spot_img

ಸೋಶಿಯಲ್ ಮೀಡಿಯಾದಲ್ಲಿ ನಟಿಗೆ ಕೊಲೆ ಬೆದರಿಕೆ: ಮುಂಬಯಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

Date:

spot_img

ಮುಂಬಯಿ: ನಟಿ ಮತ್ತು ಸೋಶಿಯಲ್ ಮೀಡಿಯಾ ಪ್ರಭಾವಿ ಏಂಜೆಲ್ ರಾಯ್ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಅಸಭ್ಯ ಸಂದೇಶಗಳು ಹಾಗೂ ಕೊಲೆ ಬೆದರಿಕೆ ಕಳುಹಿಸಿರುವ ಬಗ್ಗೆ ಬಂಗೂರ್ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಮಾರ್ಚ್ 16ರಂದು ನಟಿಯ ಇನ್‌ಸ್ಟಾಗ್ರಾಮ್ ಖಾತೆಗೆ ಅಪರಿಚಿತ ವ್ಯಕ್ತಿ ಅಶ್ಲೀಲ ಸಂದೇಶಗಳು ಮತ್ತು ಜೀವ ಬೆದರಿಕೆ ಇದ್ದ ಇಮೇಲ್ ಕಳುಹಿಸಿದ್ದಾನೆ. “ನಿನ್ನನ್ನು ಜೀವಂತವಾಗಿ ಸುಟ್ಟು ಹಾಕುತ್ತೇನೆ, ತುಂಡು ತುಂಡುಗಳಾಗಿ ಕತ್ತರಿಸುತ್ತೇನೆ” ಎಂಬ ರೀತಿಯ ಸಂದೇಶಗಳು ಬಂದಿವೆ ಎಂದು ನಟಿ ಪೊಲೀಸರಿಗೆ ದೂರು ನೀಡಿದ್ದಾರೆ.

ನಟಿಯ ಪ್ರಕಾರ, 2023ರ ಆಗಸ್ಟ್ ಮತ್ತು 2024ರ ಮಾರ್ಚ್ ತಿಂಗಳಲ್ಲಿಯೂ ಈ ರೀತಿಯ ಬೆದರಿಕೆಗಳು ಬಂದಿದ್ದವು. ಆಗ ಕೆಲವು ಖಾತೆಗಳನ್ನು ಬ್ಲಾಕ್ ಮಾಡಿದ್ದರೂ, ಹೊಸ ಖಾತೆಗಳ ಮೂಲಕ ಮತ್ತಷ್ಟು ಸಂದೇಶಗಳು ಬಂದಿದ್ದರಿಂದ ಈ ಬಾರಿ ಎಫ್‌ಐಆರ್ ದಾಖಲಿಸಿದ್ದಾರೆ.

ಏಂಜೆಲ್ ರಾಯ್ ಹಲವಾರು ಮ್ಯೂಸಿಕ್ ವಿಡಿಯೋಗಳಲ್ಲಿ ಕಾಣಿಸಿಕೊಂಡಿದ್ದು, ಶೀಘ್ರವೇ ‘ಘೋಟಾಲಾ’ ವೆಬ್ ಸೀರೀಸ್ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಸದ್ಯ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದು, ಸೈಬರ್ ಕ್ರೈಂ ತಂಡವೂ ತನಿಖೆಯಲ್ಲಿ ಸಕ್ರಿಯವಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಅಮೆರಿಕಾದ ಅಂತರರಾಷ್ಟ್ರೀಯ ವಿಧಾಯಕರುಗಳ ಸಮ್ಮೇಳನಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಆಯ್ಕೆ!

ಅಮೆರಿಕಾದ ಬೋಸ್ಟನ್‌ನಲ್ಲಿ ರಾಷ್ಟ್ರೀಯ ಶಾಸಕರ ಸಮಾವೇಶ ಸಂಸ್ಥೆಯ (NLC) ಆಶ್ರಯದಲ್ಲಿ ಕರ್ನಾಟಕ ವಿಧಾನಸಭಾ ಅಧ್ಯಕ್ಷರ (ಸ್ಪೀಕರ್) ನೇತೃತ್ವದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಮಟ್ಟದ ವಿಧಾಯಕರುಗಳ ಸಮ್ಮೇಳನಕ್ಕೆ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ.

ಬೈಲೂರು ಪರಶುರಾಮ ಥೀಮ್ ಪಾರ್ಕ್ ಸ್ಥಗಿತಗೊಂಡ ಕಾಮಗಾರಿ ಯಾವಾಗ ? : ಸುಮಿತ್ ಶೆಟ್ಟಿ ಕೌಡೂರು

ಬೈಲೂರಿನ ಉಮಿಕ್ಕಲ್ ಬೆಟ್ಟದ ಮೇಲೆ ನಿರ್ಮಾಣವಾಗುತ್ತಿದ್ದ ಐತಿಹಾಸಿಕ ಪರಶುರಾಮ ಥೀಮ್ ಪಾರ್ಕ್‌ನ ಕಾಮಗಾರಿಯು ಸ್ಥಗಿತಗೊಂಡಿರುವ ಕುರಿತು ಜಿ.ಪಂ. ಮಾಜಿ ಸದಸ್ಯ ಸುಮಿತ್ ಶೆಟ್ಟಿ ಕೌಡೂರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕಳೆದ 5 ವರ್ಷಗಳಲ್ಲಿ 9 ಲಕ್ಷಕ್ಕೂ ಹೆಚ್ಚು ಭಾರತೀಯರಿಂದ ಪೌರತ್ವ ತ್ಯಾಗ! : ವಿದೇಶಾಂಗ ಸಚಿವರಿಂದ ಮಾಹಿತಿ

ಕಳೆದ ಐದು ವರ್ಷಗಳಲ್ಲಿ 9 ಲಕ್ಷಕ್ಕೂ ಹೆಚ್ಚು ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ್ದಾರೆ ಎಂದು ಸರ್ಕಾರ ರಾಜ್ಯಸಭೆಗೆ ಮಾಹಿತಿ ನೀಡಿದೆ.

ಅತ್ಯಾಚಾರ ಆರೋಪ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ!

ಅತ್ಯಾಚಾರ ಆರೋಪ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.