spot_img

ಪಂಚ ಗ್ಯಾರಂಟಿಗಳ ಟೀಕೆಗೆ ಸಿಎಂ ಸಿದ್ದರಾಮಯ್ಯನವರ ಬಜೆಟ್ ಸೂಕ್ತ ಉತ್ತರ – ಉಡುಪಿ ಜಿಲ್ಲಾ ಕಾಂಗ್ರೆಸ್

Date:

ಉಡುಪಿ : ಮುಖ್ಯಮಂತ್ರಿ ಸಿದ್ಧರಾಮಯ್ಯ ಈ ಭಾರಿ ಮಂಡಿಸಿರುವ ರಾಜ್ಯದ 2025-26 ನೇ ವರ್ಷದ 4,08,549 ಕೋಟಿ ರೂ. ವೆಚ್ಚದ ಬಜೆಟ್, ಕಳೆದ ಆರ್ಥಿಕ ವರ್ಷದಲ್ಲಿ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿ ಸರಕಾರ ದಿವಾಳಿಯಾಗಿದೆ ಎಂದು ಗುಲ್ಲೆಬ್ಬಿಸಿದವರಿಗೆ ನೀಡಿದ ಸಮರ್ಪಕ ಉತ್ತರ ವಾಗಿದೆ. ಇದೊಂದು ವಿತ್ತೀಯ ಶಿಸ್ತು ಪಾಲನೆಯ ಬಜೆಟ್. ಸಮಾಜದ ಆರ್ಥಿಕ ಸಮಾನತೆ, ಸಾಮಾಜಿಕ ಸೌಹಾರ್ಧತೆ ಮತ್ತು ಸರ್ವಾಂಗೀಣ ಅಭಿವೃದ್ಧಿ ಮತ್ತು ಮಹಿಳೆ, ಮಕ್ಕಳು, ಕೂಲಿ ಕಾರ್ಮಿಕರ ಪರ ಒಲವುಳ್ಳ ಬಜೆಟ್ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಹೇಳಿದೆ.

ಪ್ರತೀ ವಿಧಾನ ಸಭಾ ಕ್ಷೇತ್ರಗಳ ಮೂಲ ಸೌಲಭ್ಯ ಅಭಿವೃದ್ದಿಗಾಗಿ ಪ್ರತೀ ಕ್ಷೇತ್ರಗಳಿಗೆ 8000ಕೋ.ರೂ ಮೀಸಲು, ಮಹಿಳೆಯರ ಸಾಮಾಜಿಕ ಅಭ್ಯುದಯದ ಗುರಿಯೊಂದಿಗೆ ಮಹಿಳಾ ಉದ್ದೇಶಿತ ಕಾರ್ಯಕ್ರಮಗಳಿಗೆ 94084 ಕೋ.ರೂ, ಮಕ್ಕಳ ಸಮಗ್ರ ಕ್ಷೇಮ ಸಾಧನೆಯ ಗುರಿಯೊಂದಿಗಿನ ಯೋಜನೆಗಳಿಗೆ 42033 ಕೋ.ರೂ ಮೀಸಲಿಟ್ಟಿರುವುದು ಸ್ವಾಗತಾರ್ಹ. ಧಾರ್ಮಿಕ ದತ್ತಿ ಇಲಾಖಾ ದೇಣಿಗೆ ದೇವಸ್ಥಾನಗಳ ಅರ್ಚಕರ ತಸ್ತಿಕ್ ಹಣವನ್ನು ವಾರ್ಷಿಕ 60,000 ರೂ. ಯಿಂದ 72,000 ಏರಿಕೆ, ಅಂಗನವಾಡಿ ಮತ್ತು ಅಡುಗೆ ಸಹಾಯಕಿಯರಿಗೆ ಕ್ರಮವಾಗಿ 1000 ಮತ್ತು 750 ರೂ. ಹೆಚ್ಚುವರಿ ಹಾಗೂ ರೈತ ಕುಟುಂಬಗಳ ಜಾನುವಾರುಗಳ ಆಕಸ್ಮಿಕ ಸಾವಿಗೆ ಅನುಗ್ರಹ ಯೋಜನೆಯಡಿ ಪರಿಹಾರದಲ್ಲಿಯೂ ಏರಿಕೆ ಮೊದಲಾದ ಯೋಜನೆಗಳು ಗ್ರಾಮೀಣ ಪರಿಸರ ವರ್ಗದಲ್ಲಿ ಸಂತಸ ತಂದಿದೆ ಮತ್ತು ಈ ಬಾರಿಯ ಬಜೆಟಿನಲ್ಲಿ ಪಂಚ ಗ್ಯಾರಂಟಿ ಯೋಜನೆ ಅನುಷ್ಟಾನಕ್ಕೆ 51,300ಕೋ.ರೂ. ಮೀಸಲಿಟ್ಟಿದ್ದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಸರಕಾರ ತನ್ನ ಆಡಳಿತದ ಅವಧಿಯಲ್ಲಿ ವಿತ್ತೀಯ ಶಿಸ್ತು ಪಾಲನೆಯ ಮೂಲಕ ರಾಜ್ಯದ ಅಭಿವೃದ್ಧಿಯನ್ನು ಎತ್ತಿ ಹಿಡಿದಿರುವುದರಿಂದ ಇದು ಸಾಧ್ಯವಾಗಿದೆ. ಕೇಂದ್ರ ಸರಕಾರ ರಾಜ್ಯಕ್ಕೆ ನೀಡಬೇಕಾದ ತೆರಿಗೆ ಹಣ ಕಡಿತದ ಹೊರತಾಗಿಯೂ ಒಟ್ಟು “ರಾಷ್ಟ್ರೀಯ ಉತ್ಪನ್ನ (ಜಿಡಿಪಿ) 8.4ಕ್ಕೆ ದೇಣಿಗೆಯೆಂಬಂತೆ ರಾಜ್ಯ ಸರಕಾರ ತನ್ನ “ರಾಜ್ಯ ರಾಷ್ಟ್ರೀಯ ಉತ್ಪನ್ನವನ್ನು (ಜಿಎಸ್ ಡಿಪಿ) 7.4 ರ ಪಥಕ್ಕೆ ತಂದು ನಿಲ್ಲಿಸಿರುವುದು ಸರಕಾರದ ಸಾಧನೆಗೆ ಸಾಕ್ಷಿಯಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರ ಪಾಲ್ ನಕ್ರೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಮಹಾರಾಜ ಕರ್ಣಿ ಸಿಂಗ್

