spot_img

ಮದುವೆಯಾದ 15 ದಿನಕ್ಕೆ ಗಾರೆ ಕೆಲಸದವನೊಂದಿಗೆ ಕಂಟ್ರ್ಯಾಕ್ಟರ್ ಮಗಳು ಎಸ್ಕೇಪ್!

Date:

ಕೊಪ್ಪಳ : ಕೊಪ್ಪಳದಲ್ಲಿ ವಿಶಿಷ್ಟ ಪ್ರೇಮ ಕಥೆಯೊಂದು ಬೆಳಕಿಗೆ ಬಂದಿದೆ. ಮದುವೆಯಾದ ಕೇವಲ 15 ದಿನಗಳಲ್ಲಿ ಲೇಬರ್ ಕಂಟ್ರ್ಯಾಕ್ಟರ್ ಮಗಳೊಬ್ಬಳು, ತಾನು ಪ್ರೀತಿಸಿದ ಗಾರೆ ಕೆಲಸದಾತನೊಂದಿಗೆ ಓಡಿಹೋಗಿ ಕೊಪ್ಪಳಕ್ಕೆ ಬಂದಿದ್ದಾಳೆ.

ಆಂಧ್ರಪ್ರದೇಶ ಮೂಲದ ಗುತ್ತಿಗೆದಾರರ ಪುತ್ರಿಯೊಬ್ಬಳು, ಬೆಂಗಳೂರಿನಲ್ಲಿ ತನ್ನ ತಂದೆ ಕೆಲಸ ಮಾಡುತ್ತಿದ್ದಾಗ, ಅಲ್ಲಿ ಗಾರೆ ಕೆಲಸ ಮಾಡುತ್ತಿದ್ದ ವೆಂಕಟೇಶ್ ಎಂಬಾತನೊಂದಿಗೆ ಪ್ರೀತಿಯಲ್ಲಿ ಬಿದ್ದಿದ್ದಳು. ಕಳೆದ ಮೂರು ವರ್ಷಗಳಿಂದ ಇವರಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಅವರ ಪ್ರೀತಿಯ ವಿಷಯ ತಿಳಿದ ಯುವತಿಯ ಪೋಷಕರು, ಆಕೆಯನ್ನು ಊರಿಗೆ ಕರೆದುಕೊಂಡು ಹೋಗಿ ಬಲವಂತವಾಗಿ ಬೇರೊಬ್ಬ ವ್ಯಕ್ತಿಯೊಂದಿಗೆ ಮದುವೆ ಮಾಡಿಸಿದ್ದರು.

ಮದುವೆಯಾಗಿ ಗಂಡನ ಮನೆಗೆ ಹೋದ ಗೃಹಿಣಿ, ಪ್ರೀತಿಸಿದ ವೆಂಕಟೇಶ್‌ಗೆ ಕರೆ ಮಾಡಿ, ತಾನು ಅವನೊಂದಿಗೆ ಬರುವುದಾಗಿ ತಿಳಿಸಿದ್ದಾಳೆ. ಇಲ್ಲವಾದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸಿ, ಮದುವೆಯಾದ ಕೇವಲ 15 ದಿನಗಳಲ್ಲೇ ಗಂಡನ ಮನೆ ಬಿಟ್ಟು, ಪ್ರೀತಿಸಿದ ಯುವಕನ ಜೊತೆ ಕೊಪ್ಪಳಕ್ಕೆ ಬಂದಿದ್ದಾಳೆ.

