spot_img

ಡಿಸಿಎಂ ಡಿಕೆ ಶಿವಕುಮಾರ್ ಬೆಂಗಾವಲು ವಾಹನ ಪಲ್ಟಿ; ಇಬ್ಬರಿಗೆ ಗಾಯ

Date:

spot_img

ಮಂಡ್ಯ : ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬೆಂಗಾವಲು ವಾಹನ ಶನಿವಾರ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಪಲ್ಟಿಯಾಗಿ ಅದರಲ್ಲಿದ್ದ ಇಬ್ಬರು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಡಿ.ಕೆ. ಶಿವಕುಮಾರ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ವ್ಯಾಪ್ತಿಯ ಗೌಡಹಳ್ಳಿ ಟಿ.ಎಂ. ಹೊಸೂರು ಬಳಿ, ಎಕ್ಸ್‌ಪ್ರೆಸ್‌ವೇನಲ್ಲಿ ಈ ಘಟನೆ ನಡೆದಿದೆ. ಮೈಸೂರಿನಲ್ಲಿ ನಡೆದ ಸಾಧನಾ ಸಮಾವೇಶದಲ್ಲಿ ಪಾಲ್ಗೊಂಡು ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿಗೆ ಹಿಂದಿರುಗುತ್ತಿದ್ದ ವೇಳೆ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದೆ.

ಬೆಂಗಾವಲು ವಾಹನದಲ್ಲಿದ್ದ ಇಬ್ಬರು ಎಸ್ಕಾರ್ಚ್ ಸಿಬ್ಬಂದಿ ಡಿವೈಡರ್‌ಗೆ ಡಿಕ್ಕಿ ಹೊಡೆದು ವಾಹನ ಪಲ್ಟಿಯಾಗಿದೆ. ಅಪಘಾತದಲ್ಲಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಕ್ಷಣವೇ ಅವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಡಿ.ಕೆ. ಶಿವಕುಮಾರ್ ಅವರು ಕುಳಿತಿದ್ದ ಕಾರು, ಅಪಘಾತಕ್ಕೀಡಾದ ಬೆಂಗಾವಲು ವಾಹನವನ್ನು ಹಿಂಬಾಲಿಸುತ್ತಿತ್ತು. ಎರಡು ಕಾರುಗಳ ನಡುವೆ ಸಾಕಷ್ಟು ಅಂತರವಿದ್ದ ಕಾರಣ, ಡಿ.ಕೆ. ಶಿವಕುಮಾರ್ ಅವರಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ಘಟನೆ ಬಳಿಕ ಅವರು ತಮ್ಮ ಬೆಂಗಳೂರಿನ ಪ್ರಯಾಣವನ್ನು ಮುಂದುವರಿಸಿದರು ಎಂದು ತಿಳಿದುಬಂದಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ನಾಳೆ ಕಲಂಬಾಡಿಯಲ್ಲಿ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಜನನಿ ಮಿತ್ರ ಮಂಡಳಿ (ರಿ) ವಾoಟ್ರಾಯ್ ಪದವು, ರೋಟರಿ ಕ್ಲಬ್ ಕಾರ್ಕಳ, ಜೆಸಿಐ ಕಾರ್ಕಳ ಹಳೆ ವಿದ್ಯಾರ್ಥಿ ಸಂಘ, ಕಲಂಬಾಡಿ ಪದವು ಮತ್ತು ಇನ್ನಿತರ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಮಹಿಳೆಯರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ

ಶಿರೂರು ಮಠದ ಭಾವಿ ಪರ್ಯಾಯ ಶ್ರೀ ವೇದವರ್ಧನ ತೀರ್ಥರಿಗೆ ಬ್ರಾಹ್ಮಣ ಮಹಾಸಭಾದಿಂದ ಫಲ ಕಾಣಿಕೆ ಅರ್ಪಣೆ

ಶಿರೂರು ಮಠದ ಭಾವಿ ಪರ್ಯಾಯ ಪೀಠಾಧಿಪತಿಗಳಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ, ಬೆಂಗಳೂರಿನ ವಿದ್ಯಾಪೀಠದಲ್ಲಿ ನಡೆಯುತ್ತಿರುವ ಚಾತುರ್ಮಾಸ್ಯದ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾದ ವತಿಯಿಂದ ಗೌರವಪೂರ್ವಕವಾಗಿ ಫಲ ಕಾಣಿಕೆ ಅರ್ಪಿಸಿ ಅವರಿಂದ ಆಶೀರ್ವಾದ ಪಡೆಯಲಾಯಿತು.

ಬಿಜೆಪಿ ಟಿಕೆಟ್ ವಂಚನೆ: ಚೈತ್ರಾ ಕುಂದಾಪುರ ವಿರುದ್ಧದ ಪ್ರಕರಣಕ್ಕೆ ಮರುಜೀವ, ಹಣ ಬಿಡುಗಡೆಗೆ ಉದ್ಯಮಿ ಹೈಕೋರ್ಟ್ ಮೊರೆ

ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ₹5 ಕೋಟಿ ವಂಚಿಸಿದ ಆರೋಪದ ಮೇಲೆ ಚೈತ್ರಾ ಕುಂದಾಪುರ, ಅಭಿನವಶ್ರೀ ಹಾಲವೀರಪ್ಪಜ್ಜ ಮತ್ತಿತರರ ವಿರುದ್ಧ ದಾಖಲಾಗಿದ್ದ ಪ್ರಕರಣ ಮತ್ತೆ ಜೀವ ಪಡೆದುಕೊಂಡಿದೆ.

75 ವಿಐಪಿಗಳನ್ನು ಬ್ಲ್ಯಾಕ್‌ಮೇಲ್ ಮಾಡಿದ ‘ಹನಿ ಮನಿ’ ಲೇಡಿ: ಮಹಾರಾಷ್ಟ್ರದಲ್ಲಿ ಸಂಚಲನ ಸೃಷ್ಟಿಸಿದ ‘ಚಿತ್ರಾಂಗಿಣಿ’!

ಮಹಾರಾಷ್ಟ್ರದಲ್ಲಿ 75ಕ್ಕೂ ಹೆಚ್ಚು ವಿಐಪಿಗಳನ್ನು ಹನಿಟ್ರ್ಯಾಪ್ ಮಾಡಿ ಕೋಟ್ಯಂತರ ರೂ. ಸುಲಿಗೆ ಮಾಡಿದ ಮಹಿಳೆಯ ಪ್ರಕರಣ ಭಾರೀ ಕೋಲಾಹಲ ಸೃಷ್ಟಿಸಿದೆ.