spot_img

ಧರ್ಮಸ್ಥಳ, ಉಡುಪಿ, ಕೊಲ್ಲೂರು ಕ್ಷೇತ್ರಗಳ ಬಗ್ಗೆ ವಿವಾದಾತ್ಮಕ ವಿಡಿಯೋ : ಇಬ್ಬರು ಕೇರಳ ಯೂಟ್ಯೂಬರ್‌ಗಳ ವಿರುದ್ಧ ಪ್ರಕರಣ ದಾಖಲು!

Date:

spot_img
fir11

ಉಡುಪಿ: ಕರಾವಳಿಯ ಪ್ರಮುಖ ಧಾರ್ಮಿಕ ಕ್ಷೇತ್ರಗಳಾದ ಧರ್ಮಸ್ಥಳ, ಉಡುಪಿ, ಮತ್ತು ಕೊಲ್ಲೂರು ಬಗ್ಗೆ ಅವಹೇಳನಕಾರಿ ವಿಡಿಯೋಗಳನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿದ ಕೇರಳದ ಇಬ್ಬರು ವ್ಯಕ್ತಿಗಳ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಿರಿಯಡ್ಕದ ಬೆಳ್ಳರ್ಪಾಡಿ ನಿವಾಸಿ ಶ್ರೀಕುಮಾರ್ ಅವರು ನೀಡಿದ ದೂರಿನನ್ವಯ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಯೂಟ್ಯೂಬರ್‌ಗಳ ಹೇಳಿಕೆಗಳೇನು?

ಮಲ್ಲು ಮಾರ್ಟ್ ಟ್ರಾವೆಲರ್ ಮತ್ತು ಮಾನಫ್ ಎಂಬ ವ್ಯಕ್ತಿಗಳು ತಮ್ಮ ಫೇಸ್‌ಬುಕ್ ಮತ್ತು ಯೂಟ್ಯೂಬ್ ಚಾನೆಲ್‌ಗಳಲ್ಲಿ ಈ ವಿವಾದಾತ್ಮಕ ವಿಡಿಯೋಗಳನ್ನು ಅಪ್‌ಲೋಡ್ ಮಾಡಿದ್ದರು. ಈ ವಿಡಿಯೋಗಳಲ್ಲಿ, “ಕುಟುಂಬ ಸಹಿತರಾಗಿ ಕರಾವಳಿಯ ಧಾರ್ಮಿಕ ಕ್ಷೇತ್ರಗಳಿಗೆ ಹೆಣ್ಣು ಮಕ್ಕಳೊಂದಿಗೆ ಹೋಗಬೇಡಿ. ಹೆಣ್ಣು ಮಕ್ಕಳು ಸುರಕ್ಷಿತವಲ್ಲ, ಕೊಡಚಾದ್ರಿ ಸಹಿತ ಎಲ್ಲ ಕ್ಷೇತ್ರಗಳಲ್ಲಿಯೂ ಇಂತಹ ಪ್ರಕರಣಗಳು ನಡೆದಿರಬಹುದು” ಎಂದು ಅವಹೇಳನಕಾರಿಯಾಗಿ ಹೇಳಿಕೆಗಳನ್ನು ನೀಡಿದ್ದರು.

ಈ ಹೇಳಿಕೆಗಳು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹವು ಎಂದು ದೂರಿನಲ್ಲಿ ಸ್ಪಷ್ಟಪಡಿಸಲಾಗಿದ್ದು, ಈ ಬಗ್ಗೆ ಪೊಲೀಸರು ತಕ್ಷಣ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

“ರಾಹುಲ್ ಗಾಂಧಿಯವರ ತ್ಯಾಗ ದೇಶದ ಯುವಕರಿಗೆ ಮಾದರಿಯಾಗಬೇಕು”: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಲೋಕಸಭೆ ವಿಪಕ್ಷ ನಾಯಕ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಕಷ್ಟ ಮತ್ತು ತ್ಯಾಗ ದೇಶದ ಯುವಕರಿಗೆ ಮಾದರಿಯಾಗಬೇಕು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಇತಿಹಾಸ ನಿರ್ಮಿಸಿದ ದಿವ್ಯಾ ದೇಶಮುಖ್: ಮಹಿಳಾ ಚೆಸ್ ವಿಶ್ವಕಪ್ ಗೆದ್ದು ಗ್ರಾಂಡ್‌ಮಾಸ್ಟರ್ ಪಟ್ಟಕ್ಕೆ!

ಜಾರ್ಜಿಯಾದ ಬಟುಮಿಯಲ್ಲಿ ಇಂದು (ಜುಲೈ 28, 2025) ನಡೆದ FIDE ಮಹಿಳಾ ವಿಶ್ವಕಪ್ 2025 ರಲ್ಲಿ, ನಾಗಪುರದ 19 ವರ್ಷದ ಪ್ರತಿಭಾವಂತ ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಭರ್ಜರಿ ಗೆಲುವು ಸಾಧಿಸಿ ಇತಿಹಾಸ ನಿರ್ಮಿಸಿದ್ದಾರೆ.

ಆ್ಯಸಿಡಿಟಿ, ಮಲಬದ್ಧತೆ, ಅಲ್ಸರ್‌ಗೆ ರಾಮಬಾಣ ‘ಓಂಕಾಳು’: ಇಲ್ಲಿದೆ ಹಲವು ಆರೋಗ್ಯ ಪ್ರಯೋಜನಗಳು!

ಓಂಕಾಳು ಅಡುಗೆಮನೆಯಲ್ಲಿ ಸಾಮಾನ್ಯವಾಗಿ ಬಳಸುವ ಮಸಾಲೆಯಾಗಿದ್ದರೂ, ಇದರ ಸೇವನೆಯಿಂದ ಹತ್ತು ಹಲವು ಆರೋಗ್ಯ ಪ್ರಯೋಜನಗಳಿವೆ.

ಸಾವಿಗೂ ಮುನ್ನ ನಟನಿಗೆ 72 ಕೋಟಿ ಆಸ್ತಿ ದಾನ ಮಾಡಿದ ಮಹಿಳಾ ಅಭಿಮಾನಿ : ಸಂಜಯ್ ದತ್ ಜೀವನದ ಅನಿರೀಕ್ಷಿತ ಘಟನೆ ಬಹಿರಂಗ!

ಬರೋಬ್ಬರಿ 72 ಕೋಟಿ ರೂಪಾಯಿ ಆಸ್ತಿ ತಮ್ಮ ಹೆಸರಿಗೆ ಅನಿರೀಕ್ಷಿತವಾಗಿ ಬಂದಾಗಲೂ, ಬಾಲಿವುಡ್ ನಟ ಸಂಜಯ್ ದತ್ ಅದನ್ನು ಸ್ವೀಕರಿಸದೆ, ನೀಡಿದವರ ಕುಟುಂಬಕ್ಕೆ ವಾಪಸ್ ನೀಡುವ ಮೂಲಕ ತಮ್ಮ ದೊಡ್ಡತನ ಮೆರೆದಿದ್ದಾರೆ.