spot_img

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಜೀವ ಬೆದರಿಕೆ: ಇಮೇಲ್ ಸಂದೇಶದಿಂದ ಆತಂಕ

Date:

ಬೆಂಗಳೂರು : ರಾಜ್ಯದ ಮುಖ್ಯಮಂತ್ರಿಯರಾದ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಇಮೇಲ್ ಮೂಲಕ ಗಂಭೀರ ಜೀವ ಬೆದರಿಕೆ ಬಂದಿರುವ ಘಟನೆ ಭಾರಿ ಚರ್ಚೆಗೆ ಕಾರಣವಾಗಿದೆ. ‘ಸಿಂಧಾ ರಜಪೂತ್’ ಎಂಬ ಹೆಸರಿನ ಇಮೇಲ್ ವಿಳಾಸದಿಂದ ಈ ಸಂದೇಶ ಬಂದಿದ್ದು, ಇಬ್ಬರನ್ನು ಹತ್ಯೆಗೈದು ಟ್ರಾಲಿ ಬ್ಯಾಗ್‌ಗಿನಲ್ಲಿ ಹಾಕಿ ಫ್ರಿಡ್ಜ್‌ನಲ್ಲಿ ಇಡುವುದಾಗಿ ಹೇಳಲಾಗಿದೆ.

ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಾಗಿದ್ದು, ಸೈಬರ್ ಕ್ರೈಂ ಪೊಲೀಸರು ಪ್ರಕರಣದ ತೀವ್ರ ತನಿಖೆಗೆ ಮುಂದಾಗಿದ್ದಾರೆ. ಮೂಲದ ಶೋಧ ಮತ್ತು ಇಮೇಲ್‌ ಕಳುಹಿಸಿರುವ ವ್ಯಕ್ತಿಯ ಹಿನ್ನಲೆಯಲ್ಲಿ ತನಿಖೆ ನಡೆಯುತ್ತಿದೆ.

ಇದೇ ಇಮೇಲ್‌ ಪ್ರತಿಯನ್ನು ಗೃಹ ಸಚಿವರು ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೂ ಕಳುಹಿಸಲಾಗಿದೆ. ಇನ್ನು ಅದೇ ಸಂದೇಶದಲ್ಲಿ ರಾಮಪುರದ ಪ್ರಭಾಕರ್ ಎಂಬ ವ್ಯಕ್ತಿಗೆ ಒಂದು ಕೋಟಿ ರೂ. ಸಾಲ ಕೊಟ್ಟಿದ್ದು, ತಕ್ಷಣದಲ್ಲಿ ಹಿಂದಿರುಗಿಸದಿದ್ದರೆ ಆತನನ್ನು ಸಹ ಹತ್ಯೆಗೊಳಿಸುತ್ತೇನೆ ಎಂಬ ಬೆದರಿಕೆಯೂ ಇದೆ. ಪ್ರಭಾಕರ್‌ನ ಕುಟುಂಬದ ವಿವರಗಳು ಹಾಗೂ ಅವನ ಮಗನ ಮದುವೆ ಕುರಿತ ಮಾಹಿತಿಯೂ ಇದರಲ್ಲಿ ಉಲ್ಲೇಖಿಸಲಾಗಿದೆ.

ಪೊಲೀಸರು ಈ ಇಮೇಲ್‌ನ ಹಿಂದಿರುವ ವ್ಯಕ್ತಿ ಅಥವಾ ಸಂಘಟನೆ ಬಗ್ಗೆ ಸೂಕ್ಷ್ಮ ತನಿಖೆ ನಡೆಸುತ್ತಿದ್ದಾರೆ. ಪ್ರಸ್ತುತ ಇದು ಕಿಡಿಗೇಡಿಗಳ ಕೃತ್ಯವೆಂದು ಶಂಕಿಸಲಾಗಿದೆ. ಸರ್ಕಾರದ ಹಿರಿಯ ನಾಯಕರ ಭದ್ರತೆಯ ಬಗ್ಗೆ ಇದೀಗ ಹೊಸ ಚರ್ಚೆ ನಡೆಯುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

‘ಸು ಫ್ರಮ್‌ ಸೋʼ ಚಿತ್ರ ಒಟಿಟಿಗೆ ಲಗ್ಗೆ: 7 ನಿಮಿಷಗಳ ದೃಶ್ಯಕ್ಕೆ ಕತ್ತರಿ?

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಈ ವರ್ಷ ದೊಡ್ಡ ಹಿಟ್ ಆಗಿ ಹೊರಹೊಮ್ಮಿದ ಹಾರರ್-ಕಾಮಿಡಿ ʼಸು ಫ್ರಮ್ ಸೋʼ ಈಗ ಒಟಿಟಿಗೆ ಬಂದಿದೆ. ಥಿಯೇಟರ್‌ಗಳಲ್ಲಿ 45 ದಿನಗಳ ಯಶಸ್ವಿ ಪ್ರದರ್ಶನದ ಬಳಿಕ, ಈ ಚಿತ್ರ ಇಂದು (ಸೆಪ್ಟೆಂಬರ್ 9) ಜಿಯೋ ಸಿನಿಮಾ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಪ್ರಸಾರ ಆರಂಭಿಸಿದೆ.

ಬಜಗೋಳಿ ವಲಯ ಮಟ್ಟದ ಕ್ರೀಡಾಕೂಟ: ಇರ್ವತ್ತೂರು ಶಾಲೆಗೆ ನಾಲ್ಕು ಪ್ರಥಮ ಪ್ರಶಸ್ತಿಗಳು

ಬಜಗೋಳಿ ವಲಯ ಮಟ್ಟದ 14 ವರ್ಷದೊಳಗಿನ ಬಾಲಕ-ಬಾಲಕಿಯರ ವಾಲಿಬಾಲ್ ಮತ್ತು ತ್ರೋಬಾಲ್ ಪಂದ್ಯಾಟದಲ್ಲಿ ಇರ್ವತ್ತೂರು ಶಾಲೆಯು ಭರ್ಜರಿ ಸಾಧನೆ ಮಾಡಿದೆ. ಸ್ಪರ್ಧಿಸಿದ ನಾಲ್ಕೂ ವಿಭಾಗಗಳಲ್ಲಿ ಪ್ರಥಮ ಪ್ರಶಸ್ತಿಗಳನ್ನು ಗೆಲ್ಲುವ ಮೂಲಕ ಶಾಲೆಯು ಹೊಸ ದಾಖಲೆಯನ್ನು ನಿರ್ಮಿಸಿದೆ.

ದಿನ ವಿಶೇಷ – ಕ್ಯಾಪ್ಟನ್ ವಿಕ್ರಮ್ ಬತ್ರಾ ಜನ್ಮದಿನ

ನಮ್ಮ ದೇಶದ ಇತಿಹಾಸದಲ್ಲಿ ದೇಶಭಕ್ತಿ ಮತ್ತು ಧೈರ್ಯದ ಸಂಕೇತವಾಗಿ ನಿಂತಿರುವ ಹೆಸರುಗಳಲ್ಲಿ ಕ್ಯಾಪ್ಟನ್ ವಿಕ್ರಮ್ ಬತ್ರಾ ಅವರದ್ದು ಅಮರ

ಫುಟ್‌ಬಾಲ್ : ಕಾರ್ಕಳ ಜ್ಞಾನಸುಧಾ ತಂಡ ಜಿಲ್ಲಾಮಟ್ಟಕ್ಕೆ

ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.