ಈ ವಿಷಯ ತಿಳಿದ ಯುವತಿಯ ಪೋಷಕರು ಆಂಧ್ರಪ್ರದೇಶದಿಂದ ಕೊಪ್ಪಳಕ್ಕೆ ಆಗಮಿಸಿ, ಈ ಜೋಡಿಯ ಹುಡುಕಾಟ ನಡೆಸಿದ್ದಾರೆ. ಸದ್ಯ, ಈ ಜೋಡಿ ತಮ್ಮ ರಕ್ಷಣೆಗಾಗಿ ಕೊಪ್ಪಳ ಪೊಲೀಸ್ ವರಿಷ್ಠಾಧಿಕಾರಿ (ಎಸ್.ಪಿ) ಮೊರೆ ಹೋಗಿದ್ದು, ತಮಗೆ ರಕ್ಷಣೆ ಸಿಗುವವರೆಗೂ ಎಲ್ಲಿಗೂ ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರಾಣಿಯರಾದ ಅಬ್ಬಕ್ಕ, ಕಿತ್ತೂರು ಚೆನ್ನಮ್ಮ, ಅಹಲ್ಯೆ ಬಾಯಿಯರ ಸಾಹಸ ಮಹಿಳೆಯರಿಗೆ ಸ್ಪೂರ್ತಿ : ಡಾ ಮೇಘಾ ಖಂಡೇಲವಾಲ

ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ ಎಸ್ ಇರಾಣಿ ಪದವಿ ಮಹಾವಿದ್ಯಾಲಯದಲ್ಲಿ ನಡೆದ ಮಹಾವಿದ್ಯಾಲಯದ ಮಹಿಳಾ ಕೋಶ, ಕೇಂದ್ರೀಯ ವಿಶ್ವವಿದ್ಯಾಲಯ ಕರ್ನಾಟಕ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ್ ಮಹಾ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿತು.

ದಾವಣಗೆರೆಯಲ್ಲಿ ರಾಜ್ಯಮಟ್ಟದ “ಕುಪ್ಮಾ” ಸಮಾವೇಶ

ಕುಪ್ಮಾದ ರಾಜ್ಯಮಟ್ಟದ ದ್ವಿತೀಯ ಸಮಾವೇಶವು 2025ರ ಸೆಪ್ಟೆಂಬರ್ ತಿಂಗಳಲ್ಲಿ ದಿನಾಂಕ 12 ಮತ್ತು 13ರಂದು 'ಎಸ್. ಎಸ್. ಮಲ್ಲಿಕಾರ್ಜುನ ಕಲ್ಚರಲ್ ಸೆಂಟರ್, ಬಿಐಇಟಿ, ದಾವಣಗೆರೆ, ಇಲ್ಲಿ ನಡೆಯಲಿದೆ.

ನೇಪಾಳದಲ್ಲಿ ಭುಗಿಲೆದ್ದ ಪ್ರತಿಭಟನೆ: ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ

ನೇಪಾಳದಲ್ಲಿ ಭುಗಿಲೆದ್ದ ಭ್ರಷ್ಟಾಚಾರ ವಿರೋಧಿ ಮತ್ತು ಸರ್ಕಾರದ ವಿರುದ್ಧದ ಪ್ರತಿಭಟನೆಗಳು ಹಿಂಸಾತ್ಮಕ ರೂಪ ಪಡೆದ ಹಿನ್ನೆಲೆಯಲ್ಲಿ ಪ್ರಧಾನಿ ಕೆ.ಪಿ.ಶರ್ಮಾ ಓಲಿ ರಾಜೀನಾಮೆ ನೀಡಿದ್ದಾರೆ.

ಆಲ್ ಇಂಡಿಯಾ ಕರಾಟೆ ಸ್ಪರ್ಧಾಕೂಟದಲ್ಲಿ ಮಿಂಚಿದ ನಚಿಕೇತ ವಿದ್ಯಾಲಯ : ಒಟ್ಟು 6 ಪದಕಗಳ ಸಾಧನೆ

ಆಲ್ ಇಂಡಿಯಾ ಕರಾಟೆ ಸ್ಪರ್ಧಾಕೂಟದಲ್ಲಿ ನಚಿಕೇತ ವಿದ್ಯಾಲಯದ ವಿದ್ಯಾರ್ಥಿಗಳು ಒಟ್ಟು 6 ಪದಕಗಳನ್ನು ಪಡೆದಿರುತ್ತಾರೆ.