spot_img

ಗೋಲ್ಡನ್ ಬುಕ್ ದಾಖಲೆ ಸೇರಿದ ಕಾಂಗ್ರೆಸ್ ಗ್ಯಾರಂಟಿ ಶಕ್ತಿ ಯೋಜನೆ: ಹರ್ಷ ವ್ಯಕ್ತಪಡಿಸಿದ ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಅಜಿತ್ ಹೆಗ್ಡೆ ಮಾಳ

Date:

spot_img

ಕಾರ್ಕಳ : ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ‌ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ “ಶಕ್ತಿ ಯೋಜನೆ”ಯು ಪ್ರತಿಷ್ಠಿತ “Golden Book of World Record” ನಲ್ಲಿ ದಾಖಲಾಗಿದ್ದು ಈ ಐತಿಹಾಸಿಕ ಸಾಧನೆಗೆ ಕಾರಣರಾದ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಹಾಗೂ ಸಾರಿಗೆ ಸಚಿವರಾದ ಸನ್ಮಾನ್ಯ ರಾಮಲಿಂಗಾ ರೆಡ್ಡಿಯವರಿಗೆ ಕಾರ್ಕಳ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಜಿತ್ ಹೆಗ್ಡೆ ಮಾಳ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ, ಹಾಗೂ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಹರ್ಷ ವ್ಯಕ್ತಪಡಿಸಿದ್ದಾರೆ.

ನಾಡಿನ ಬಡ ಮಹಿಳೆಯರಿಗೆ ಉಪಯೋಗವಾಗಲಿ ಎನ್ನುವ ಸದುದ್ದೇಶದಿಂದ ಕಾಂಗ್ರೆಸ್ ನೇತೃತ್ವದ ಸರ್ಕಾರ ಜಾರಿಗೊಳಿಸಿದ ಶಕ್ತಿ ಯೋಜನೆಯಡಿ 2023 ಜೂನ್ 11 ತಾರೀಖಿನಿಂದ 2025 ಜುಲೈ 25 ರವರೆಗೆ 504 ಕೋಟಿ 90 ಲಕ್ಷಕ್ಕೂ ಹೆಚ್ಚು ಬಾರಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸುವ ಮೂಲಕ ಐತಿಹಾಸಿಕ ದಾಖಲೆ ನಿರ್ಮಿಸಿದ್ದಾರೆ.

ಇದು ಮಹಿಳಾ ಸಬಲೀಕರಣ ಹಾಗೂ ಜನರ ಸರ್ವಾಂಗೀಣ ಅಭಿವೃದ್ಧಿಯ ಕುರಿತು ಕಾಂಗ್ರೆಸ್ ಪಕ್ಷ ಹೊಂದಿರುವ ದೂರದೃಷ್ಟಿಯನ್ನು ಸೂಚಿಸುತ್ತದೆ.
ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆಯಿಂದಾಗಿ ಉದ್ಯೋಗಕ್ಕೆ ತೆರಳುವ ಮಹಿಳೆಯರು, ಶಾಲಾ ಕಾಲೇಜಿಗೆ, ವೈದ್ಯಕೀಯ ಚಿಕಿತ್ಸೆಗೆ ಆಸ್ಪತ್ರೆಗೆ ತೆರಳುವ, ಉದ್ಯೋಗಕ್ಕಾಗಿ ನಿತ್ಯ ಸಂಚರಿಸುವ ಮಹಿಳೆಯರಿಗೆ ಅತ್ಯಂತ ಉಪಕಾರಿಯಾಗಿದೆ ಹಾಗೂ ಮಹಿಳಾ ಸಬಲೀಕರಣಕ್ಕೆ ಪೂರಕವಾಗಿದೆ.

