
ಕಾರ್ಕಳ : ಮೊರಾರ್ಜಿ ದೇಸಾಯಿ ಪ.ಪೂ ವಸತಿ ಕಾಲೇಜು, ಮಿಯ್ಯಾರು, ಕಾರ್ಕಳ, ಉಡುಪಿ ಜಿಲ್ಲೆ ಇಲ್ಲಿನ ವಿದ್ಯಾರ್ಥಿನಿ ವಿನುತಾ ಇವರು 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗರಿಷ್ಟ ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನಿಯಾಗಿದ್ದು, ಇವರು ವೈದ್ಯಕೀಯ ಕೋರ್ಸನ್ನು ಆಯ್ಕೆ ಮಾಡಿಕೊಂಡಿದ್ದು, ಘನ ಸರ್ಕಾರ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಬೆಂಗಳೂರು ಇವರು ಮೊರಾರ್ಜಿ ದೇಸಾಯಿ ಪ.ಪೂ ವಸತಿ ಕಾಲೇಜಿನಲ್ಲಿ ವ್ಯಾಸಂಗ ಮಾಡಿ CET, JEE, NEET ಮೂಲಕ MBBS, IIT, AEE, ENGNEERING ಕೋರ್ಸ್ಗಳನ್ನು ಆಯ್ಕೆ ಮಾಡಿಕೊಂಡು, ರಾಜ್ಯದ ಪ್ರತಿಷ್ಟಿತ ಶಿಕ್ಷಣ ಸಂಸ್ಥೆಗಳಿಗೆ ದಾಖಲಾದ ಟಾಪ್ 15 ವಿದ್ಯಾರ್ಥಿಗಳಿಗೆ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದಂದು ನೀಡಲಾಗುವ ಒಂದು ಲಕ್ಷ ರೂಪಾಯಿಗಳ ಪ್ರೋತ್ಸಾಹ ಧನ ಹಾಗೂ ಪ್ರತಿಭಾ ಪುರಸ್ಕಾರವನ್ನು ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಂದ ಸ್ವೀಕರಿಸಿದ ವಿದ್ಯಾರ್ಥಿಗಳಲ್ಲಿ ಒಬ್ಬಳಾಗಿರುವ ವಿನುತಾಗೆ ಉಡುಪಿ ಜಿಲ್ಲೆಯ ಉಪ ವಿಭಾಗಾಧಿಕಾರಿಯಾಗಿರುವ ರಶ್ಮಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ, ಹಾಕಪ್ಪ ಆರ್. ಲಮಾಣಿ, ಕಾಲೇಜಿನ ಪ್ರಾಂಶುಪಾಲರಾಗಿರುವ ಮಲ್ಲಿಕಾರ್ಜುನ ಕುರಿ, ಗಣಕ ವಿಜ್ಞಾನ ಉಪನ್ಯಾಸಕರು ಹಾಗೂ ನಿಲಯಪಾಲಕರಾದ ತುಳಸಿ ಗಾಯತ್ರಿದೇವಿ, ಭೌತಶಾಸ್ತ್ರ ಉಪನ್ಯಾಸಕರಾದ ಗಣೇಶ ಬರ್ಲಾಯ, ಆಂಗ್ಲ ಭಾಷಾ ಉಪನ್ಯಾಸಕರಾದ ಸುಪ್ರೀತ, ಕನ್ನಡ ಭಾಷಾ ಉಪನ್ಯಾಸಕರಾದ ಭರತ್ರಾಜ್ ಕೆ.ಎನ್, ಜೀವಶಾಸ್ತ್ರ ಉಪನ್ಯಾಸಕರಾದ ಸುಷ್ಮಾ ಹೆಗಡೆ, ರಸಾಯನಶಾಸ್ತ್ರ ಉಪನ್ಯಾಸಕರಾದ ಸಂಧ್ಯಾ ಆಚಾರ್ಯ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದರು.

































