“ಐದು ವರ್ಷಗಳೂ ನಾನೇ ಸಿಎಂ” ಬೆಳಗಾವಿ ಅಧಿವೇಶನದಲ್ಲಿ ಸಿದ್ದರಾಮಯ್ಯ ಸ್ಪಷ್ಟ ನುಡಿ, ವಿಪಕ್ಷಗಳ ಲೇವಡಿ

Date:

spot_img

ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಕುರ್ಚಿಯ ಸುತ್ತಲಿನ ಚರ್ಚೆಗಳು ಇಂದು ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಮತ್ತೊಮ್ಮೆ ಭುಗಿಲೆದ್ದವು. ಶಾಸಕರ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ವಿಚಾರವಾಗಿ ಆರಂಭವಾದ ಮಾತಿನ ಚಕಮಕಿ, ಸಿಎಂ ಗಾದಿಯ ಸುತ್ತಲಿನ ಗದ್ದಲಕ್ಕೆ ತಿರುಗಿ ಸದನದಲ್ಲಿ ತೀವ್ರ ಕುತೂಹಲ ಕೆರಳಿಸಿತು.

ಅನುದಾನ ಕಡಿತದ ಕುರಿತು ಶಾಸಕರ ಆಕ್ರೋಶ

ಸದನದಲ್ಲಿ ಅನುದಾನ ಹಂಚಿಕೆಯ ವಿಷಯವನ್ನು ಪ್ರಸ್ತಾಪಿಸಿದ ಕಾಂಗ್ರೆಸ್ ಶಾಸಕ ಕುಣಿಗಲ್ ರಂಗನಾಥ್ ಅವರು ಸ್ವತಃ ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಉದ್ದೇಶಿಸಿ ಮಾತನಾಡಿದ ಅವರು, “ಮಧುಗಿರಿಗೆ ₹100 ಕೋಟಿ ಅನುದಾನ ಕೊಡಲಾಗುತ್ತದೆ. ಆದರೆ, ನನ್ನ ಕ್ಷೇತ್ರಕ್ಕೆ ಏಕೆ ಅನುದಾನ ಸಿಗುತ್ತಿಲ್ಲ? ನನ್ನ ಕ್ಷೇತ್ರಕ್ಕೆ ಹಿಂದೆ ಮಂಜೂರಾಗಿದ್ದ ₹1000 ಕೋಟಿ ಮೊತ್ತದ ಅನುದಾನವನ್ನು ತಡೆ ಹಿಡಿಯಲಾಗಿದೆ,” ಎಂದು ಆಕ್ರೋಶದಿಂದ ಪ್ರಶ್ನಿಸಿದರು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ರಂಗನಾಥ್ ಅವರ ಈ ಪ್ರಶ್ನೆಯು, ಕಾಂಗ್ರೆಸ್‌ನ ಆಂತರಿಕ ‘ಸಿಎಂ ಕುರ್ಚಿ’ ಕಾದಾಟದ ವಿಚಾರವನ್ನು ಸದನದಲ್ಲಿ ಮತ್ತೆ ಮುನ್ನಲೆಗೆ ತಂದಿತು.

‘ಐದು ವರ್ಷಗಳೂ ನಾನೇ ಸಿಎಂ’: ಸಿದ್ದರಾಮಯ್ಯನವರಿಂದ ಸ್ಪಷ್ಟನೆ

ಶಾಸಕ ರಂಗನಾಥ್ ಅವರ ಆರೋಪಗಳಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಅನುದಾನ ಹಂಚಿಕೆಯಲ್ಲಿ ವ್ಯತ್ಯಾಸಗಳಾಗಿದ್ದರೆ ಅದನ್ನು ಪರಿಶೀಲಿಸಲಾಗುವುದು. ಯಾವುದೇ ಶಾಸಕರ ಕ್ಷೇತ್ರಕ್ಕೆ ಅನುದಾನ ಕಡಿತಗೊಳಿಸಲಾಗಿಲ್ಲ,” ಎಂದು ಸ್ಪಷ್ಟೀಕರಣ ನೀಡಿದರು.

ಈ ಸಂದರ್ಭದಲ್ಲಿ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಮಧ್ಯಪ್ರವೇಶಿಸಿ, “ಮುಖ್ಯಮಂತ್ರಿ ಕುರ್ಚಿ ಮೇಲೆ ಕಣ್ಣಿಟ್ಟ ಕಾರಣದಿಂದ ರಂಗನಾಥ್ ಅವರಿಗೆ ಅನುದಾನ ವಿಚಾರದಲ್ಲಿ ಅಸಮಾಧಾನ ಉಂಟಾಗಿದೆ,” ಎಂದು ವ್ಯಂಗ್ಯವಾಡಿದರು.

