spot_img

ದಶಕಗಳಿಂದ ಕಾಂಗ್ರೆಸ್ ಆಡಳಿತದಲ್ಲಿರುವ ಹಾರಾಡಿ ಗ್ರಾ.ಪಂ. ನ ಮಾನ ಹರಾಜು ಹಾಕಿದ ಕಾಂಗ್ರೆಸ್ ಮುಖಂಡ ಪ್ರಸಾದ್ ಕಾಂಚನ್ : ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಪ್ರದೀಪ್ ಕುಂದರ್ ಹೊನ್ನಾಳ

Date:

spot_img
  • ಕೀಳು ಮಟ್ಟದ ಹೇಳಿಕೆ ನಿಲ್ಲಿಸದಿದ್ದರೆ ತಕ್ಕ ಉತ್ತರ : ಬಿಜೆಪಿ ಜಿಲ್ಲಾ ಯುವ ಮೋರ್ಚಾ

ಉಡುಪಿ : ಜು.23ರಂದು ಹಾರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರ ಕಾರ್ಯ ವೈಖರಿಯನ್ನು ಟೀಕಿಸುವ ಭರದಲ್ಲಿ ದಶಕಗಳಿಂದ ಸ್ವಯಂ ಕಾಂಗ್ರೆಸ್ ಬೆಂಬಲಿತ ಜನಪ್ರತಿನಿಧಿಗಳ ಆಡಳಿತದಲ್ಲಿರುವ ಹಾರಾಡಿ ಗ್ರಾ.ಪಂ. ಕಟ್ಟಡ ಸೋರುತ್ತಿರುವುದನ್ನು ಟೀಕಿಸಿರುವ ಕಾಂಗ್ರೆಸ್ ಮುಖಂಡ ಪ್ರಸಾದ್ ಕಾಂಚನ್ ಸ್ವಪಕ್ಷಿಯರಿಂದಲೇ ಟೀಕೆಗೆ ಒಳಗಾಗಿದ್ದು, ಹಾರಾಡಿ ಗ್ರಾ.ಪಂ. ಮರ್ಯಾದೆಯನ್ನು ಹರಾಜು ಹಾಕಿ ನಗೆಪಾಟಲಿಗೀಡಾಗಿದ್ದಾರೆ ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಪ್ರದೀಪ್ ಕುಂದರ್ ಹೊನ್ನಾಳ ತಿಳಿಸಿದ್ದಾರೆ.

ಉಡುಪಿ ಶಾಸಕರ ಕಾರ್ಯವೈಖರಿ ಹಾಗೂ ಜನಪ್ರಿಯತೆಯನ್ನು ಸಹಿಸಲಾಗದೆ ತೀವ್ರ ಹತಾಶರಾಗಿ ಬೇಕಾಬಿಟ್ಟಿಯಾಗಿ ಮಾತನಾಡುತ್ತಿರುವ ಪ್ರಸಾದ್ ಕಾಂಚನ್ ಗೆ ಓರ್ವ ಜನಪ್ರತಿನಿಧಿಗೆ ಯಾವ ರೀತಿಯಲ್ಲಿ ಗೌರವ ನೀಡಬೇಕೆಂಬ ಕನಿಷ್ಠ ಜ್ಞಾನವಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಅವರು ತಿಳಿಸಿದ್ದಾರೆ.

ತಮ್ಮದೇ ಪಕ್ಷದ ಹಾರಾಡಿ ಗ್ರಾಮ ಪಂಚಾಯತ್ ಆಡಳಿತವನ್ನು ಟೀಕಿಸಿದ ಪ್ರಸಾದ್ ಕಾಂಚನ್ ಗೆ ಬಿಜೆಪಿ ಕಾರ್ಯಕರ್ತರ ಪರವಾಗಿ ಧನ್ಯವಾದ ತಿಳಿಸುತ್ತೇನೆ. ಈ ಹೇಳಿಕೆಯಿಂದ ಹಾರಾಡಿ-ಬೈಕಾಡಿ ಗ್ರಾಮ ಪಂಚಾಯತ್ ಕಾಂಗ್ರೆಸ್ ಸದಸ್ಯರ ವೈಫಲ್ಯವನ್ನು ಅವರ ನಾಯಕನೇ ಖುದ್ದಾಗಿ ಹೇಳಿರುವುದು ಕಾಂಗ್ರೆಸ್ ಕಾರ್ಯಕರ್ತರಿಗೆ ಚಪ್ಪಲಿಯನ್ನು ಬಟ್ಟೆಯಲ್ಲಿ ಸುತ್ತಿ ಹೊಡೆದಂತಾಗಿದೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

