spot_img

ಸುಳ್ಯದಲ್ಲಿ ಜ್ವರ ತಪಾಸಣೆಗೆ ಹೋದ ಬಾಲಕಿಗೆ ‘ಗರ್ಭಿಣಿ’ ಎಂದು ವರದಿ ನೀಡಿದ ವೈದ್ಯಾಧಿಕಾರಿ ವಿರುದ್ಧ ದೂರು!

Date:

spot_img

ಸುಳ್ಯ: ಜ್ವರದಿಂದ ಬಳಲುತ್ತಿದ್ದ ಶಾಲಾ ಬಾಲಕಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆತಂದಾಗ, ವೈದ್ಯಾಧಿಕಾರಿಯೊಬ್ಬರು ಆಕೆ ಗರ್ಭಿಣಿ ಎಂದು ತಪ್ಪು ವರದಿ ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಜಿಲ್ಲಾ ಆರೋಗ್ಯ ಇಲಾಖೆಗೆ ದೂರು ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಜುಲೈ 1, 2025 ರಂದು, ಬಾಲಕಿ ತನ್ನ ಹೆತ್ತವರೊಂದಿಗೆ ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜ್ವರದ ಚಿಕಿತ್ಸೆಗಾಗಿ ಬಂದಿದ್ದಳು. ಅಲ್ಲಿನ ವೈದ್ಯಾಧಿಕಾರಿ ಬಾಲಕಿಯನ್ನು ತಪಾಸಣೆ ಮಾಡಿ, ಹೊರರೋಗಿಗಳ ದಾಖಲಾತಿಯಲ್ಲಿ ‘ಯುಪಿಟಿ ಪಾಸಿಟಿವ್’ (ಗರ್ಭಿಣಿ) ಎಂದು ದಾಖಲಿಸಿ, ಮುಂದಿನ ತಪಾಸಣೆಗಾಗಿ ಸುಳ್ಯ ಸರ್ಕಾರಿ ಆಸ್ಪತ್ರೆಗೆ ಹೋಗಲು ಸೂಚಿಸಿದ್ದರು.

ಇದರಿಂದ ಆಘಾತಕ್ಕೊಳಗಾದ ಹೆತ್ತವರು, ಬಾಲಕಿಯನ್ನು ಖಾಸಗಿ ಆಸ್ಪತ್ರೆಯಲ್ಲಿ ಪರಿಶೀಲನೆ ಮಾಡಿಸಿದಾಗ ಆಕೆ ಗರ್ಭಿಣಿ ಅಲ್ಲ ಎಂದು ವರದಿ ಬಂದಿದೆ. ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲೂ ಗರ್ಭ ಧರಿಸಿದ ಕುರಿತು ಯಾವುದೇ ದೃಢೀಕರಣ ಸಿಗಲಿಲ್ಲ.

ವೈದ್ಯಾಧಿಕಾರಿಯು ಬಾಲಕಿ ಗರ್ಭಿಣಿ ಎಂದು ಎಲ್ಲರಿಗೂ ತಿಳಿಸಿದ್ದಾರೆ ಎಂಬ ಆರೋಪವಿದ್ದು, ಈ ಸುಳ್ಳು ಮಾಹಿತಿಯು ಸಾರ್ವಜನಿಕವಾಗಿ ಹರಡಿರುವ ಕಾರಣ 13 ವರ್ಷದ ಬಾಲಕಿ ಶಾಲೆಗೆ ಹೋಗಲು ನಿರಾಕರಿಸುತ್ತಿದ್ದಾಳೆ. ಇದರಿಂದ ಆಕೆಯ ಕುಟುಂಬವು ಮಾನಸಿಕವಾಗಿ ತೀವ್ರ ನೋವು ಅನುಭವಿಸಿದೆ.

ಇದೀಗ ಬಾಲಕಿಯ ಹೆತ್ತವರು ದಾಖಲೆಗಳ ಸಹಿತ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ಕುರಿತು ಜಿಲ್ಲಾ ಆರೋಗ್ಯಾಧಿಕಾರಿ ತನಿಖೆಗಾಗಿ ತಂಡವನ್ನು ರಚಿಸಿದ್ದಾರೆ. ಜುಲೈ 10 ರಂದು ತಂಡವು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದೆ. ತನಿಖೆಯಲ್ಲಿ ತಪ್ಪು ಕಂಡುಬಂದರೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿಎಚ್‌ಒ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರೈಲ್ವೆ ಪ್ರಯಾಣಿಕರಿಗೆ ಹೊಸ ಯುಗ: ‘ರೈಲ್ಒನ್’ ಸೂಪರ್ ಅಪ್ಲಿಕೇಶನ್ ಬಿಡುಗಡೆ – ಒಂದೇ ವೇದಿಕೆಯಲ್ಲಿ ಎಲ್ಲಾ ಸೇವೆಗಳು!