ಬಿಕನೆರ್ ನ ರಾಜ ವಂಶಸ್ಥ ಮಹಾರಾಜ ಸಾಧುಲ್ ಸಿಂಗ್ ದಂಪತಿಗಳಿಗೆ 1924 ಎಪ್ರಿಲ್ 21ರಂದು ಕರ್ನಿ ಸಿಂಗ್ ಜನಿಸಿದರು.

ಬೇಸಿಗೆಯಲ್ಲಿ ವಾಲ್ನಟ್ ಸೇವಿಸುವುದರ ಪ್ರಯೋಜನಗಳು!

ಬೇಸಿಗೆಯಲ್ಲಿ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ನೀರಿನಾಂಶದಿಂದ ಕೂಡಿದ ಹಣ್ಣುಗಳು ಮತ್ತು ತರಕಾರಿಗಳಷ್ಟೇ ಪ್ರಾಮುಖ್ಯತೆ ಡ್ರೈ ಫ್ರೂಟ್ಸ್‌ಗೂ ಇದೆ

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ನಿಷೇಧ: ವಿದ್ಯಾರ್ಥಿಗಳಿಗೆ ಅವಮಾನ, ನ್ಯಾಯಾಲಯದ ಮುಂದೆ ಪ್ರಕರಣ

ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ಯಜ್ಞೋಪವೀತ (ಜನಿವಾರ) ಧರಿಸಿದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ ಪ್ರಕರಣಗಳು ರಾಜ್ಯವ್ಯಾಪಿ ವಿವಾದವಾಗಿ ಪರಿಣಮಿಸಿದೆ.

ಸುಪ್ರೀಂಕೋರ್ಟ್ ಕಾನೂನು ರಚಿಸಿದರೆ ಸಂಸತ್ತಿನ ಅಗತ್ಯವೇನು? – ಬಿಜೆಪಿ ಸಂಸದ ನಿಶಿಕಾಂತ್ ದುಬೆಯ ವಿವಾದಾತ್ಮಕ ಹೇಳಿಕೆ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ನಿಶಿಕಾಂತ್ ದುಬೆ ಅವರು ಸುಪ್ರೀಂಕೋರ್ಟ್ ಕಾನೂನು ರಚನೆಯಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಿದರೆ ಸಂಸತ್ತನ್ನು ಮುಚ್ಚಿಬಿಡಬೇಕು ಎಂದು ವಾದಿಸಿದ್ದಾರೆ