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನತೆಗೆ ಆಗುತ್ತಿರುವ ಉಪಯೋಗಗಳನ್ನು ಇಂದು ವಿಶ್ವ ದಾಖಲೆಯ ಪುಸ್ತಕಗಳು ಗುರುತಿಸಿರುವುದು ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿ ರಾಜ್ಯ ದಿವಾಳಿಯಾಗುತ್ತದೆ ಎಂದು ಹುಯಿಲೆಬ್ಬಿಸಿದ ಬಿಜೆಪಿ ಪಕ್ಷದ ಅಪಪ್ರಚಾರಗಳಿಗೆ ಇದು ಸರಿಯಾದ ಉತ್ತರವಾಗಿದೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿರುವ ಬಿಜೆಪಿ ನಾಯಕರು ಬಿಜೆಪಿಯ ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ನಕಲು ಮಾಡುತ್ತಿದ್ದಾರೆ, ಹಾಗಾಗಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ವಿಶ್ವ ದಾಖಲೆಯ ಪುಸ್ತಕ ಸೇರಿದ್ದು ಮಾತ್ರವಲ್ಲ ಬಿಜೆಪಿ ನಾಯಕರ ಕಣ್ಣನ್ನು ತೆರೆಸುವಲ್ಲಿಯೂ ಯಶಸ್ವಿಯಾಗಿದೆ ಎಂದು ಕಾರ್ಕಳ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಜಿತ್ ಹೆಗ್ಡೆ ಮಾಳ ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ತಿಮರೋಡಿ ಬಂಧನ ಹಿನ್ನೆಲೆ: ಬ್ರಹ್ಮಾವರ ವ್ಯಾಪ್ತಿಯಲ್ಲಿ 24 ಗಂಟೆ ನಿಷೇಧಾಜ್ಞೆ ಜಾರಿ

ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ ಹಿನ್ನೆಲೆಯಲ್ಲಿ, ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

AI ವಿಡಿಯೋ ವಿವಾದ: ನೋಟಿಸ್‌ಗೆ ಗೈರಾದ ಯೂಟ್ಯೂಬರ್ ಸಮೀರ್ ಬಂಧಿಸಲು ಮನೆಯನ್ನು ಸುತ್ತುವರಿದ ಪೊಲೀಸರು !

ಧರ್ಮಸ್ಥಳ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐ (AI) ತಂತ್ರಜ್ಞಾನ ಬಳಸಿ ವಿವಾದಿತ ವೀಡಿಯೋ ಮಾಡಿದ ಆರೋಪದ ಮೇಲೆ ಯೂಟ್ಯೂಬರ್ ಸಮೀರ್ ಅವರನ್ನು ಬಂಧಿಸಲು ಪೊಲೀಸರು ಮುಂದಾಗಿದ್ದಾರೆ.

ಹೋಟೆಲ್ ರೂಮ್‌ಗೆ ಕರೆದಿದ್ದ ಯುವ ರಾಜಕಾರಣಿ: ನಟಿ ರಿನಿ ಆನ್ ಜಾರ್ಜ್ ಗಂಭೀರ ಆರೋಪ

ಮಲಯಾಳಂ ಚಿತ್ರರಂಗದ ನಟಿ ಹಾಗೂ ಮಾಜಿ ಪತ್ರಕರ್ತೆ ರಿನಿ ಆನ್ ಜಾರ್ಜ್ ಅವರು ಯುವ ರಾಜಕಾರಣಿಯೊಬ್ಬರ ವಿರುದ್ಧ ಗಂಭೀರ ಕಿರುಕುಳ ಆರೋಪವನ್ನು ಮಾಡಿ ಸಂಚಲನ ಸೃಷ್ಟಿಸಿದ್ದಾರೆ.

ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಆರೋಪ: ಯೂಟ್ಯೂಬರ್ ಸಮೀರ್ ವಿರುದ್ಧ ಡಿಜಿ-ಐಜಿಪಿಗೆ ದೂರು!

ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿ ಹಿಂದೂಪರ ಹೋರಾಟಗಾರ ತೇಜಸ್ ಗೌಡ ಅವರು ಯೂಟ್ಯೂಬರ್ ಸಮೀರ್ ವಿರುದ್ಧ ಡಿಜಿ-ಐಜಿಪಿಗೆ ದೂರು ಸಲ್ಲಿಸಿದ್ದಾರೆ.