spot_img

ಇಸ್ರೇಲ್‌ಗೆ ಡೇಟಾ ಸೋರಿಕೆ ಶಂಕೆ: ಜನರಿಗೆ ವಾಟ್ಸಾಪ್ ಅನ್‌ಇನ್‌ಸ್ಟಾಲ್ ಮಾಡಲು ಸೂಚಿಸಿದ ಇರಾನ್

Date:

spot_img
spot_img

ಟೆಹರಾನ್: ವಾಟ್ಸಾಪ್ ಬಳಕೆದಾರರ ವೈಯಕ್ತಿಕ ಮಾಹಿತಿಯನ್ನು ಇಸ್ರೇಲ್‌ಗೆ ಸೋರಿಸುತ್ತಿದೆ ಎಂಬ ಶಂಕೆಯ ಹಿನ್ನೆಲೆಯಲ್ಲಿ, ಇರಾನಿನ ಸರ್ಕಾರಿ ದೂರದರ್ಶನವು ದೇಶದ ನಾಗರಿಕರಿಗೆ ವಾಟ್ಸಾಪ್ ಅನ್ನು ತಮ್ಮ ಮೊಬೈಲ್‌ಗಳಿಂದ ಡಿಲೀಟ್ ಮಾಡಿಕೊಳ್ಳುವಂತೆ ಮಂಗಳವಾರ ಎಚ್ಚರಿಕೆ ನೀಡಿದೆ. ಈ ಆರೋಪಗಳಿಗೆ ಯಾವುದೇ ದೃಢ ಪುರಾವೆಗಳನ್ನು ಸರಕಾರ ಒದಗಿಸಿಲ್ಲ.

ವಾಟ್ಸಾಪ್ ಪರವಾಗಿ ಪ್ರತಿಕ್ರಿಯಿಸಿದ ಮೆಟಾ ಕಂಪನಿಯು, ತಮ್ಮ ಸೇವೆ ಸಂಪೂರ್ಣವಾಗಿ ಎಂಡ್-ಟು-ಎಂಡ್ ಎನ್‌ಕ್ರಿಪ್ಟ್ ಆಗಿದೆ ಮತ್ತು ಸರ್ಕಾರಗಳೂ ಸೇರಿದಂತೆ ಯಾರಿಗೂ ಬಳಕೆದಾರರ ಸಂದೇಶಗಳನ್ನು ನೋಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. “ನಾವು ಯಾರು ಯಾರಿಗೆ ಸಂದೇಶ ಕಳುಹಿಸುತ್ತಿದ್ದಾರೆ ಎಂಬ ಲಾಗ್‌ಗಳನ್ನು ಇಟ್ಟುಕೊಳ್ಳುವುದಿಲ್ಲ. ನಾವು ನಿಮ್ಮ ಸ್ಥಳ ಮಾಹಿತಿಯನ್ನು ಟ್ರ್ಯಾಕ್ ಮಾಡುವುದಿಲ್ಲ ಮತ್ತು ಯಾವುದೇ ಸರ್ಕಾರಕ್ಕೂ ಈ ಮಾಹಿತಿ ಹಂಚುವುದಿಲ್ಲ” ಎಂದು ವಾಟ್ಸಾಪ್ ಹೇಳಿಕೊಂಡಿದೆ.

ಕಾರ್ನೆಲ್ ವಿಶ್ವವಿದ್ಯಾಲಯದ ಸೈಬರ್ ಭದ್ರತಾ ತಜ್ಞ ಗ್ರೆಗೊರಿ ಫಾಲ್ಕೆ ಅಭಿಪ್ರಾಯಪಟ್ಟಂತೆ, ಮೆಟಾಡೇಟಾದ ಆಧಾರದಲ್ಲಿ ಬಳಕೆದಾರರ ವರ್ತನೆಗಳನ್ನು ವಿಶ್ಲೇಷಿಸಲು ಸಾಧ್ಯವಿದೆ. “ವಾಟ್ಸಾಪ್‌ ಬಳಕೆಯ ಮುಕ್ತತೆಯ ಬಗ್ಗೆ ಹಲವು ರಾಷ್ಟ್ರಗಳಿಗೆ ಅನುಮಾನವಿದೆ. ದೇಶೀಯ ಡೇಟಾ ಭದ್ರತೆಗಾಗಿ ಕೆಲವರು ದೇಶದೊಳಗೇ ಡೇಟಾ ಸಂಗ್ರಹಣೆ ಬೇಕೆಂದು ಒತ್ತಾಯಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ವಾಟ್ಸಾಪ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂ ಪ್ಲಾಟ್‌ಫಾರ್ಮ್‌ಗಳನ್ನು ಒಡೆದು ನಡಿಸುತ್ತಿರುವ ಮೆಟಾ ಕಂಪನಿಯ ಸೇವೆಗಳು ಹಿಂದೆ ಇರಾನಿನಲ್ಲಿ ನಿರ್ಬಂಧಿಸಲಾಗಿದ್ದವು. 2022 ರಲ್ಲಿ ಮಹಿಳೆಯೊಬ್ಬರ ಬಂಧನ ಮತ್ತು ಸಾವಿಗೆ ಸಂಬಂಧಿಸಿದ ಸಾರ್ವಜನಿಕ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ವಾಟ್ಸಾಪ್ ಮತ್ತು ಗೂಗಲ್ ಪ್ಲೇ ಮೇಲಿನ ನಿರ್ಬಂಧ ಹೇರಲಾಗಿತ್ತು. ನಂತರದಲ್ಲಿ, 2023 ಕೊನೆ ವೇಳೆಗೆ ಈ ನಿಷೇಧವನ್ನು ಹಿಂಪಡೆಯಲಾಗಿತ್ತು.

