spot_img

ಧರ್ಮಸ್ಥಳ ವಿರುದ್ಧದ ಷಡ್ಯಂತ್ರ, ಅಪಪ್ರಚಾರಗಳಿಗೆ ಪೂರ್ಣ ವಿರಾಮ ಇಡಲೇ ಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Date:

spot_img
spot_img
grahalakshmi2

ಉಡುಪಿ : ಧರ್ಮಸ್ಥಳ ಧಾರ್ಮಿಕ ಸಂಸ್ಥೆಯ ವಿರುದ್ಧ ನಡೆಯುತ್ತಿರುವ ಎಲ್ಲಾ ಷಡ್ಯಂತ್ರ ಮತ್ತು ಅಪಪ್ರಚಾರಗಳಿಗೆ ತಕ್ಷಣವೇ ಪೂರ್ಣ ವಿರಾಮ ಹಾಕಬೇಕು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಒತ್ತಾಯಿಸಿದ್ದಾರೆ.

ಡಿಸಿಎಂ ಡಿಕೆಶಿ ಹೇಳಿಕೆಗೆ ದನಿಗೂಡಿಸಿದ ಹೆಬ್ಬಾಳ್ಕರ್

ಉಡುಪಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, “ನಾವೆಲ್ಲ ಧರ್ಮಸ್ಥಳದ ಭಕ್ತರು ಮತ್ತು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಸಾಮಾಜಿಕ ಕೆಲಸಗಳನ್ನು ಮೆಚ್ಚಿಕೊಂಡಿದ್ದೇವೆ. ಈ ಷಡ್ಯಂತ್ರದ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೂ ಗೊತ್ತಿದೆ. ಸದನದ ಒಳಗೂ ಅವರು ಇದನ್ನು ಷಡ್ಯಂತ್ರ ಎಂದು ಹೇಳಿದ್ದಾರೆ. ನಾನು ಅವರ ಹೇಳಿಕೆಗೆ ದನಿಗೂಡಿಸುತ್ತೇನೆ” ಎಂದರು.

ಷಡ್ಯಂತ್ರ ಮಾಡಿದವರಿಗೆ ಇದು “ಎಲ್ಲವೂ ಭೋಗಸ್” ಎಂದು ಗೊತ್ತಾಗಬೇಕು. ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಅಪಪ್ರಚಾರವನ್ನು ನಿಲ್ಲಿಸಬೇಕು ಎಂದು ಅವರು ಆಗ್ರಹಿಸಿದರು.

ಸೌಜನ್ಯ ಪ್ರಕರಣಕ್ಕೆ ನ್ಯಾಯ, ಆದರೆ ಅನಾಮಿಕರ ಅಪಪ್ರಚಾರ ಬೇಡ

ಸೌಜನ್ಯ ಪ್ರಕರಣದ ಕುರಿತು ಮಾತನಾಡಿದ ಸಚಿವರು, “ಒಬ್ಬ ಹೆಣ್ಣುಮಗಳಾಗಿ ಸೌಜನ್ಯಳ ಪ್ರಕರಣಕ್ಕೆ ನ್ಯಾಯ ಸಿಗಬೇಕು ಎಂದು ನಾನು ಒತ್ತಾಯಿಸುತ್ತೇನೆ. ಆದರೆ ಈ ಅನಾಮಿಕ ಯಾರು? ಇವತ್ತು ಇಲ್ಲಿ ತೋರಿಸ್ತಾನೆ, ನಾಳೆ ಅಲ್ಲಿ ಇದೆ ಅಂತಾನೆ. ಇದಕ್ಕೆಲ್ಲ ಒಂದು ಪೂರ್ಣವಿರಾಮ ಬೇಕು” ಎಂದು ಹೇಳುವ ಮೂಲಕ ಇಲ್ಲಸಲ್ಲದ ಆರೋಪಗಳನ್ನು ನಿಲ್ಲಿಸಬೇಕು ಎಂದು ಸ್ಪಷ್ಟಪಡಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ತುಳುನಾಡಿನ ಆರಾಧ್ಯ ದೈವ ಕೊರಗಜ್ಜನ ಕುರಿತ ಚಿತ್ರಕ್ಕೆ ಪ್ರಬಲ ವಿರೋಧ: ನಲ್ಕೆ ಸಂಘಟನೆಗಳಿಂದ ಬೃಹತ್ ಪ್ರತಿಭಟನೆಗೆ ಸಿದ್ಧತೆ!

ಇದೀಗ ತುಳುನಾಡಿನ ಮತ್ತೊಬ್ಬ ಆರಾಧ್ಯ ದೈವವಾದ ಕೊರಗಜ್ಜನ ಕುರಿತಾದ ಚಲನಚಿತ್ರವೊಂದು ಬಿಡುಗಡೆಗೆ ಸಿದ್ಧವಾಗಿದ್ದು, ದೈವದ ಪಾವಿತ್ರ್ಯತೆಗೆ ಧಕ್ಕೆಯಾಗುವ ಆತಂಕ ಮತ್ತಷ್ಟು ದೊಡ್ಡಮಟ್ಟದ ವಿರೋಧಕ್ಕೆ ಕಾರಣವಾಗಿದೆ.

ತೀರ್ಥಹಳ್ಳಿ: ರಸ್ತೆಯ ಗುಂಡಿ ತಪ್ಪಿಸಲು ಹೋಗಿ ಚರಂಡಿಗೆ ಜಾರಿದ ಕಾರು; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರು ರಸ್ತೆಯ ಗುಂಡಿಯನ್ನು ತಪ್ಪಿಸುವ ಭರದಲ್ಲಿ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.

ಬಿಗ್ ಬಾಸ್ ಕನ್ನಡ 12: ಜಾನ್ವಿಗೆ ‘ನಾಗವಲ್ಲಿ’ ಪಟ್ಟ ಕಟ್ಟಿದ ರಕ್ಷಿತಾ – ದೊಡ್ಮನೆಯಲ್ಲಿ ವಾಗ್ವಾದದ ಕಿಡಿ!

ಅಶ್ವಿನಿ, ಜಾನ್ವಿ ಮತ್ತು ರಕ್ಷಿತಾ ಶೆಟ್ಟಿ ನಡುವಿನ ವಾಗ್ವಾದವು ದೊಡ್ಮನೆಯಲ್ಲಿ ದೊಡ್ಡ ಹೈಡ್ರಾಮವನ್ನೇ ಸೃಷ್ಟಿಸಿದೆ.

ವೈದ್ಯೆ ಪತ್ನಿ ಕೊಲೆ ಪ್ರಕರಣ: ಡಾ. ಮಹೇಂದ್ರ 8 ದಿನಗಳ ಪೊಲೀಸ್ ಕಸ್ಟಡಿಗೆ; ಸ್ಥಳ ಮಹಜರಿನಲ್ಲಿ ಪ್ರಮುಖ ಸುಳಿವುಗಳ ಲಭ್ಯ

ಅರಿವಳಿಕೆ ಮದ್ದು ಬಳಸಿ ತನ್ನ ವೈದ್ಯೆ ಪತ್ನಿಯನ್ನು ಕೊಲೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಡಾ. ಮಹೇಂದ್ರ ರೆಡ್ಡಿ ಅವರನ್ನು ಪೊಲೀಸರು 8 ದಿನಗಳ ಕಾಲ ತಮ್ಮ ವಶಕ್ಕೆ ಪಡೆದಿದ್ದಾರೆ.