ಭಾರತೀಯ ರೈಲ್ವೆ ತನ್ನ ಪ್ರಯಾಣಿಕರ ಅನುಭವವನ್ನು ಕ್ರಾಂತಿಕಾರಿಯಾಗಿಸಲು ವಿನ್ಯಾಸಗೊಳಿಸಲಾದ "ರೈಲ್ಒನ್" ಎಂಬ ಹೊಚ್ಚಹೊಸ 'ಸೂಪರ್ ಅಪ್ಲಿಕೇಶನ್' ಅನ್ನು ಜುಲೈ 1, 2025 ರಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಬಿಡುಗಡೆ ಮಾಡಿದ್ದಾರೆ.

ಮಂಗಳೂರಿನಲ್ಲಿ 4 ಕೋಟಿ ರೂ. ಉದ್ಯೋಗ ವಂಚನೆ: ಕೆಕೋಕಾ ಕಾಯ್ದೆಯಡಿ ಇಬ್ಬರು ಆರೋಪಿಗಳ ಬಂಧನ!

ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 300ಕ್ಕೂ ಹೆಚ್ಚು ಮಂದಿಯಿಂದ ಸುಮಾರು ₹4 ಕೋಟಿಗೂ ಅಧಿಕ ವಂಚನೆ ಮಾಡಿದ ಆರೋಪದಡಿ, ಇಬ್ಬರು ಪ್ರಮುಖ ಆರೋಪಿಗಳನ್ನು ಮಂಗಳೂರು ಪೊಲೀಸರು ಮುಂಬೈನಲ್ಲಿ ಬಂಧಿಸಿದ್ದಾರೆ.

ಇನ್ನಂಜೆ ಎಸ್.ವಿ.ಎಚ್. ಪ್ರೌಢ ಶಾಲೆಯಲ್ಲಿ ನಿವೃತ್ತಿ ಹೊಂದಿದ ಶಿಕ್ಷಕ ವಿಶ್ವನಾಥ ನಾಯ್ಕ ಪೇತ್ರಿ ಅವರಿಗೆ ಭವ್ಯ ಸನ್ಮಾನ

ಎಸ್.ವಿ.ಎಚ್. ಕನ್ನಡ ಮಾಧ್ಯಮ ಪ್ರೌಢ ಶಾಲೆ ಇನ್ನಂಜೆ ಇಲ್ಲಿ ಶಿಕ್ಷಕ ವೃತ್ತಿಯಿಂದ ನಿವೃತ್ತಿ ಹೊಂದಿದ ಶ್ರೀ ವಿಶ್ವನಾಥ ನಾಯ್ಕ ಪೇತ್ರಿ ಅವರಿಗೆ ಸಂಸ್ಥೆಯ ವತಿಯಿಂದ ಅರ್ಥಪೂರ್ಣ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

7 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಐತಿಹಾಸಿಕ ಪೆರ್ಡೂರು ದೇವಳದ ನಗಾರಿ ಗೋಪುರಕ್ಕೆ ಶಿಲಾನ್ಯಾಸ

ಇತಿಹಾಸ ಪ್ರಸಿದ್ಧ ಪೆರ್ಡೂರು ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಮೊದಲ ಹಂತದ ಜೀರ್ಣೋದ್ಧಾರ ಕಾರ್ಯದ ಅಂಗವಾಗಿ ₹7 ಕೋಟಿ ವೆಚ್ಚದಲ್ಲಿ ಭವ್ಯವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ದೇವಳದ ನಗಾರಿ ಗೋಪುರದ ಶಿಲಾನ್ಯಾಸ ಸಮಾರಂಭವು ಜುಲೈ 13ರಂದು ಬೆಳಗ್ಗೆ 9 ಗಂಟೆಗೆ ನಡೆಯಲಿದೆ.