spot_img

ಧರ್ಮಸ್ಥಳ ವಿರುದ್ಧದ ಷಡ್ಯಂತ್ರ, ಅಪಪ್ರಚಾರಗಳಿಗೆ ಪೂರ್ಣ ವಿರಾಮ ಇಡಲೇ ಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Date:

spot_img
grahalakshmi2

ಉಡುಪಿ : ಧರ್ಮಸ್ಥಳ ಧಾರ್ಮಿಕ ಸಂಸ್ಥೆಯ ವಿರುದ್ಧ ನಡೆಯುತ್ತಿರುವ ಎಲ್ಲಾ ಷಡ್ಯಂತ್ರ ಮತ್ತು ಅಪಪ್ರಚಾರಗಳಿಗೆ ತಕ್ಷಣವೇ ಪೂರ್ಣ ವಿರಾಮ ಹಾಕಬೇಕು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಒತ್ತಾಯಿಸಿದ್ದಾರೆ.

ಡಿಸಿಎಂ ಡಿಕೆಶಿ ಹೇಳಿಕೆಗೆ ದನಿಗೂಡಿಸಿದ ಹೆಬ್ಬಾಳ್ಕರ್

ಉಡುಪಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, “ನಾವೆಲ್ಲ ಧರ್ಮಸ್ಥಳದ ಭಕ್ತರು ಮತ್ತು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಸಾಮಾಜಿಕ ಕೆಲಸಗಳನ್ನು ಮೆಚ್ಚಿಕೊಂಡಿದ್ದೇವೆ. ಈ ಷಡ್ಯಂತ್ರದ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೂ ಗೊತ್ತಿದೆ. ಸದನದ ಒಳಗೂ ಅವರು ಇದನ್ನು ಷಡ್ಯಂತ್ರ ಎಂದು ಹೇಳಿದ್ದಾರೆ. ನಾನು ಅವರ ಹೇಳಿಕೆಗೆ ದನಿಗೂಡಿಸುತ್ತೇನೆ” ಎಂದರು.

ಷಡ್ಯಂತ್ರ ಮಾಡಿದವರಿಗೆ ಇದು “ಎಲ್ಲವೂ ಭೋಗಸ್” ಎಂದು ಗೊತ್ತಾಗಬೇಕು. ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಅಪಪ್ರಚಾರವನ್ನು ನಿಲ್ಲಿಸಬೇಕು ಎಂದು ಅವರು ಆಗ್ರಹಿಸಿದರು.

ಸೌಜನ್ಯ ಪ್ರಕರಣಕ್ಕೆ ನ್ಯಾಯ, ಆದರೆ ಅನಾಮಿಕರ ಅಪಪ್ರಚಾರ ಬೇಡ

ಸೌಜನ್ಯ ಪ್ರಕರಣದ ಕುರಿತು ಮಾತನಾಡಿದ ಸಚಿವರು, “ಒಬ್ಬ ಹೆಣ್ಣುಮಗಳಾಗಿ ಸೌಜನ್ಯಳ ಪ್ರಕರಣಕ್ಕೆ ನ್ಯಾಯ ಸಿಗಬೇಕು ಎಂದು ನಾನು ಒತ್ತಾಯಿಸುತ್ತೇನೆ. ಆದರೆ ಈ ಅನಾಮಿಕ ಯಾರು? ಇವತ್ತು ಇಲ್ಲಿ ತೋರಿಸ್ತಾನೆ, ನಾಳೆ ಅಲ್ಲಿ ಇದೆ ಅಂತಾನೆ. ಇದಕ್ಕೆಲ್ಲ ಒಂದು ಪೂರ್ಣವಿರಾಮ ಬೇಕು” ಎಂದು ಹೇಳುವ ಮೂಲಕ ಇಲ್ಲಸಲ್ಲದ ಆರೋಪಗಳನ್ನು ನಿಲ್ಲಿಸಬೇಕು ಎಂದು ಸ್ಪಷ್ಟಪಡಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕ್ರಿಯೇಟಿವ್: 79ನೇ ಸಂಭ್ರಮದ ಸ್ವಾತಂತ್ರ್ಯೋತ್ಸವ.

ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ 79ನೇ ಸಂಭ್ರಮದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.

ಕಾರ್ಕಳ ಜ್ಞಾನಸುಧಾ : ಸ್ವಾತಂತ್ರ್ಯ ದಿನಾಚರಣೆ

ಡಾ.ಶ್ರೀನಿವಾಸ್‌ ದೇಶ್‌ಪಾಂಡೆಯವರು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅವರಣದಲ್ಲಿ ಜರುಗಿದ 79ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಕಾರ್ಕಳ ಅಯ್ಯಪ್ಪನಗರ ವಿಜೇತ ವಿಶೇಷ ಶಾಲೆಯಲ್ಲಿ 79ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಸಮವಸ್ತ್ರ ವಿತರಣೆ ಹಾಗೂ ವನಮಹೋತ್ಸವ ಕಾರ್ಯಕ್ರಮ.

ವಿಜೇತ ವಿಶೇಷ ಶಾಲೆಯಲ್ಲಿ 79ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಕುಕ್ಕುಂದೂರು ಪಂಚಾಯತ್ ಸದಸ್ಯರಾದ ಶ್ರೀಮತಿ ಶಾಂತಿ ಕಿಣಿ ಇವರು ನೆರವೇರಿಸಿ ವಿದ್ಯಾರ್ಥಿಗಳಿಂದ ಗೌರವ ವಂದನೆ ಸ್ವೀಕರಿಸಿ,ಸಭಾ ಕಾರ್ಯಕ್ರಮದಲ್ಲಿ ಶುಭ ಹಾರೈಸಿದರು.

79ನೇ ಸ್ವಾತಂತ್ರ್ಯೋತ್ಸವ: ಆರ್‌ಎಸ್‌ಎಸ್‌ ವಿಶ್ವದ ಬೃಹತ್‌ ಎನ್‌ಜಿಒ ಎಂದ ಪ್ರಧಾನಿ ಮೋದಿ

ದೇಶದ 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ದೇಶಕ್ಕಾಗಿ ಸಲ್ಲಿಸಿದ ಸೇವೆಗಳನ್ನು ಶ್ಲಾಘಿಸಿದರು.