಡಿದ ಕೆಎಸ್‌ಸಿಎ (KSCA) ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಅವರು ಮಹತ್ವದ ಘೋಷಣೆಯೊಂದನ್ನು ಮಾಡಿದರು. “ಚುನಾವಣಾ ಸಮಯದಲ್ಲಿ ನಾವು ನೀಡಿದ್ದ ಭರವಸೆಯಂತೆ ಚಿನ್ನಸ್ವಾಮಿ ಮೈದಾನಕ್ಕೆ ಐಪಿಎಲ್ ಹಾಗೂ ಅಂತರಾಷ್ಟ್ರೀಯ ಪಂದ್ಯಗಳನ್ನು ಮರಳಿ ತರುತ್ತಿದ್ದೇವೆ. ಈ ಬಗ್ಗೆ ಸರ್ಕಾರದಿಂದ ಈಗಾಗಲೇ ಅಧಿಕೃತ ಅನುಮತಿ ಲಭ್ಯವಾಗಿದ್ದು, ಮುಂದಿನ ದಿನಗಳಲ್ಲಿ ಅಭಿಮಾನಿಗಳು ಮತ್ತೆ ಚಿನ್ನಸ್ವಾಮಿಯಲ್ಲಿ ಕ್ರಿಕೆಟ್ ಹಬ್ಬವನ್ನು ಸವಿಯಬಹುದು,” ಎಂದು ಹರ್ಷ ವ್ಯಕ್ತಪಡಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.