ಜನರಿಂದ ಆಯ್ಕೆಯಾಗಿರುವ ಶಾಸಕರಿಗೆ ಏಕ ವಚನದ ಪ್ರಯೋಗದ ಜೊತೆಗೆ ಕಾಂಚನ್ ಅವರ ಲಜ್ಜೆಗೇಡಿತನದ ಹೇಳಿಕೆಗಳನ್ನು ಬುದ್ದಿವಂತರ ಜಿಲ್ಲೆ ಉಡುಪಿಯ ಪ್ರಜ್ಞಾವಂತ ಜನತೆ ಎಂದೂ ಸಹಿಸಲಾರರು. ಇಂತಹ ಕೀಳು ಮಟ್ಟದ ಹೇಳಿಕೆಯನ್ನು ಮುಂದುವರಿಸಿದಲ್ಲಿ ಜಿಲ್ಲಾ ಯುವ ಮೋರ್ಚಾ ತಕ್ಕ ಉತ್ತರ ನೀಡಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ಪ್ರದೀಪ್ ಕುಂದರ್ ಹೊನ್ನಾಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳದ ಗೋವಿಂದೂರಿನಲ್ಲಿ ಭೀಕರ ಗಾಳಿ ಮಳೆಗೆ ಅಯ್ಯಪ್ಪ ಶಿಬಿರದ ಮೇಲ್ಚಾವಣಿ ಕುಸಿತ

ಇಂದು ಮದ್ಯಾಹ್ನ 3:00 ಸುಮಾರಿಗೆ ಬಿರುಸಿನ ಗಾಳಿ ಮಳೆಗೆ ಕಾರ್ಕಳದ ಗೋವಿಂದೂರಿನ ಅಯ್ಯಪ್ಪ ಶಿಬಿರದ ಮೇಲ್ಚಾವಣಿ ಗಾಳಿಯ ರಭಸಕ್ಕೆ ಹಾರಿ ನುಚ್ಚುನೂರಾಗಿದೆ.

40 ದಾಟಿದವರ ಸಂಧು ನೋವಿಗೆ ಆಯುರ್ವೇದದಲ್ಲಿದೆ ಪರಿಣಾಮಕಾರಿ ಪರಿಹಾರ!

ವಯಸ್ಸು 40 ದಾಟಿದಂತೆ ಕಾಣಿಸಿಕೊಳ್ಳುವ ಸಂಧು ನೋವು ಅದೆಷ್ಟೋ ಜನರನ್ನು ಕಾಡುತ್ತದೆ.

ವಾಟ್ಸಾಪ್‌ನಿಂದ ಹೊಸ AI ವೈಶಿಷ್ಟ್ಯ ‘ಕ್ವಿಕ್ ರಿಕ್ಯಾಪ್’: ಇನ್ನು ಮಿಸ್ಡ್ ಮೆಸೇಜ್ ಚಿಂತೆ ಇಲ್ಲ!

ಮೆಟಾ ಕಂಪನಿಯು ಅಭಿವೃದ್ಧಿಪಡಿಸಿರುವ ವಾಟ್ಸಾಪ್ ಕ್ವಿಕ್ ರಿಕ್ಯಾಪ್ AI (WhatsApp Quick Recap AI) ಎಂಬ ನೂತನ ಕೃತಕ ಬುದ್ಧಿಮತ್ತೆ ಆಧಾರಿತ ವೈಶಿಷ್ಟ್ಯವು, ಬಳಕೆದಾರರು ಗ್ರೂಪ್‌ಗಳು ಅಥವಾ ವೈಯಕ್ತಿಕ ಚಾಟ್‌ಗಳಲ್ಲಿ ಮಿಸ್ ಮಾಡಿಕೊಂಡ ಸಂದೇಶಗಳನ್ನು ಸರಳ ಮತ್ತು ಅರ್ಥಪೂರ್ಣವಾಗಿ ಸಂಕ್ಷಿಪ್ತಗೊಳಿಸಲು ನೆರವಾಗಲಿದೆ.

ಜ್ಞಾನಸುಧಾ : ಮೌಲ್ಯಸುಧಾ-38ರಲ್ಲಿ ‘ಕಾರ್ಗಿಲ್ ವಿಜಯ ದಿವಸ’

ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ ಮೌಲ್ಯಸುಧಾ ಮಾಲಿಕೆ-38ನ್ನು ಕಾರ್ಗಿಲ್ ವಿಜಯದಿವಸದ ಶುಭಸಂದರ್ಭದಲ್ಲಿ ಆಯೋಜಿಸಲಾಗಿದೆ.