spot_img

ಮದುವೆಯಾದ 15 ದಿನಕ್ಕೆ ಗಾರೆ ಕೆಲಸದವನೊಂದಿಗೆ ಕಂಟ್ರ್ಯಾಕ್ಟರ್ ಮಗಳು ಎಸ್ಕೇಪ್!

Date:

spot_img

ಕೊಪ್ಪಳ : ಕೊಪ್ಪಳದಲ್ಲಿ ವಿಶಿಷ್ಟ ಪ್ರೇಮ ಕಥೆಯೊಂದು ಬೆಳಕಿಗೆ ಬಂದಿದೆ. ಮದುವೆಯಾದ ಕೇವಲ 15 ದಿನಗಳಲ್ಲಿ ಲೇಬರ್ ಕಂಟ್ರ್ಯಾಕ್ಟರ್ ಮಗಳೊಬ್ಬಳು, ತಾನು ಪ್ರೀತಿಸಿದ ಗಾರೆ ಕೆಲಸದಾತನೊಂದಿಗೆ ಓಡಿಹೋಗಿ ಕೊಪ್ಪಳಕ್ಕೆ ಬಂದಿದ್ದಾಳೆ.

ಆಂಧ್ರಪ್ರದೇಶ ಮೂಲದ ಗುತ್ತಿಗೆದಾರರ ಪುತ್ರಿಯೊಬ್ಬಳು, ಬೆಂಗಳೂರಿನಲ್ಲಿ ತನ್ನ ತಂದೆ ಕೆಲಸ ಮಾಡುತ್ತಿದ್ದಾಗ, ಅಲ್ಲಿ ಗಾರೆ ಕೆಲಸ ಮಾಡುತ್ತಿದ್ದ ವೆಂಕಟೇಶ್ ಎಂಬಾತನೊಂದಿಗೆ ಪ್ರೀತಿಯಲ್ಲಿ ಬಿದ್ದಿದ್ದಳು. ಕಳೆದ ಮೂರು ವರ್ಷಗಳಿಂದ ಇವರಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಅವರ ಪ್ರೀತಿಯ ವಿಷಯ ತಿಳಿದ ಯುವತಿಯ ಪೋಷಕರು, ಆಕೆಯನ್ನು ಊರಿಗೆ ಕರೆದುಕೊಂಡು ಹೋಗಿ ಬಲವಂತವಾಗಿ ಬೇರೊಬ್ಬ ವ್ಯಕ್ತಿಯೊಂದಿಗೆ ಮದುವೆ ಮಾಡಿಸಿದ್ದರು.

ಮದುವೆಯಾಗಿ ಗಂಡನ ಮನೆಗೆ ಹೋದ ಗೃಹಿಣಿ, ಪ್ರೀತಿಸಿದ ವೆಂಕಟೇಶ್‌ಗೆ ಕರೆ ಮಾಡಿ, ತಾನು ಅವನೊಂದಿಗೆ ಬರುವುದಾಗಿ ತಿಳಿಸಿದ್ದಾಳೆ. ಇಲ್ಲವಾದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸಿ, ಮದುವೆಯಾದ ಕೇವಲ 15 ದಿನಗಳಲ್ಲೇ ಗಂಡನ ಮನೆ ಬಿಟ್ಟು, ಪ್ರೀತಿಸಿದ ಯುವಕನ ಜೊತೆ ಕೊಪ್ಪಳಕ್ಕೆ ಬಂದಿದ್ದಾಳೆ.

