ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ಅಕ್ಟೋಬರ್ 7 ರೊಳಗೆ ಕಡ್ಡಾಯ ಪೂರ್ಣಕ್ಕೆ ಸಿಎಂ ಸಿದ್ದರಾಮಯ್ಯರಿಂದ ಕಟ್ಟುನಿಟ್ಟಿನ ನಿರ್ದೇಶನ

Date:

spot_img

ರಾಜ್ಯಾದ್ಯಂತ ನಡೆಯುತ್ತಿರುವ ಮಹತ್ವದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025ರ ಕಾರ್ಯವನ್ನು ಕಡ್ಡಾಯವಾಗಿ ಅಕ್ಟೋಬರ್ 7ರ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು ಮತ್ತು ಹಿರಿಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಶುಕ್ರವಾರದಂದು ಉನ್ನತ ಮಟ್ಟದ ವೀಡಿಯೊ ಕಾನ್ಫರೆನ್ಸ್ ಸಭೆಯಲ್ಲಿ ಸಮೀಕ್ಷೆಯ ಪ್ರಗತಿಯನ್ನು ಪರಿಶೀಲಿಸಿದ ಸಿ.ಎಂ. ಸಿದ್ದರಾಮಯ್ಯ, ಆರಂಭಿಕ ಹಂತದಲ್ಲಿ ಕೆಲ ತಾಂತ್ರಿಕ ಸಮಸ್ಯೆಗಳಿಂದಾಗಿ ಗಣತಿ ಕಾರ್ಯವು ನಿಧಾನವಾಗಿ ಸಾಗಿತ್ತು. ಆದರೆ, ಆ ತಾಂತ್ರಿಕ ಅಡಚಣೆಗಳನ್ನು ಬಹುತೇಕ ನಿವಾರಿಸಲಾಗಿದ್ದು, ಇಂದಿನಿಂದಲೇ ಎಲ್ಲಾ ಜಿಲ್ಲೆಗಳಲ್ಲಿ ಸಮೀಕ್ಷಾ ಕಾರ್ಯವನ್ನು ವೇಗಗೊಳಿಸಲು ಜಿಲ್ಲಾಧಿಕಾರಿಗಳು ಕ್ರಮ ವಹಿಸಬೇಕು ಎಂದು ನಿರ್ದೇಶಿಸಿದ್ದಾರೆ.

ಪ್ರಗತಿ ಮತ್ತು ಗಣತಿದಾರರ ನಿಯೋಜನೆ:

ರಾಜ್ಯದಲ್ಲಿ ಒಟ್ಟು 1,43,81,702 ಕುಟುಂಬಗಳ ಸಮೀಕ್ಷೆ ನಡೆಸುವ ಗುರಿಯಿದ್ದು, ಈವರೆಗೆ ಕೇವಲ 2,76,016 ಕುಟುಂಬಗಳ ಸಮೀಕ್ಷೆ ಪೂರ್ಣಗೊಂಡಿದೆ. ಗಡುವಿನೊಳಗೆ ಕೆಲಸ ಮುಗಿಸಲು ಒಟ್ಟು 1,20,728 ಗಣತಿದಾರರನ್ನು (ಎಣಿಕೆದಾರರು) ನಿಯೋಜಿಸಲಾಗಿದೆ ಮತ್ತು 1,22,085 ಗಣತಿ ಬ್ಲಾಕ್‌ಗಳನ್ನು ಗುರುತಿಸಲಾಗಿದೆ.

ಶಿಕ್ಷಕರಿಗೆ ಸಿಎಂ ಎಚ್ಚರಿಕೆ:

ಸಮೀಕ್ಷಾ ಕಾರ್ಯಕ್ಕೆ ನಿಯೋಜಿತರಾಗಿರುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು ತಮ್ಮ ಕರ್ತವ್ಯವನ್ನು ನಿರ್ಲಕ್ಷಿಸದೇ ನಿಗದಿತ ಸಮಯಕ್ಕೆ ಮುಗಿಸಬೇಕು. ಇದೊಂದು ಸರ್ಕಾರಿ ಕೆಲಸವಾಗಿದ್ದು, ಅಸಹಕಾರ ತೋರಿಸುವ ಅಥವಾ ನಿರ್ಲಕ್ಷ್ಯ ವಹಿಸುವ ಗಣತಿದಾರರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಎಚ್ಚರಿಕೆ ನೀಡಿದ್ದಾರೆ. ಗೌರವಧನದ ಕುರಿತು ಯಾವುದೇ ಅನುಮಾನ ಬೇಡ, ಅದನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಪ್ರತಿದಿನ 10% ಪ್ರಗತಿಗೆ ಗುರಿ:

ಸಮೀಕ್ಷೆಯ ವೇಗ ಹೆಚ್ಚಿಸಲು ಪ್ರತಿದಿನ ಜಿಲ್ಲಾವಾರು ಕನಿಷ್ಠ 10% ರಷ್ಟು ಸಮೀಕ್ಷೆಯ ಗುರಿ ಸಾಧಿಸಬೇಕು ಎಂದು ಸಿಎಂ ಸೂಚಿಸಿದ್ದಾರೆ. ಪ್ರಾದೇಶಿಕ ಆಯುಕ್ತರು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಪ್ರಗತಿಯನ್ನು ಪ್ರತಿದಿನ ಪರಿಶೀಲಿಸುವಂತೆ ಮತ್ತು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಸೂಚಿಸಲಾಯಿತು.