ಇದಕ್ಕೂ ಮುನ್ನ ಅನೇಕರು VPN ಮತ್ತು ಪ್ರಾಕ್ಸಿ ಸೇವೆಗಳ ಮೂಲಕ ಈ ಅಪ್ಲಿಕೇಶನ್‌ಗಳನ್ನು ಬಳಸುತ್ತಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ನಿಧನಕ್ಕೆ ದಿನಕರ ಶೆಟ್ಟಿ ಪಳ್ಳಿ ಸಂತಾಪ

ಕಾರ್ಕಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ (48) ಅವರ ಆತ್ಮಹತ್ಯೆಯ ದುರಂತ ಸಾವಿನ ವಿಷಯ ತಿಳಿದು ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಉಪಾಧ್ಯಕ್ಷರಾದ ದಿನಕರ ಶೆಟ್ಟಿ, ಪಳ್ಳಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಪಾಸ್‌ಪೋರ್ಟ್‌ ವಿಷಯಕ್ಕೆ ಜಗಳ: ಮಗಳ ಎದುರೇ ಹೆಂಡತಿಯನ್ನು ಗುಂಡಿಟ್ಟು ಕೊಂದ ಪತಿ

ಪಾಸ್‌ಪೋರ್ಟ್ ವಿಚಾರವಾಗಿ ನಡೆದ ಜಗಳದಲ್ಲಿ ಪತಿಯೋರ್ವ ತನ್ನ ಮಗಳ ಎದುರೇ ಪತ್ನಿಯನ್ನು ಗುಂಡಿಕ್ಕಿ ಕೊಂದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಮಂಗಳವಾರ (ಅ. 14) ಬೆಳಗ್ಗೆ ನಡೆದಿದೆ.

ಜಿಟೆಕ್ಸ್ ಗ್ಲೋಬಲ್ 2025: ವೀಸಾ ಉಲ್ಲಂಘನೆ ಪತ್ತೆಗೆ ಎ.ಐ. ಶಸ್ತ್ರ ಸಜ್ಜಿತ ಸ್ಮಾರ್ಟ್ ಕಾರುಗಳು – ದುಬೈಯಿಂದ ತಂತ್ರಜ್ಞಾನದ ಹೊಸ ದಾಪುಗಾಲು

ದುಬೈನಲ್ಲಿ ನಡೆಯುತ್ತಿರುವ ಜಗತ್ತಿನ ಅತಿದೊಡ್ಡ ತಂತ್ರಜ್ಞಾನ ಪ್ರದರ್ಶನವಾದ ಜಿಟೆಕ್ಸ್ ಗ್ಲೋಬಲ್ 2025 ಮತ್ತೊಮ್ಮೆ ವಿಶ್ವದ ಗಮನವನ್ನು ಸೆಳೆದಿದೆ

ಭಾರತದಲ್ಲಿ AI ಹಬ್‌: $15 ಬಿಲಿಯನ್ ಹೂಡಿಕೆಗೆ ಮುಂದಾದ ಗೂಗಲ್; ಪ್ರಧಾನಿ ಮೋದಿಗೆ ಮಾಹಿತಿ ನೀಡಿದ ಸುಂದರ್ ಪಿಚೈ

ಟೆಕ್ ದೈತ್ಯ ಗೂಗಲ್‌ ಸಂಸ್ಥೆಯ ಮುಖ್ಯಸ್ಥ ಸುಂದರ್ ಪಿಚೈ ಅವರು ಮಂಗಳವಾರ (ಅ. 14) ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಕೃತಕ ಬುದ್ಧಿಮತ್ತೆ (AI) ಕುರಿತು ಮಹತ್ವದ ಮಾತುಕತೆ ನಡೆಸಿದರು.