ಕಾರ್ಕಳದ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ವೇಳೆ ಸಾವು: ವೈದ್ಯರ ವಿರುದ್ಧ ಕುಟುಂಬಸ್ಥರ ಆಕ್ರೋಶ

Date:

spot_img

ಕಾರ್ಕಳ : ಶಸ್ತ್ರಚಿಕಿತ್ಸೆ ವೇಳೆ ಸಂಭವಿಸಿದ ವಿಪರೀತ ರಕ್ತಸ್ರಾವದಿಂದ 54 ವರ್ಷದ ಮಹಿಳೆ ಸಾವನ್ನಪ್ಪಿದ ಹಿನ್ನೆಲೆಯಲ್ಲಿ, ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂಬ ಆರೋಪದೊಂದಿಗೆ ಮೃತಳ ಕುಟುಂಬಸ್ಥರು ಮತ್ತು ಸ್ಥಳೀಯರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ ಘಟನೆ ಬುಧವಾರ ಸಂಜೆ ಕಾರ್ಕಳದ ಸ್ಪಂದನ ಆಸ್ಪತ್ರೆಯಲ್ಲಿ ನಡೆದಿದೆ.

ಸಾಣೂರು ಗ್ರಾಮದ ನಿವಾಸಿ ಜುಬೇದಾ (54) ಅವರು ಕೆಲ ಸಮಯದಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಸ್ಥಳೀಯ ಕ್ಲಿನಿಕ್‌ನಲ್ಲಿ ತಪಾಸಣೆ ನಡೆಸಿದಾಗ, ಹೊಟ್ಟೆಯಲ್ಲಿ ಗಡ್ಡೆ ಬೆಳೆಯುತ್ತಿರುವುದು ತಿಳಿದುಬಂದು ಶಸ್ತ್ರಚಿಕಿತ್ಸೆಗೆ ಶಿಫಾರಸ್ಸು ಮಾಡಲಾಗಿತ್ತು.

ಬುಧವಾರ ಬೆಳಿಗ್ಗೆ ಅವರನ್ನು ಕಾರ್ಕಳದ ಖಾಸಗಿ ಸ್ಪಂದನ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ಆರಂಭಿಸಲಾಗಿತ್ತು. ಆದರೆ, ಶಸ್ತ್ರಚಿಕಿತ್ಸೆಯ ವೇಳೆ ಅತಿಯಾದ ರಕ್ತಸ್ರಾವ ಸಂಭವಿಸಿದ್ದು, ವೈದ್ಯರು ತುರ್ತು ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಜುಬೇದಾ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.

ರಕ್ತಸಿಕ್ತ ಬಟ್ಟೆಗಳು ಹಾಗೂ ಚಿಕಿತ್ಸೆ ವೇಳೆ ಬಿದ್ದ ರಕ್ತದ ಗುರುತುಗಳು ಆಸ್ಪತ್ರೆಯ ಬೆಡ್ ಬಳಿ ಕಂಡುಬಂದಿರುವುದು , ಸಂಬಂಧಿಕರ ಆಕ್ರೋಶಕ್ಕೆ ಕಾರಣವಾಗಿವೆ. ಆಸ್ಪತ್ರೆಯಲ್ಲಿ ಗುಂಪು ಜಮಾಯಿಸಿದ ಕುಟುಂಬಸ್ಥರು ಮತ್ತು ಸ್ಥಳೀಯರು ವೈದ್ಯರ ವಿರುದ್ಧ ಘೋಷಣೆ ಕೂಗಿ “ನಿರ್ಲಕ್ಷ್ಯದಿಂದ ಸಾವು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಖರ್ಗೆ ವಾಗ್ದಾಳಿ: ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ತೀವ್ರ ಆಕ್ರೋಶ

ನೀಟ್ ಅಕ್ರಮ ಹಾಗೂ ಮಂದಿರದ ಟ್ರಸ್ಟ್ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.