ಬೆಂಗಳೂರಿಗೆ ವಿಶೇಷ ಗಮನ:

ಬೆಂಗಳೂರು ನಗರ ಜಿಲ್ಲೆಯಲ್ಲಿ ಸಮೀಕ್ಷಾ ಕಾರ್ಯ ಇಂದಿನಿಂದ ಪ್ರಾರಂಭವಾಗಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು 50 ಲಕ್ಷ ಮನೆಗಳಿದ್ದು, ಇಲ್ಲಿ ಕೂಡ ಗಣತಿ ಕಾರ್ಯವನ್ನು ಆದಷ್ಟು ಬೇಗನೆ ಆರಂಭಿಸಬೇಕು. ರಾಜ್ಯದ ಪ್ರತಿಯೊಂದು ಕುಟುಂಬವೂ ಸಮೀಕ್ಷೆಯಲ್ಲಿ ಭಾಗಿಯಾಗುವಂತೆ ನೋಡಿಕೊಳ್ಳಬೇಕು, ಯಾವುದೇ ಕುಟುಂಬ ಹೊರಗುಳಿಯಬಾರದು ಎಂದು ಸಿಎಂ ಸಲಹೆ ನೀಡಿದ್ದಾರೆ. ಬೀಗ ಹಾಕಿರುವ ಮನೆಗಳಲ್ಲಿ ಮುಂದಿನ ದಿನಗಳಲ್ಲಿ ಸಮೀಕ್ಷೆ ನಡೆಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಸಮನ್ವಯತೆ ಮತ್ತು ಪರಿಹಾರ ಕ್ರಮಗಳು:

ಇದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಮೀಕ್ಷೆ ಮಾತ್ರವಲ್ಲ, ಎಲ್ಲಾ ಇಲಾಖೆಗಳ ಸಮನ್ವಯದ ಅಗತ್ಯವಿದೆ. ಕಂದಾಯ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಮತ್ತು ನಗರ ಸ್ಥಳೀಯ ಸಂಸ್ಥೆಗಳು ಜೊತೆಯಾಗಿ ಕಾರ್ಯನಿರ್ವಹಿಸಬೇಕು. ಸಮೀಕ್ಷೆಯ ಮೇಲ್ವಿಚಾರಣೆಗಾಗಿ ಪ್ರತಿ ತಾಲೂಕಿಗೆ ಒಬ್ಬ ಜಿಲ್ಲಾ ಮಟ್ಟದ ಅಧಿಕಾರಿಯನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಕ ಮಾಡಲು ನಿರ್ಧರಿಸಲಾಗಿದೆ. ಸ್ಥಳೀಯವಾಗಿ ಎದುರಾಗುವ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣವೇ ಬಗೆಹರಿಸಲು ವಿವಿಧ ಇಲಾಖೆಗಳ ಐಟಿ ತಂತ್ರಜ್ಞರ ನೆರವು ಪಡೆದುಕೊಳ್ಳಲು ಸೂಚಿಸಲಾಗಿದೆ. ಅಗತ್ಯವಿದ್ದರೆ ಅನುದಾನಿತ ಶಾಲೆಗಳ ಶಿಕ್ಷಕರ ಸೇವೆಯನ್ನೂ ಬಳಸಿಕೊಳ್ಳಲು ಅನುಮತಿ ನೀಡಿದ್ದಾರೆ.

ಗುಡ್ಡಗಾಡು ಪ್ರದೇಶದ ನಿವಾಸಿಗಳಿಗೆ ಅನುಕೂಲವಾಗುವಂತೆ ಶಾಲೆಗಳಲ್ಲಿ ಸಮೀಕ್ಷೆ ಕೇಂದ್ರಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದ್ದು, ಜನರು ಅಲ್ಲಿಗೆ ಬಂದು ಸಮೀಕ್ಷೆಯಲ್ಲಿ ಪಾಲ್ಗೊಳ್ಳಬಹುದು. ಆನ್‌ಲೈನ್ ಮೂಲಕವೂ ಸಮೀಕ್ಷೆಯಲ್ಲಿ ಭಾಗವಹಿಸಲು ಅವಕಾಶ ಒದಗಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಮಾಹಿತಿ ನೀಡಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ವಿಪ್ರ ಸ್ವಉದ್ಯಮ ಯೋಜನೆ: 2 ಲಕ್ಷ ಸಾಲಕ್ಕೆ ಅರ್ಜಿ ಆಹ್ವಾನ!

ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಸ್ವಉದ್ಯೋಗಕ್ಕೆ ಬಡ್ಡಿ ರಹಿತ/ಕಡಿಮೆ ಬಡ್ಡಿಯಲ್ಲಿ ಸಾಲ ಸೌಲಭ್ಯ. ಅರ್ಜಿ ಸಲ್ಲಿಸಲು 31-08-2026 ಕೊನೆ ದಿನ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬೆಂಗಳೂರು ಇಡಿ ದಾಳಿ: ಐಸಿಸ್ ಫಂಡಿಂಗ್ ಆರೋಪದ ಮೇಲೆ 8 ಕಡೆ ಶೋಧ

ಬೆಂಗಳೂರಿನಲ್ಲಿ ಐಸಿಸ್ ಉಗ್ರ ಸಂಘಟನೆಗೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ ಇಡಿ ಅಧಿಕಾರಿಗಳು 8 ಕಡೆ ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕರ್ನೂಲು ಬಳಿ ಭೀಕರ ಕಾರು ಅಪಘಾತ: ರವಿಚಂದ್ರ ಶೆಟ್ಟಿ ದುರ್ಮರಣ

ಆಂಧ್ರದ ಕರ್ನೂಲು ಬಳಿ ನಡೆದ ಕಾರು ಅಪಘಾತದಲ್ಲಿ ಮಂಗಳೂರಿನ ರವಿಚಂದ್ರ ಶೆಟ್ಟಿ ನಿಧನರಾಗಿದ್ದಾರೆ. ಮೂವರಿಗೆ ಗಾಯಗಳಾಗಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.