ಕಾಕ್ರೋಚ್ ಜನತಾ ಪಾರ್ಟಿ: 14 ಮಿಲಿಯನ್ ಫಾಲೋವರ್ಸ್ ದಾಖಲೆ

Date:

spot_img

ಬೆಂಗಳೂರು: ನಿರುದ್ಯೋಗ ಮತ್ತು ವ್ಯವಸ್ಥೆಯ ವಿರುದ್ಧದ ಅಸಮಾಧಾನವು ಈಗ ಹೊಸ ರೂಪ ಪಡೆದುಕೊಂಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಕಾಡ್ಗಿಚ್ಚಿನಂತೆ ಹಬ್ಬುತ್ತಿರುವ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಯುವಜನತೆಯ ಹೊಸ ಆಂದೋಲನವಾಗಿ ಹೊರಹೊಮ್ಮುತ್ತಿದೆ. ಕೇವಲ ನಾಲ್ಕೇ ದಿನಗಳಲ್ಲಿ ಮಿಲಿಯನ್ ಗಟ್ಟಲೆ ಜನರನ್ನು ಸೆಳೆದಿರುವ ಈ ಡಿಜಿಟಲ್ ಚಳವಳಿ, ಪ್ರಸ್ಥಾಪಿತ ರಾಜಕೀಯ ಪಕ್ಷಗಳ ನಿದ್ದೆಗೆಡಿಸಿದೆ.

ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ನಿರುದ್ಯೋಗಿ ಯುವಕರನ್ನು ಜಿರಳೆಗಳಿಗೆ ಹೋಲಿಸಿದ ಮಾತಿನಿಂದ ಕೆರಳಿದ ಯುವ ಸಮೂಹ, ಈಗ ಅದೇ ಹೆಸರನ್ನೇ ತಮ್ಮ ಅಸ್ತ್ರವನ್ನಾಗಿಸಿಕೊಂಡಿದೆ. ಅಭಿಜೀತ್ ದೀಪ್ಕೆ ಎಂಬುವವರು ಆರಂಭಿಸಿದ ಈ ಅಭಿಯಾನವು ಈಗ ಇನ್‌ಸ್ಟಾಗ್ರಾಂನಲ್ಲಿ 14 ಮಿಲಿಯನ್ ಫಾಲೋವರ್ಸ್ ಹೊಂದುವ ಮೂಲಕ ದಾಖಲೆ ಬರೆದಿದೆ. ಇದಕ್ಕೆ ಪೂರಕವಾಗಿ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಪಕ್ಷದ ಟೀ-ಶರ್ಟ್ ಬಿಡುಗಡೆ ಮಾಡುವ ಮೂಲಕ ಸಾಂಕೇತಿಕ ಬೆಂಬಲ ಸೂಚಿಸಿದ್ದಾರೆ.

ಮುಖ್ಯಾಂಶಗಳು:

  • ರಾತ್ರೋರಾತ್ರಿ ಸಂಚಲನ: ಕೇವಲ 4 ದಿನಗಳಲ್ಲಿ 14 ಮಿಲಿಯನ್ ಫಾಲೋವರ್ಸ್ ಪಡೆಯುವ ಮೂಲಕ ಬಿಜೆಪಿ, ಕಾಂಗ್ರೆಸ್ ಮೀರಿಸಿದ ಸಿಜೆಪಿ.
  • ಸಿಎಂ ಬೆಂಬಲ: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರಿಂದ ‘ಐ ಆಯಮ್ ಕಾಕ್ರೋಚ್’ ಟೀ-ಶರ್ಟ್ ಅನಾವರಣ.
  • ನ್ಯಾಯಾಧೀಶರ ಹೇಳಿಕೆಗೆ ಆಕ್ರೋಶ: ನಿರುದ್ಯೋಗಿಗಳನ್ನು ‘ಜಿರಳೆ’ ಎಂದಿದ್ದ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಹೇಳಿಕೆಯ ವಿರುದ್ಧ ಹುಟ್ಟಿಕೊಂಡ ಪ್ರತಿಭಟನೆ.
  • ಸೋಷಿಯಲ್ ಮೀಡಿಯಾ ಪವರ್: ಬೋಸ್ಟನ್ ವಿವಿ ವಿದ್ಯಾರ್ಥಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಆರಂಭವಾದ ಡಿಜಿಟಲ್ ಕ್ರಾಂತಿ.

ನ್ಯಾಯಾಲಯದ ವಿಚಾರಣೆಯ ವೇಳೆ ನ್ಯಾಯಮೂರ್ತಿಗಳು “ಕೆಲವು ನಿರುದ್ಯೋಗಿಗಳು ಜಿರಳೆಗಳಿದ್ದಂತೆ, ಅವರು ಆರ್‌ಟಿಐ ಕಾರ್ಯಕರ್ತರ ಸೋಗಿನಲ್ಲಿ ವ್ಯವಸ್ಥೆಯನ್ನು ಹಾಳು ಮಾಡುತ್ತಾರೆ” ಎಂಬ ಆಕ್ಷೇಪಾರ್ಹ ಮಾತುಗಳನ್ನಾಡಿದ್ದರು. ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ ಯುವಜನತೆ, ‘ನಾವೂ ಜಿರಳೆಗಳೇ’ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಾ ವ್ಯವಸ್ಥೆಯ ವಿರುದ್ಧ ಸಿಡಿದೆದ್ದಿದ್ದಾರೆ. ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳು ಈ ಆಂದೋಲನಕ್ಕೆ ಸಾಥ್ ನೀಡಿರುವುದು ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