ಈ ವಿಷಯ ತಿಳಿದ ಯುವತಿಯ ಪೋಷಕರು ಆಂಧ್ರಪ್ರದೇಶದಿಂದ ಕೊಪ್ಪಳಕ್ಕೆ ಆಗಮಿಸಿ, ಈ ಜೋಡಿಯ ಹುಡುಕಾಟ ನಡೆಸಿದ್ದಾರೆ. ಸದ್ಯ, ಈ ಜೋಡಿ ತಮ್ಮ ರಕ್ಷಣೆಗಾಗಿ ಕೊಪ್ಪಳ ಪೊಲೀಸ್ ವರಿಷ್ಠಾಧಿಕಾರಿ (ಎಸ್.ಪಿ) ಮೊರೆ ಹೋಗಿದ್ದು, ತಮಗೆ ರಕ್ಷಣೆ ಸಿಗುವವರೆಗೂ ಎಲ್ಲಿಗೂ ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಇರುವತ್ತೂರು ಕೊಳಕೆ ಶಾಲಾ ವಿದ್ಯಾರ್ಥಿಗಳಿಗೆ ಆನಂದ್ ಸರ್ ಅಭಿಮಾನಿ ಶಿಷ್ಯರ ಬಳಗದಿಂದ ಕೊಡೆ, ಕಲಿಕಾ ಸಾಮಗ್ರಿ ವಿತರಣೆ

ಇರುವತ್ತೂರು ಕೊಳಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಆನಂದ್ ಸರ್ ಅಭಿಮಾನಿ ಶಿಷ್ಯರ ಬಳಗ, ಕುಂದಾಪುರ ವತಿಯಿಂದ ಸುಮಾರು ₹20,000 ಮೌಲ್ಯದ ಕೊಡೆಗಳು ಮತ್ತು ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.

ಪರಶುರಾಮ ಮೂರ್ತಿ ಬಗ್ಗೆ ಅಪಪ್ರಚಾರಗೈದ ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ಮತ್ತು ಅವರ ತಂಡ ಜಿಲ್ಲೆಯ ಜನತೆಯ ಕ್ಷಮೆ ಯಾಚಿಸಬೇಕು : ಸಂಧ್ಯಾ ರಮೇಶ್

ಪರಶುರಾಮ ಮೂರ್ತಿ ಬಗ್ಗೆ ಅಪಪ್ರಚಾರಗೈದ ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ಮತ್ತು ಅವರ ತಂಡ ಜಿಲ್ಲೆಯ ಜನತೆಯ ಕ್ಷಮೆ ಯಾಚಿಸಬೇಕು ಎಂದು ಸಂಧ್ಯಾ ರಮೇಶ್ ತಿಳಿಸಿದ್ದಾರೆ.

“ಬಿಜೆಪಿಗೆ ಧೈರ್ಯವಿದ್ದರೆ ದಲಿತರನ್ನು ಪ್ರಧಾನಿ ಮಾಡಿ”: ವಿಜಯೇಂದ್ರಗೆ ಸಿಎಂ ಸಿದ್ದರಾಮಯ್ಯ ಸವಾಲು!

ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸುವಂತೆ ಹೇಳಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀಕ್ಷ್ಣ ತಿರುಗೇಟು ನೀಡಿದ್ದಾರೆ.

ಫೋನ್ ಪಾಸ್‌ವರ್ಡ್ ನೀಡುವಂತೆ ಪತ್ನಿಗೆ ಒತ್ತಾಯಿಸುವಂತಿಲ್ಲ: ಛತ್ತೀಸ್‌ಗಢ ಹೈಕೋರ್ಟ್ ಮಹತ್ವದ ತೀರ್ಪು!

ಪತ್ನಿಯ ಮೊಬೈಲ್ ಫೋನ್ ಪಾಸ್‌ವರ್ಡ್ ಅಥವಾ ಬ್ಯಾಂಕ್ ಖಾತೆ ವಿವರಗಳನ್ನು ಹಂಚಿಕೊಳ್ಳುವಂತೆ ಒತ್ತಾಯಿಸುವುದು ಆಕೆಯ ಗೌಪ್ಯತೆಯ ಹಕ್ಕಿನ ಉಲ್ಲಂಘನೆ ಎಂದು ಛತ್ತೀಸ್‌ಗಢ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