spot_img

ಯಶ್ ತಾಯಿ ಪುಷ್ಪ ಹೇಳಿಕೆಗೆ ಇನ್ಸ್ಟಾ ಸ್ಟೋರಿಯಲ್ಲಿ ದೀಪಿಕಾ ದಾಸ್ ಖಡಕ್ ಉತ್ತರ

Date:

spot_img

ಬೆಂಗಳೂರು: ನಟ ಯಶ್ ಅವರ ತಾಯಿ ಪುಷ್ಪ ಅರುಣ್ ಕುಮಾರ್ ಅವರು ನೀಡಿದ್ದ ಹೇಳಿಕೆಗಳಿಗೆ ನಟಿ ದೀಪಿಕಾ ದಾಸ್ ಇನ್ಸ್ಟಾಗ್ರಾಮ್ ಸ್ಟೋರಿ ಮೂಲಕ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ಕುಟುಂಬದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಹೊರಬಂದಿವೆ.

ಪುಷ್ಪ ಹೇಳಿದ್ದೇನು?

ತಮ್ಮ ನಿರ್ಮಾಣದ ‘ಕೊತ್ತಲವಾಡಿ’ ಸಿನಿಮಾ ಪ್ರಚಾರದ ಸಂದರ್ಶನವೊಂದರಲ್ಲಿ ಪುಷ್ಪ ಅವರನ್ನು ದೀಪಿಕಾ ದಾಸ್ ಕುರಿತು ಪ್ರಶ್ನಿಸಿದಾಗ, “ದೀಪಿಕಾ ದಾಸ್‌ಗೂ ನಮಗೂ ಆಗಿ ಬರೋದಿಲ್ಲ. ನಮ್ಮ ಸಿನಿಮಾಗೆ ಆಯ್ಕೆ ಮಾಡಿಕೊಳ್ಳಲು ಅವಳು ಯಾವ ದೊಡ್ಡ ಹೀರೋಯಿನ್? ಸಂಬಂಧ ಆದರೂ ಅವಳನ್ನು ದೂರದಲ್ಲಿ ಇಟ್ಟಿದ್ದೀವಿ. ಅವರ ಬಗ್ಗೆ ಯಾಕೆ ಕೇಳ್ತೀರಾ? ನನ್ನ ಮಗ ಬೈಯಲ್ವಾ?” ಎಂದು ಹೇಳಿದ್ದರು. “ದೀಪಿಕಾ ದಾಸ್‌ಗೆ ನನ್ನ ಕಂಡರೆ ಭಯ” ಎಂದು ಕೂಡ ಈ ಹಿಂದೆ ಹೇಳಿದ್ದರು.

ದೀಪಿಕಾ ದಾಸ್ ಖಡಕ್ ಉತ್ತರ

ಪುಷ್ಪ ಅವರ ಈ ಹೇಳಿಕೆಗಳಿಗೆ ದೀಪಿಕಾ ದಾಸ್ ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. “ಹೊಸ ಕಲಾವಿದರನ್ನು ಬೆಳೆಸುವವರು ಮೊದಲು ಅವರಿಗೆ ಬೆಲೆ ಕೊಡುವುದನ್ನು ಕಲಿಯಬೇಕು” ಎಂದು ಅವರು ಹೇಳಿದರು.

“ಇಲ್ಲಿಯವರೆಗೆ ನಾನು ಯಾರ್ ಹೆಸರನ್ನು ಹೇಳಿಕೊಂಡು ಬಂದಿಲ್ಲ, ಮುಂದೆಯೂ ಬರೋದಿಲ್ಲ. ಕೆಲವರಿಗೆ ಬೆಲೆ ಕೊಟ್ಟ ಮಾತ್ರಕ್ಕೆ ಯಾರನ್ನು ಕಂಡು ಯಾರಿಗೂ ಭಯವಿಲ್ಲ, ಅದು ಅಮ್ಮ ಆದರೂ ಸರಿ, ದೊಡ್ಡಮ್ಮ ಆದರೂ ಸರಿ ಅಥವಾ ಪುಷ್ಪಮ್ಮ ಆದರೂ ಸರಿ” ಎಂದು ಅವರು ನೇರವಾಗಿ ಉತ್ತರ ನೀಡಿದ್ದಾರೆ. “ನಾನು ಯಾವ ದೊಡ್ಡ ನಟಿ ಅಲ್ಲದಿದ್ದರೂ ಅಥವಾ ಏನೂ ಸಾಧನೆ ಮಾಡದಿದ್ದರೂ ನನ್ನ ಬಗ್ಗೆ ಹೀನಾಯವಾಗಿ ಮಾತನಾಡುವ ಹಕ್ಕು ಯಾರಿಗೂ ಇಲ್ಲ” ಎಂದು ದೀಪಿಕಾ ಸ್ಪಷ್ಟಪಡಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

