ಅಜ್ಜಿಗೆ ಫೋನ್ ಮಾಡಿದ್ದಕ್ಕೆ 9 ವರ್ಷದ ವಿದ್ಯಾರ್ಥಿ ಮೇಲೆ ಮುಖ್ಯ ಶಿಕ್ಷಕನಿಂದ ಕ್ರೂರ ಹಲ್ಲೆ

Date:

spot_img

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಗ್ರಾಮದ ಸಂಸ್ಕೃತ ವೇದಾಧ್ಯಯನ ವಸತಿ ಶಾಲೆಯಲ್ಲಿ ನಡೆದ ಅಮಾನವೀಯ ಘಟನೆಯೊಂದು ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ. ವೇದಾಧ್ಯಯನ ಶಾಲೆಯ ಮುಖ್ಯ ಶಿಕ್ಷಕ ವೀರೇಶ್ ಹಿರೇಮಠ್ ಅವರು 9 ವರ್ಷದ ವಿದ್ಯಾರ್ಥಿ ತರುಣ್ ಮೇಲೆ ಮನಸೋಇಚ್ಛೆ ಹಲ್ಲೆ ನಡೆಸಿದ್ದು, ಆತನಿಗೆ ಕಾಲಿನಿಂದ ಒದ್ದು ವಿಕೃತಿ ಮೆರೆದಿದ್ದಾರೆ.

ವಿದ್ಯಾರ್ಥಿ ತರುಣ್ ತನ್ನ ಅಜ್ಜಿಗೆ ಫೋನ್ ಮಾಡಿದುದನ್ನು ಪ್ರಶ್ನಿಸಿ ಶಿಕ್ಷಕ ಈ ಕ್ರೌರ್ಯ ಮೆರೆದಿದ್ದಾರೆ ಎಂದು ತಿಳಿದುಬಂದಿದೆ. ಈ ಘಟನೆಯ ದೃಶ್ಯಗಳು ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ತರುಣ್ ಉತ್ತರ ಕರ್ನಾಟಕ ಮೂಲದ ವಿದ್ಯಾರ್ಥಿಯಾಗಿದ್ದು, ದೇಗುಲಕ್ಕೆ ಸೇರಿದ ವಸತಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ.

ಕ್ಷುಲ್ಲಕ ಕಾರಣಕ್ಕೆ ಹಲ್ಲೆ:

ಅಜ್ಜಿಗೆ ಬೇರೆ ನಂಬರಿನಿಂದ ಕರೆ ಮಾಡಿದರೆ ಬಿಡುವುದಿಲ್ಲ ಎಂದು ಶಿಕ್ಷಕ ವೀರೇಶ್ ಬೆದರಿಕೆಯೊಡ್ಡಿದ್ದರು ಎನ್ನಲಾಗಿದೆ. ವಿಡಿಯೋ ವೈರಲ್ ಆದ ಬಳಿಕ ಶಿಕ್ಷಕ ವೀರೇಶ್ ಹಿರೇಮಠ್ ನಾಪತ್ತೆಯಾಗಿದ್ದು, ಸಾರ್ವಜನಿಕರು ಹಾಗೂ ಪೋಷಕರು ಈ ಘಟನೆಗೆ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.

ಈ ಘಟನೆಯ ಕುರಿತು ಗುರು ತಿಪ್ಪೇಸ್ವಾಮಿ ದೇಗುಲದ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರಪ್ಪ ಅವರು ನಾಯಕನಹಟ್ಟಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ನಾಪತ್ತೆಯಾಗಿರುವ ಶಿಕ್ಷಕನಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ನಿಮ್ಮ ಅಡುಗೆಮನೆಯಲ್ಲಿರುವ ಈ ಒಂದು ಎಣ್ಣೆ ನೂರಾರು ಕಾಯಿಲೆಗಳಿಗೆ ಮನೆಮದ್ದು: ಕ್ಯಾಸ್ಟರ್ ಆಯಿಲ್ ಬಳಸುವ ಸರಿಯಾದ ವಿಧಾನ ಇಲ್ಲಿದೆ.

ಹರಳೆಣ್ಣೆಯ ಆರೋಗ್ಯಕರ ಪ್ರಯೋಜನಗಳು, ಕೂದಲ ರಕ್ಷಣೆ ಮತ್ತು ಮಲಬದ್ಧತೆಗೆ ಇದನ್ನು ಬಳಸುವ ಸರಿಯಾದ ವಿಧಾನಗಳ ಕುರಿತು ಇಲ್ಲಿದೆ ಪೂರ್ಣ ಮಾಹಿತಿ.

ಉದ್ಯಮಿ ಸಂಪತ್‌ ಶೆಟ್ಟಿಗೆ ಪ್ರತಿಷ್ಠಿತ ಧರ್ಮಯೋಗಿ ಪುರಸ್ಕಾರ

ಗ್ರಾಮೀಣ ಉದ್ಯಮಿ ಮಂದಾರ್ತಿ ಸಂಪತ್ ಶೆಟ್ಟಿ ಅವರಿಗೆ ಮುದ್ರಾಡಿಯಲ್ಲಿ ಧರ್ಮಯೋಗಿ ಸನ್ಮಾನ ಪ್ರಶಸ್ತಿ ಘೋಷಣೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ 2 ಸೇತುವೆಗೆ 5 ಕೋಟಿ ಅನುದಾನ ಬಿಡುಗಡೆ

ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ನಾಡ್ಪಾಲು ಹಾಗೂ ಹೆರ್ಮುಂಡೆ ಸೇತುವೆ ನಿರ್ಮಾಣಕ್ಕೆ 5 ಕೋಟಿ ಅನುದಾನ ಮಂಜೂರಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ ಅಣ್ಣಾಮಲೈ

ನೀಟ್ ಪರೀಕ್ಷೆ ಸೋರಿಕೆ ಹಾಗೂ ಕೇಂದ್ರ ಸರ್ಕಾರದ ನಿಲುವನ್ನು ಮಾಜಿ ಬಿಜೆಪಿ ನಾಯಕ ಅಣ್ಣಾಮಲೈ ತೀವ್ರವಾಗಿ ಖಂಡಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.