ಇದಕ್ಕೆ ತೀಕ್ಷ್ಣ ಕೌಂಟರ್ ನೀಡಿದ ಸಿಎಂ ಸಿದ್ದರಾಮಯ್ಯ, “ಜನರು ಕಾಂಗ್ರೆಸ್‌ನ 140 ಶಾಸಕರನ್ನು ಆಶೀರ್ವದಿಸಿದ್ದಾರೆ. ಹಾಗಾಗಿ, ನಾವು ಐದು ವರ್ಷಗಳೂ ಅಧಿಕಾರದಲ್ಲಿ ಇರುತ್ತೇವೆ. 2028ರ ಚುನಾವಣೆಯಲ್ಲಿಯೂ ನಾವೇ ಅಧಿಕಾರಕ್ಕೆ ಬರುತ್ತೇವೆ. ನಿಮಗೆ (ವಿಪಕ್ಷಗಳಿಗೆ) ಮುಂದೆಯೂ ಜನ ಅವಕಾಶ ನೀಡುವುದಿಲ್ಲ,” ಎಂದು ತಿರುಗೇಟು ನೀಡಿದರು. ಸಿಎಂ ಮಾತಿಗೆ ಬೆಂಬಲ ವ್ಯಕ್ತಪಡಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್, “140 ಶಾಸಕರ ಬೆಂಬಲ ಇರುವುದರಿಂದಲೇ ಐದು ವರ್ಷ ನಾನೇ ಇರುತ್ತೇನೆ ಎಂದು ಸಿಎಂ ಹೇಳುತ್ತಿದ್ದಾರೆ,” ಎಂದರು.

‘ಉಪ್ಪು ಹಾಕ್ಬೇಡಿ’ ವಾಕ್ಸಮರ

ಶಾಸಕ ರಂಗನಾಥ್ ಅವರ ಆಕ್ರೋಶದ ಹೇಳಿಕೆ ಬಗ್ಗೆ ಆರ್. ಅಶೋಕ್ ಮತ್ತೊಮ್ಮೆ ಪ್ರಸ್ತಾಪಿಸಿದಾಗ, ಸಿಎಂ ಸಿದ್ದರಾಮಯ್ಯ, “ಅವರಿಗೆ ನೋವಾಗಿದ್ದರೆ ಉರಿಯೋದಕ್ಕೆ ನೀನು ಉಪ್ಪು ಹಾಕಬೇಡ,” ಎಂದರು. ಇದಕ್ಕೆ ಅಶೋಕ್, “ಹಾಗಿದ್ದರೆ, ಅಲ್ಲಿ ನಿಜವಾಗಿಯೂ ಉರಿಯುತ್ತಿದೆಯೇ?” ಎಂದು ಲೇವಡಿ ಮಾಡಿದರು.

“ಅದು ಗಾದೆ ಮಾತು ಅಷ್ಟೇ ಕಣಯ್ಯ,” ಎಂದು ಸಿಎಂ ಸಮಾಧಾನದಿಂದ ಉತ್ತರಿಸಿದರು. ತಕ್ಷಣ ಎದ್ದು ನಿಂತ ಸುನಿಲ್ ಕುಮಾರ್, “ಅದು ಗಾದೆ ಮಾತೋ… ಮನಸ್ಸಿನಲ್ಲಿದ್ದ ಮಾತೋ?” ಎಂದು ಪ್ರಶ್ನಿಸಿದರು. ಆಗ ಸಿಎಂ ಮತ್ತಷ್ಟು ಗಟ್ಟಿ ಧ್ವನಿಯಲ್ಲಿ, “ನೀವು ಎಷ್ಟೇ ಉಪ್ಪನ್ನು ಹಾಕಿದರೂ, ನಮ್ಮ ಶಾಸಕರು ಐದು ವರ್ಷ ಪೂರ್ಣಗೊಳ್ಳುವಂತೆ ಜನ ಆಶೀರ್ವದಿಸಿದ್ದಾರೆ. ಐದು ವರ್ಷಗಳ ಕಾಲ ನಾವೇ ಇರುತ್ತೇವೆ,” ಎಂದು ಪುನರುಚ್ಚರಿಸಿದರು.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, “ಎಷ್ಟು ಸೀಟು ಗೆಲ್ಲುವುದು ಮುಖ್ಯವಲ್ಲ, ಐದು ವರ್ಷ ಸಿಎಂ ಆಗಿರುವುದು ಮುಖ್ಯ,” ಎಂದು ಕೆಣಕಿದರು. ಇದಕ್ಕೆ ಯಾವುದೇ ಅಳುಕಿಲ್ಲದೆ ಸ್ಪಷ್ಟ ಉತ್ತರ ನೀಡಿದ ಸಿಎಂ ಸಿದ್ದರಾಮಯ್ಯ, “ನಾನೇ ಮುಖ್ಯಮಂತ್ರಿ. ಈಗಲೂ ನಾನೇ ಮುಖ್ಯಮಂತ್ರಿ,” ಎಂದು ಸದನದಲ್ಲಿ ದಿಟ್ಟ ಘೋಷಣೆ ಮಾಡಿದರು. ಈ ಸಂದರ್ಭದಲ್ಲಿ ಸುನಿಲ್ ಕುಮಾರ್ ಮತ್ತೊಮ್ಮೆ ಎದ್ದು ನಿಂತು, “ಹಾಗಿದ್ದರೆ, ಮುಂದೆಯೂ ನಾನೇ ಮುಖ್ಯಮಂತ್ರಿ ಎಂದು ಹೇಳಿ,” ಎಂದು ಮತ್ತೆ ಲೇವಡಿ ಮಾಡಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.