‘ಎಲ್ಲ ಆರೋಪಗಳಿಂದ ತೊಳೆದಂತಾಗಿದೆʼ: ಮಾಸ್ಕ್​ಮ್ಯಾನ್​ ಬಂಧನಕ್ಕೆ ವೀರೇಂದ್ರ ಹೆಗ್ಗಡೆ ಪ್ರತಿಕ್ರಿಯೆ

ಧರ್ಮಸ್ಥಳದಲ್ಲಿ ಶವಗಳನ್ನು ಹೂತಿದ್ದಾಗಿ ಸುಳ್ಳು ಹೇಳಿಕೆ ನೀಡಿದ್ದ ಚಿನ್ನಯ್ಯ ಅಲಿಯಾಸ್ ಮಾಸ್ಕ್​ಮ್ಯಾನ್​ನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿರುವ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಪ್ರತಿಕ್ರಿಯಿಸಿದ್ದಾರೆ.

ಹೆಬ್ರಿಯ ಅರ್ಧ ನಾರೀಶ್ವರ ದೇವಸ್ಥಾನದ ಬಾಕಿ ಮಾರು ಗದ್ದೆಯಲ್ಲಿ “ಅಷ್ಟಮಿದ ಕೆಸರ್ದ ಓಕುಳಿ ” ಕಾರ್ಯಕ್ರಮ

' ಕಾರ್ಕಳ ಟೈಗರ್ಸ್ ' ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗ, ಎಸ್ ಆರ್ ಎಜುಕಷನ್ ಟ್ರಸ್ಟ್ (ರಿ ) ಹೆಬ್ರಿ ಮತ್ತು ಜಿ. ಎಸ್. ಬಿ ಯುವಜನ ಸಭಾ ಹೆಬ್ರಿ ಇವರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ "ಅಷ್ಟಮಿದ ಕೆಸರ್ದ ಓಕುಳಿ " ಎಂಬ ವಿಭಿನ್ನ ಕಾರ್ಯಕ್ರಮವನ್ನು ಆಗಸ್ಟ್ 24 ರಂದು ಹೆಬ್ರಿಯ ಅರ್ಧ ನಾರೀಶ್ವರ ದೇವಸ್ಥಾನದ ಬಾಕಿ ಮಾರು ಗದ್ದೆಯಲ್ಲಿ ಹಮ್ಮಿಕೊಳ್ಳಲಾಗಿದೆ .

ಧರ್ಮಸ್ಥಳ ವಿವಾದ: ಎರಡು ಹಿಂದುತ್ವ ಶಕ್ತಿಗಳ ನಡುವಿನ ಹೋರಾಟ ಎಂದು ಬಿ.ಕೆ. ಹರಿಪ್ರಸಾದ್ ಬಣ್ಣನೆ

ಧರ್ಮಸ್ಥಳ ಪ್ರಕರಣದ ಕುರಿತು ನಡೆಯುತ್ತಿರುವ ಚರ್ಚೆಗಳಿಗೆ ಸಂಬಂಧಿಸಿದಂತೆ, ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಮಹತ್ವದ ಹೇಳಿಕೆ

ವೈದ್ಯರು ಹಣಕ್ಕೆ ಬೇಡಿಕೆ ಇಟ್ಟಿದ್ದರಿಂದ ಚಿಕಿತ್ಸೆ ವಿಳಂಬ: ಅಮಾಯಕ ನವಜಾತ ಶಿಶುವಿನ ಸಾವು

ಹೆರಿಗೆ ಸಮಯದಲ್ಲಿ ವೈದ್ಯರು ಹಣಕ್ಕೆ ಬೇಡಿಕೆಯಿಟ್ಟು ಚಿಕಿತ್ಸೆಯಲ್ಲಿ ವಿಳಂಬ ಮಾಡಿದ್ದರಿಂದ, ನವಜಾತ ಶಿಶು ಮೃತಪಟ್ಟಿದೆ ಎಂದು ಆರೋಪಿಸಿ, ತಂದೆಯೊಬ್ಬರು ಮಗುವಿನ ಮೃತದೇಹವನ್ನು ಚೀಲದಲ್ಲಿ ಇರಿಸಿಕೊಂಡು ಜಿಲ್ಲಾಧಿಕಾರಿ ಕಚೇರಿಗೆ ಬಂದಿರುವ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